ಬೆಂಗಳೂರು: “ನನ್ನ ವಿರುದ್ಧ ರೇಪ್ ಕೇಸ್ ಹಾಕಲು ಸಿಬಿಐ ತನಿಖೆ ಮಾಡಿಸಿದ್ದವರು ಡಿ.ಕೆ. ಶಿವಕುಮಾರ್” ಎಂದು ಶಾಸಕ ಮುನಿರತ್ನ ಗಂಭೀರ ಆರೋಪ ಮಾಡಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಪೊಲೀಸ್ ಕಮಿಷನರ್ಗೆ ಹೇಳಿ ಡಿಸಿಎಂ ಡಿ.ಕೆ. ಶಿವಕುಮಾರ್ ನನ್ನ ಮೇಲೆ ರೇಪ್ ಕೇಸ್ ಹಾಕಿಸಿದ್ದರು” ಎಂದು ಗಂಭೀರ ಆರೋಪ ಮಾಡಿದರು.
ಆರೋಪ ಮತ್ತು ಶೋಕನಾಟಕ
“ಅಟ್ರಾಸಿಟಿ ಕೇಸಿನಲ್ಲಿ ಕೋರ್ಟ್ಗೆ ಹಾಜರಾದಾಗ, ರಾಜೀನಾಮೆ ಕೊಟ್ಟರೆ ರೇಪ್ ಕೇಸ್ ಹಾಕಲ್ಲ ಎಂದು ಡಿವೈಎಸ್ಪಿ ಧರ್ಮೇಂದ್ರ ನೇರವಾಗಿ ಹೇಳಿದ್ದರು. ನನ್ನ ವಿರುದ್ಧ ಸಿಬಿಐ ತನಿಖೆ ನಡೆಸಿ ಈ ಕೇಸ್ ದಾಖಲಿಸಲಾಗಿದೆ” ಎಂದು ಮುನಿರತ್ನ ಸ್ಫೋಟಕ ಆರೋಪ ಮಾಡಿದರು.
“ನನಗೆ ಮೊಟ್ಟೆ ಎಸೆಯಲು, ಮಸಿ ಬಳಿಯಲು ಎಲ್ಲಕ್ಕೂ ರೇಟ್ ಫಿಕ್ಸ್ ಮಾಡಿದ್ದಾರೆ. ಲೋಕಸಭೆ ಚುನಾವಣೆ ಮುಗಿದ ನಂತರ ಈ ರೀತಿಯಾಗಿ ನನಗೆ ಟಾರ್ಗೆಟ್ ಮಾಡಿದ್ದಾರೆ” ಎಂದು ಅಸಹನೆ ವ್ಯಕ್ತಪಡಿಸಿದರು.
“ಇದೇ ರೀತಿ ರಮೇಶ್ ಜಾರಕಿಹೊಳಿ, ರೇವಣ್ಣ, ಸೂರಜ್ ರೇವಣ್ಣ ಮುಂತಾದವರಿಗೆ ಟಾರ್ಗೆಟ್ ಮಾಡಲಾಗಿದೆ. ಈಗ ನನ್ನ ಮೇಲೂ similar ತಂತ್ರ ಹಾಸಲಾಗಿದೆ” ಎಂದು ಹೇಳಿದರು.
ನೀಚ ರಾಜಕೀಯದ ಆರೋಪ
“ಡಿ.ಕೆ. ಶಿವಕುಮಾರ್ ಮಹಾ ಪಾಪದ ಕೆಲಸ ಮಾಡಿದ್ದಾರೆ. ನೀವೇ ಮಾಡಿದ ಈ ಪಾಪ ನಿಮ್ಮನ್ನು ಬಿಡುವುದಿಲ್ಲ. ನಾನು ರೇಪ್ ಮಾಡಿದ್ದರೆ ಸರ್ವನಾಶ ಆಗುತ್ತೇನೆ, ಹುಳ ಬಿದ್ದು ಸಾಯುತ್ತೇನೆ. ಆದರೆ ನಾನು ಮಾಡಿಲ್ಲ ಎಂದರೆ, ನೀವು ಹುಳ ಬಿದ್ದು ಸಾಯುತ್ತೀರಾ?” ಎಂದು ಮುನಿರತ್ನ ಕಿಡಿಕಾರಿದರು.
“ನಾನು ಆತ್ಮಹತ್ಯೆ ಮಾಡಿಕೊಳ್ಳಬೇಕಾ? ಇಲ್ಲವೇ ನನ್ನ ಕೊಲೆ ಮಾಡಲಾಗುತ್ತಾ?” ಎಂದು ಭಾವೋದ್ರಿಕ್ತವಾದ ಅವರು, “ಡಿ.ಕೆ. ಶಿವಕುಮಾರ್, ನೀವು 20 ರೂಪಾಯಿ ಸಹ ಇಲ್ಲದಿದ್ದಾಗ ಸಹಾಯ ಮಾಡಿದವರು ರಾಜಣ್ಣ. ಆದರೆ ಇಂದು ನೀವು ಈ ಮಟ್ಟಿಗೆ ಇಳಿದಿದ್ದೀರಿ” ಎಂದು ಬೇಸರ ವ್ಯಕ್ತಪಡಿಸಿದರು.
“ಇದು ಡಿಕೆಶಿ ಹನಿಟ್ರ್ಯಾಪ್ ಟೀಮ್. ಅವರು ರಾತ್ರಿ 2 ಗಂಟೆಗೆ ಹನಿಟ್ರ್ಯಾಪ್ ಟೀಮ್ ಜೊತೆ ಸಭೆ ನಡೆಸುತ್ತಾರೆ” ಎಂದು ಗಂಭೀರ ಆರೋಪ ಮಾಡಿದರು.
ಈ ಬೆಳವಣಿಗೆಯ ನಂತರ, ರಾಜ್ಯ ರಾಜಕೀಯದಲ್ಲಿ ಮತ್ತೆ ದೊಡ್ಡ ಸಂಚಲನ ಸೃಷ್ಟಿಯಾಗಿದೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…