Latest

ಅವ್ಯವಸ್ಥೆಗಿಡಾದ ದಲಿತ ಕಾಲೋನಿ; ನಿದ್ರೆಗೆ ಜಾರಿದನಾ ಪಿಡಿಓ?

ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ನಾಯನೆಗಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ನಾಯನೆಗಲಿ ಗ್ರಾಮದ ದಲಿತ ಕಾಲೋನಿಯ ದುಸ್ಥಿತಿ ಇದು, ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಗ್ರಾಮದ ಕೊಳಚೆ ನೀರೆಲ್ಲ ರಸ್ತೆಗೆ ಬಂದು ನಿಂತು ರಸ್ತೆಯೆಲ್ಲ ಕೊಳಚೆಯಿಂದ ಆವೃತಿಯಾಗಿದೆ.
ದಿನನಿತ್ಯ ಓಡಾಡಲು ಸ್ಥಳೀಯರಿಗೆ ತೊಂದರೆಯಾಗುತ್ತಿದ್ದು, ಅಧಿಕಾರಿಗಳು ಬರೋದು ಹೋಗೋದು ಬಿಟ್ಟರೆ ಕೆಲಸ ಮಾತ್ರ ಶೂನ್ಯವಾಗಿದೆ. ಪಿಡಿಓ ಮುತ್ತಣ್ಣ ಡೋಣಿ ಸರಿಯಾಗಿ ದಲಿತ ಕಾಲೋನಿಯತ್ತ ಸಹ ಮುಖ ಮಾಡಿರುವುದಿಲ್ಲ. ಇವನೇ ಬೇರೆ ಇವನ ಕೆಲಸನೇ ಬೇರೆ ಎನ್ನುವಂತಾಗಿದೆ.
ಪಿಡಿಓ ಗೆ ಸರ್ಕಾರದ ಸಂಬಳ ಬಂದರೆ ಸಾಕು, ಊರೇ ಹಾಳಾಗಿ ಹೋಗಿ ಯಾವುದೇ ರೋಗ ಬಂದರು ಸರಿ ಅವರುಗಳಿಗೇನು ಚಿಂತೆಯಿಲ್ಲ, ಅವ್ಯವಸ್ಥೆಯನ್ನು ಯಾರು ಪ್ರಶ್ನಿಸಿದ ಕಾರಣ ನಿರ್ಲಕ್ಷ್ಯ ತೋರುವ ನಾಲಾಯಕ್ ಪಿಡಿಓ ಮುತ್ತಣ್ಣ ಡೋಣಿಗೆ ಲಂಗು ಇಲ್ಲ ಲಗಾಮು ಇಲ್ಲದಂತಾಗಿದೆ.
ಸ್ವಚ್ಛತೆ ಇಲ್ಲದೆ ದಲಿತ ಕಾಲೋನಿ ಜನರಿಗೆ ಡೆಂಗ್ಯೂ,ಮಲೇರಿಯಾ, ಕಾಲರಾ ನಂತಹ ಸಾಂಕ್ರಾಮಿಕ ರೋಗಗಳ ಭೀತಿ ಕಾಡುತ್ತಿದೆ. ಅಲ್ಲಿ ವಾಸವಿರುವ ಸ್ಥಳೀಯರು ಗ್ರಾಮ ಪಂಚಾಯತಿಗೆ ಹಾಗೂ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಇಲ್ಲಿನ ಗ್ರಾಮ ಪಂಚಾಯತಿ ಪಿಡಿಓ ಏನು ಕೆಲಸ ಮಾಡ್ತಾ ಇದ್ದಾರೆ ಎಂಬುದೇ ತಿಳಿಯದಾಗಿದೆ. ಗ್ರಾಮದ ಸ್ವಚ್ಛತೆ ಬಗ್ಗೆ ಕಾಳಜಿ ವಹಿಸದ ಪಿಡಿಓ ಇನ್ನು ಅಭಿವೃದ್ದಿ ಏನು ಮಾಡುತ್ತಾನೆ ಎಂಬುದು ಪ್ರಶ್ನೆಯಾಗಿದೆ?

ವರದಿ:ಸಂಗಪ್ಪ ಚಲವಾದಿ

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago