Politics

“ನನ್ನ ಮೇಲೆ ರೇಪ್ ಕೇಸ್ ಹಾಕಿಸಿದ್ದು ಡಿ.ಕೆ. ಶಿವಕುಮಾರ್” – ಶಾಸಕ ಮುನಿರತ್ನ ಸ್ಫೋಟಕ ಆರೋಪ

ಬೆಂಗಳೂರು: “ನನ್ನ ವಿರುದ್ಧ ರೇಪ್ ಕೇಸ್ ಹಾಕಲು ಸಿಬಿಐ ತನಿಖೆ ಮಾಡಿಸಿದ್ದವರು ಡಿ.ಕೆ. ಶಿವಕುಮಾರ್” ಎಂದು ಶಾಸಕ ಮುನಿರತ್ನ ಗಂಭೀರ ಆರೋಪ ಮಾಡಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಪೊಲೀಸ್ ಕಮಿಷನರ್‌ಗೆ ಹೇಳಿ ಡಿಸಿಎಂ ಡಿ.ಕೆ. ಶಿವಕುಮಾರ್ ನನ್ನ ಮೇಲೆ ರೇಪ್ ಕೇಸ್ ಹಾಕಿಸಿದ್ದರು” ಎಂದು ಗಂಭೀರ ಆರೋಪ ಮಾಡಿದರು.

ಆರೋಪ ಮತ್ತು ಶೋಕನಾಟಕ

“ಅಟ್ರಾಸಿಟಿ ಕೇಸಿನಲ್ಲಿ ಕೋರ್ಟ್‌ಗೆ ಹಾಜರಾದಾಗ, ರಾಜೀನಾಮೆ ಕೊಟ್ಟರೆ ರೇಪ್ ಕೇಸ್ ಹಾಕಲ್ಲ ಎಂದು ಡಿವೈಎಸ್‌ಪಿ ಧರ್ಮೇಂದ್ರ ನೇರವಾಗಿ ಹೇಳಿದ್ದರು. ನನ್ನ ವಿರುದ್ಧ ಸಿಬಿಐ ತನಿಖೆ ನಡೆಸಿ ಈ ಕೇಸ್ ದಾಖಲಿಸಲಾಗಿದೆ” ಎಂದು ಮುನಿರತ್ನ ಸ್ಫೋಟಕ ಆರೋಪ ಮಾಡಿದರು.

“ನನಗೆ ಮೊಟ್ಟೆ ಎಸೆಯಲು, ಮಸಿ ಬಳಿಯಲು ಎಲ್ಲಕ್ಕೂ ರೇಟ್ ಫಿಕ್ಸ್ ಮಾಡಿದ್ದಾರೆ. ಲೋಕಸಭೆ ಚುನಾವಣೆ ಮುಗಿದ ನಂತರ ಈ ರೀತಿಯಾಗಿ ನನಗೆ ಟಾರ್ಗೆಟ್ ಮಾಡಿದ್ದಾರೆ” ಎಂದು ಅಸಹನೆ ವ್ಯಕ್ತಪಡಿಸಿದರು.

“ಇದೇ ರೀತಿ ರಮೇಶ್ ಜಾರಕಿಹೊಳಿ, ರೇವಣ್ಣ, ಸೂರಜ್ ರೇವಣ್ಣ ಮುಂತಾದವರಿಗೆ ಟಾರ್ಗೆಟ್ ಮಾಡಲಾಗಿದೆ. ಈಗ ನನ್ನ ಮೇಲೂ similar ತಂತ್ರ ಹಾಸಲಾಗಿದೆ” ಎಂದು ಹೇಳಿದರು.

ನೀಚ ರಾಜಕೀಯದ ಆರೋಪ

“ಡಿ.ಕೆ. ಶಿವಕುಮಾರ್ ಮಹಾ ಪಾಪದ ಕೆಲಸ ಮಾಡಿದ್ದಾರೆ. ನೀವೇ ಮಾಡಿದ ಈ ಪಾಪ ನಿಮ್ಮನ್ನು ಬಿಡುವುದಿಲ್ಲ. ನಾನು ರೇಪ್ ಮಾಡಿದ್ದರೆ ಸರ್ವನಾಶ ಆಗುತ್ತೇನೆ, ಹುಳ ಬಿದ್ದು ಸಾಯುತ್ತೇನೆ. ಆದರೆ ನಾನು ಮಾಡಿಲ್ಲ ಎಂದರೆ, ನೀವು ಹುಳ ಬಿದ್ದು ಸಾಯುತ್ತೀರಾ?” ಎಂದು ಮುನಿರತ್ನ ಕಿಡಿಕಾರಿದರು.

“ನಾನು ಆತ್ಮಹತ್ಯೆ ಮಾಡಿಕೊಳ್ಳಬೇಕಾ? ಇಲ್ಲವೇ ನನ್ನ ಕೊಲೆ ಮಾಡಲಾಗುತ್ತಾ?” ಎಂದು ಭಾವೋದ್ರಿಕ್ತವಾದ ಅವರು, “ಡಿ.ಕೆ. ಶಿವಕುಮಾರ್, ನೀವು 20 ರೂಪಾಯಿ ಸಹ ಇಲ್ಲದಿದ್ದಾಗ ಸಹಾಯ ಮಾಡಿದವರು ರಾಜಣ್ಣ. ಆದರೆ ಇಂದು ನೀವು ಈ ಮಟ್ಟಿಗೆ ಇಳಿದಿದ್ದೀರಿ” ಎಂದು ಬೇಸರ ವ್ಯಕ್ತಪಡಿಸಿದರು.

“ಇದು ಡಿಕೆಶಿ ಹನಿಟ್ರ್ಯಾಪ್ ಟೀಮ್. ಅವರು ರಾತ್ರಿ 2 ಗಂಟೆಗೆ ಹನಿಟ್ರ್ಯಾಪ್‌ ಟೀಮ್ ಜೊತೆ ಸಭೆ ನಡೆಸುತ್ತಾರೆ” ಎಂದು ಗಂಭೀರ ಆರೋಪ ಮಾಡಿದರು.

ಈ ಬೆಳವಣಿಗೆಯ ನಂತರ, ರಾಜ್ಯ ರಾಜಕೀಯದಲ್ಲಿ ಮತ್ತೆ ದೊಡ್ಡ ಸಂಚಲನ ಸೃಷ್ಟಿಯಾಗಿದೆ.

ಭ್ರಷ್ಟರ ಬೇಟೆ

Recent Posts

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

6 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

6 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago

ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು: ಖಾಸಗಿ ಆಸ್ಪತ್ರೆ ಸಿಬ್ಬಂದಿ ವಶಕ್ಕೆ

ಬೆಂಗಳೂರು: ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು ಮಾಡಿದ್ದ ಆರೋಪದ ಮೇಲೆ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು…

2 days ago