ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ನಾಯನೆಗಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ನಾಯನೆಗಲಿ ಗ್ರಾಮದ ದಲಿತ ಕಾಲೋನಿಯ ದುಸ್ಥಿತಿ ಇದು, ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಗ್ರಾಮದ ಕೊಳಚೆ ನೀರೆಲ್ಲ ರಸ್ತೆಗೆ ಬಂದು ನಿಂತು ರಸ್ತೆಯೆಲ್ಲ ಕೊಳಚೆಯಿಂದ ಆವೃತಿಯಾಗಿದೆ.
ದಿನನಿತ್ಯ ಓಡಾಡಲು ಸ್ಥಳೀಯರಿಗೆ ತೊಂದರೆಯಾಗುತ್ತಿದ್ದು, ಅಧಿಕಾರಿಗಳು ಬರೋದು ಹೋಗೋದು ಬಿಟ್ಟರೆ ಕೆಲಸ ಮಾತ್ರ ಶೂನ್ಯವಾಗಿದೆ. ಪಿಡಿಓ ಮುತ್ತಣ್ಣ ಡೋಣಿ ಸರಿಯಾಗಿ ದಲಿತ ಕಾಲೋನಿಯತ್ತ ಸಹ ಮುಖ ಮಾಡಿರುವುದಿಲ್ಲ. ಇವನೇ ಬೇರೆ ಇವನ ಕೆಲಸನೇ ಬೇರೆ ಎನ್ನುವಂತಾಗಿದೆ.
ಪಿಡಿಓ ಗೆ ಸರ್ಕಾರದ ಸಂಬಳ ಬಂದರೆ ಸಾಕು, ಊರೇ ಹಾಳಾಗಿ ಹೋಗಿ ಯಾವುದೇ ರೋಗ ಬಂದರು ಸರಿ ಅವರುಗಳಿಗೇನು ಚಿಂತೆಯಿಲ್ಲ, ಅವ್ಯವಸ್ಥೆಯನ್ನು ಯಾರು ಪ್ರಶ್ನಿಸಿದ ಕಾರಣ ನಿರ್ಲಕ್ಷ್ಯ ತೋರುವ ನಾಲಾಯಕ್ ಪಿಡಿಓ ಮುತ್ತಣ್ಣ ಡೋಣಿಗೆ ಲಂಗು ಇಲ್ಲ ಲಗಾಮು ಇಲ್ಲದಂತಾಗಿದೆ.
ಸ್ವಚ್ಛತೆ ಇಲ್ಲದೆ ದಲಿತ ಕಾಲೋನಿ ಜನರಿಗೆ ಡೆಂಗ್ಯೂ,ಮಲೇರಿಯಾ, ಕಾಲರಾ ನಂತಹ ಸಾಂಕ್ರಾಮಿಕ ರೋಗಗಳ ಭೀತಿ ಕಾಡುತ್ತಿದೆ. ಅಲ್ಲಿ ವಾಸವಿರುವ ಸ್ಥಳೀಯರು ಗ್ರಾಮ ಪಂಚಾಯತಿಗೆ ಹಾಗೂ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಇಲ್ಲಿನ ಗ್ರಾಮ ಪಂಚಾಯತಿ ಪಿಡಿಓ ಏನು ಕೆಲಸ ಮಾಡ್ತಾ ಇದ್ದಾರೆ ಎಂಬುದೇ ತಿಳಿಯದಾಗಿದೆ. ಗ್ರಾಮದ ಸ್ವಚ್ಛತೆ ಬಗ್ಗೆ ಕಾಳಜಿ ವಹಿಸದ ಪಿಡಿಓ ಇನ್ನು ಅಭಿವೃದ್ದಿ ಏನು ಮಾಡುತ್ತಾನೆ ಎಂಬುದು ಪ್ರಶ್ನೆಯಾಗಿದೆ?
ವರದಿ:ಸಂಗಪ್ಪ ಚಲವಾದಿ
ಹೈದರಾಬಾದ್: ಬಣ್ಣದ ಲೋಕದಲ್ಲಿ ಮತ್ತೆ ವಂಚನೆ ಆರೋಪ ಕೇಳಿಬಂದಿದ್ದು, ತೆಲುಗು ಬಿಗ್ಬಾಸ್ ಮೂಲಕ ಜನಪ್ರಿಯತೆ ಪಡೆದ ನಟಿ ಆಶು ರೆಡ್ಡಿ…
ಧಾರವಾಡ: 20 ವರ್ಷದ ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇದೀಗ ಪೊಲೀಸರ ವಿರುದ್ಧ…
ಶೇಕ್ಪೇಟ್: ಪಶುಗಳ ಚಿಕಿತ್ಸೆಯ ಹೆಸರಿನಲ್ಲಿ ನಡೆದಿದ್ದ ಅಮಾನವೀಯ ದಂಧೆಯೊಂದು ಬೆಳಕಿಗೆ ಬಂದು ಸಾರ್ವಜನಿಕರಲ್ಲಿ ಆಕ್ರೋಶ ಹುಟ್ಟಿಸಿದೆ. ಖಾಸಗಿ ಪಶು ವೈದ್ಯಕೀಯ…
ಧಾರವಾಡ: ಗಾಂಜಾ ಪ್ರಕರಣದಲ್ಲಿ ಹೆಸರು ಸೇರಿಸಲಾಗುತ್ತದೆ ಎಂಬ ಭಯದಿಂದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಈ ಪ್ರಕರಣದಲ್ಲಿ…
ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದ ಮೇರೆಗೆ ಆರು ವಿದೇಶಿ ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ…
ಬೆಂಗಳೂರು: ರಾಜ್ಯ ಕಾಂಗ್ರೆಸ್ನೊಳಗಿನ ನಾಯಕತ್ವದ ಗೊಂದಲ ಮತ್ತು ಅಸಮಾಧಾನದ ನಡುವೆಯೇ ಅಹಿಂದ ಸಂಘಟನೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಪಕ್ಷವು ಅಹಿಂದ…