Latest

ರಾಯಲ್ ಎನ್‌ಫೀಲ್ಡ್ ಬೈಕ್ ಓಡಿಸಿದ ಕಾರಣಕ್ಕೆ ದಲಿತ ವಿದ್ಯಾರ್ಥಿಯ ಕೈ ಕತ್ತರಿಸಿದ ದುಷ್ಕರ್ಮಿಗಳು!

ತಮಿಳುನಾಡಿನ ಶಿವಗಂಗೈ ಜಿಲ್ಲೆಯ ಮೇಳಪಿಡವೂರು ಗ್ರಾಮದಲ್ಲಿ ಜಾತಿ ತಾರತಮ್ಯದ ಭಯಾನಕ ಮುಖ ಮತ್ತೊಮ್ಮೆ ಬಯಲಾಯಿತು. ಸರ್ಕಾರಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ದಲಿತ ವಿದ್ಯಾರ್ಥಿ ಆರ್. ಐಯ್ಯಸಾಮಿ ರಾಯಲ್ ಎನ್‌ಫೀಲ್ಡ್ ಬೈಕ್ ಸವಾರಿ ಮಾಡಿದ್ದಕ್ಕೆ ಸವರ್ಣೀಯ ಸಮುದಾಯಕ್ಕೆ ಸೇರಿದ ಮೂವರು ದುಷ್ಕರ್ಮಿಗಳು ಆತನ ಮೇಲೆ ಭೀಕರ ದಾಳಿ ನಡೆಸಿದ ಘಟನೆ ನಡೆದಿದೆ.

ಘಟನೆಯು ಬುಧವಾರ ಸಂಜೆ ಸಂಭವಿಸಿದ್ದು, ರೈಡ್ ಮಾಡುತ್ತಿದ್ದ ಐಯ್ಯಸಾಮಿಯನ್ನು ಆರ್. ವಿನೋತ್ ಕುಮಾರ್ (21), ಎ. ಅಥೀಶ್ವರನ್ (22) ಮತ್ತು ಎಂ. ವಲ್ಲರಸು (21) ಎಂಬವರು ತಡೆದು ಜಾತಿ ನಿಂದನೆ ಮಾಡಿದ್ದಾಗಿ ತಿಳಿದುಬಂದಿದೆ. ಬಳಿಕ ಹಲ್ಲೆಗಿಳಿದ ಈ ದುಷ್ಕರ್ಮಿಗಳು ಹರಿತವಾದ ಆಯುಧಗಳಿಂದ ಆತನ ಮೇಲೆ ಅಮಾನುಷ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ್ದಾರೆ. ಹಲ್ಲೆಯಿಂದ ಐಯ್ಯಸಾಮಿಯ ಎರಡೂ ಕೈಗಳಿಗೆ ಭಾರಿ ಗಾಯಗಳಾಗಿದ್ದು, ತಕ್ಷಣವೇ ಮಧುರೈ ಸರ್ಕಾರಿ ರಾಜಾಜಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಕುಟುಂಬದ ಆಕ್ರೋಶ

ಈ ಅಮಾನುಷ ದಾಳಿಯ ಬಗ್ಗೆ ಪ್ರತಿಕ್ರಿಯಿಸಿರುವ ಐಯ್ಯಸಾಮಿಯ ಸಂಬಂಧಿ ಮುನಿಯಸಾಮಿ, “ಗ್ರಾಮದಲ್ಲಿ ದಲಿತರುತ ಬುಲೆಟ್ ಬೈಕ್ ಓಡಿಸಬಾರದು ಎಂಬ ಮನೋಭಾವ ಈಗಲೂ ಜೀವಂತವಿದೆ. ಈ ಹಿಂದೆಯೂ ಈ ಯುವಕರು ಜಾತಿಯ ಹೆಸರಿನಲ್ಲಿ ಅವಮಾನಿಸಿದ್ದನ್ನು ನಾವು ಕಂಡಿದ್ದೇವೆ. ಐಯ್ಯಸಾಮಿ ತಕ್ಷಣ ಓಡಿಹೋಗಿ ಬಚಾವಾಗದಿದ್ದರೆ ಅವರೇನು ಮಾಡುತ್ತಿದ್ದರೋ ತಿಳಿಯದು. ಹಲ್ಲೆಯ ಬಳಿಕವೂ ಈ ದುಷ್ಕರ್ಮಿಗಳು ನಮ್ಮ ಮನೆಯತ್ತ ನುಗ್ಗಲು ಯತ್ನಿಸಿದ್ದಾರೆ. ಹೀಗಾಗಿ, ನಮ್ಮ ಕುಟುಂಬಕ್ಕೆ ಪೊಲೀಸ್ ರಕ್ಷಣೆ ಬೇಕು,” ಎಂದು ಆಗ್ರಹಿಸಿದ್ದಾರೆ.

ಐಯ್ಯಸಾಮಿಯ ತಂದೆ ಭೂಮಿನಾಥನ್ ಮಾತು

ಈ ಬಗ್ಗೆ ಮಾತನಾಡಿದ ಭೂಮಿನಾಥನ್, “ಈಗಾಗಲೇ ಈ ಯುವಕರು ಐಯ್ಯಸಾಮಿಯ ಬೈಕ್‌ ನಷ್ಟಪಡಿಸಲು ಯತ್ನಿಸಿದ್ದರು. ನನ್ನ ಮಗ ಬುಲೆಟ್ ಬೈಕ್ ಓಡಿಸುವುದು ಅವರಿಗೆ ಸಹಿಸಲಿಲ್ಲ. ಇದನ್ನು ಪ್ರಶ್ನಿಸುವ ಧೈರ್ಯ ಅವರು ಹೊಂದಿರಲಿಲ್ಲ, ಆದ್ದರಿಂದ ಹಲ್ಲೆಗೆ ಮುಂದಾದರು,” ಎಂದು ಹೇಳಿದ್ದಾರೆ.

ಪೊಲೀಸರ ಕ್ರಮ

ಈ ಪ್ರಕರಣದಲ್ಲಿ ಈಗಾಗಲೇ ಆರ್. ವಿನೋತ್ ಕುಮಾರ್, ಎ. ಅಥೀಶ್ವರನ್ ಮತ್ತು ಎಂ. ವಲ್ಲರಸು ಬಂಧಿತರಾಗಿದ್ದಾರೆ. ಇವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 296 (1), 126 (2), 118 (1), 351 (3) ಮತ್ತು ಎಸ್ಸಿ-ಎಸ್ಟಿ (ಅತ್ಯಾಚಾರ ತಡೆ) ಕಾಯ್ದೆಯ 3(1)(r)(s) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.

ಈ ಘಟನೆಯು ತಮಿಳುನಾಡಿನಲ್ಲಿ ಇನ್ನೂ ಜಾತಿ ವೈಷಮ್ಯ ಜೀವಂತವಾಗಿರುವುದನ್ನು ತೋರಿಸುತ್ತಿದ್ದು, ಸಂತ್ರಸ್ತನಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯ ವೃದ್ಧಿಯಾಗುತ್ತಿದೆ.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago