Politics

“ನನ್ನ ಮೇಲೆ ರೇಪ್ ಕೇಸ್ ಹಾಕಿಸಿದ್ದು ಡಿ.ಕೆ. ಶಿವಕುಮಾರ್” – ಶಾಸಕ ಮುನಿರತ್ನ ಸ್ಫೋಟಕ ಆರೋಪ

ಬೆಂಗಳೂರು: “ನನ್ನ ವಿರುದ್ಧ ರೇಪ್ ಕೇಸ್ ಹಾಕಲು ಸಿಬಿಐ ತನಿಖೆ ಮಾಡಿಸಿದ್ದವರು ಡಿ.ಕೆ. ಶಿವಕುಮಾರ್” ಎಂದು ಶಾಸಕ ಮುನಿರತ್ನ ಗಂಭೀರ ಆರೋಪ ಮಾಡಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಪೊಲೀಸ್ ಕಮಿಷನರ್‌ಗೆ ಹೇಳಿ ಡಿಸಿಎಂ ಡಿ.ಕೆ. ಶಿವಕುಮಾರ್ ನನ್ನ ಮೇಲೆ ರೇಪ್ ಕೇಸ್ ಹಾಕಿಸಿದ್ದರು” ಎಂದು ಗಂಭೀರ ಆರೋಪ ಮಾಡಿದರು.

ಆರೋಪ ಮತ್ತು ಶೋಕನಾಟಕ

“ಅಟ್ರಾಸಿಟಿ ಕೇಸಿನಲ್ಲಿ ಕೋರ್ಟ್‌ಗೆ ಹಾಜರಾದಾಗ, ರಾಜೀನಾಮೆ ಕೊಟ್ಟರೆ ರೇಪ್ ಕೇಸ್ ಹಾಕಲ್ಲ ಎಂದು ಡಿವೈಎಸ್‌ಪಿ ಧರ್ಮೇಂದ್ರ ನೇರವಾಗಿ ಹೇಳಿದ್ದರು. ನನ್ನ ವಿರುದ್ಧ ಸಿಬಿಐ ತನಿಖೆ ನಡೆಸಿ ಈ ಕೇಸ್ ದಾಖಲಿಸಲಾಗಿದೆ” ಎಂದು ಮುನಿರತ್ನ ಸ್ಫೋಟಕ ಆರೋಪ ಮಾಡಿದರು.

“ನನಗೆ ಮೊಟ್ಟೆ ಎಸೆಯಲು, ಮಸಿ ಬಳಿಯಲು ಎಲ್ಲಕ್ಕೂ ರೇಟ್ ಫಿಕ್ಸ್ ಮಾಡಿದ್ದಾರೆ. ಲೋಕಸಭೆ ಚುನಾವಣೆ ಮುಗಿದ ನಂತರ ಈ ರೀತಿಯಾಗಿ ನನಗೆ ಟಾರ್ಗೆಟ್ ಮಾಡಿದ್ದಾರೆ” ಎಂದು ಅಸಹನೆ ವ್ಯಕ್ತಪಡಿಸಿದರು.

“ಇದೇ ರೀತಿ ರಮೇಶ್ ಜಾರಕಿಹೊಳಿ, ರೇವಣ್ಣ, ಸೂರಜ್ ರೇವಣ್ಣ ಮುಂತಾದವರಿಗೆ ಟಾರ್ಗೆಟ್ ಮಾಡಲಾಗಿದೆ. ಈಗ ನನ್ನ ಮೇಲೂ similar ತಂತ್ರ ಹಾಸಲಾಗಿದೆ” ಎಂದು ಹೇಳಿದರು.

ನೀಚ ರಾಜಕೀಯದ ಆರೋಪ

“ಡಿ.ಕೆ. ಶಿವಕುಮಾರ್ ಮಹಾ ಪಾಪದ ಕೆಲಸ ಮಾಡಿದ್ದಾರೆ. ನೀವೇ ಮಾಡಿದ ಈ ಪಾಪ ನಿಮ್ಮನ್ನು ಬಿಡುವುದಿಲ್ಲ. ನಾನು ರೇಪ್ ಮಾಡಿದ್ದರೆ ಸರ್ವನಾಶ ಆಗುತ್ತೇನೆ, ಹುಳ ಬಿದ್ದು ಸಾಯುತ್ತೇನೆ. ಆದರೆ ನಾನು ಮಾಡಿಲ್ಲ ಎಂದರೆ, ನೀವು ಹುಳ ಬಿದ್ದು ಸಾಯುತ್ತೀರಾ?” ಎಂದು ಮುನಿರತ್ನ ಕಿಡಿಕಾರಿದರು.

“ನಾನು ಆತ್ಮಹತ್ಯೆ ಮಾಡಿಕೊಳ್ಳಬೇಕಾ? ಇಲ್ಲವೇ ನನ್ನ ಕೊಲೆ ಮಾಡಲಾಗುತ್ತಾ?” ಎಂದು ಭಾವೋದ್ರಿಕ್ತವಾದ ಅವರು, “ಡಿ.ಕೆ. ಶಿವಕುಮಾರ್, ನೀವು 20 ರೂಪಾಯಿ ಸಹ ಇಲ್ಲದಿದ್ದಾಗ ಸಹಾಯ ಮಾಡಿದವರು ರಾಜಣ್ಣ. ಆದರೆ ಇಂದು ನೀವು ಈ ಮಟ್ಟಿಗೆ ಇಳಿದಿದ್ದೀರಿ” ಎಂದು ಬೇಸರ ವ್ಯಕ್ತಪಡಿಸಿದರು.

“ಇದು ಡಿಕೆಶಿ ಹನಿಟ್ರ್ಯಾಪ್ ಟೀಮ್. ಅವರು ರಾತ್ರಿ 2 ಗಂಟೆಗೆ ಹನಿಟ್ರ್ಯಾಪ್‌ ಟೀಮ್ ಜೊತೆ ಸಭೆ ನಡೆಸುತ್ತಾರೆ” ಎಂದು ಗಂಭೀರ ಆರೋಪ ಮಾಡಿದರು.

ಈ ಬೆಳವಣಿಗೆಯ ನಂತರ, ರಾಜ್ಯ ರಾಜಕೀಯದಲ್ಲಿ ಮತ್ತೆ ದೊಡ್ಡ ಸಂಚಲನ ಸೃಷ್ಟಿಯಾಗಿದೆ.

ಭ್ರಷ್ಟರ ಬೇಟೆ

Recent Posts

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

2 weeks ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

3 weeks ago

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

3 months ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

3 months ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

5 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

5 months ago