Latest

ರಾಯಲ್ ಎನ್‌ಫೀಲ್ಡ್ ಬೈಕ್ ಓಡಿಸಿದ ಕಾರಣಕ್ಕೆ ದಲಿತ ವಿದ್ಯಾರ್ಥಿಯ ಕೈ ಕತ್ತರಿಸಿದ ದುಷ್ಕರ್ಮಿಗಳು!

ತಮಿಳುನಾಡಿನ ಶಿವಗಂಗೈ ಜಿಲ್ಲೆಯ ಮೇಳಪಿಡವೂರು ಗ್ರಾಮದಲ್ಲಿ ಜಾತಿ ತಾರತಮ್ಯದ ಭಯಾನಕ ಮುಖ ಮತ್ತೊಮ್ಮೆ ಬಯಲಾಯಿತು. ಸರ್ಕಾರಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ದಲಿತ ವಿದ್ಯಾರ್ಥಿ ಆರ್. ಐಯ್ಯಸಾಮಿ ರಾಯಲ್ ಎನ್‌ಫೀಲ್ಡ್ ಬೈಕ್ ಸವಾರಿ ಮಾಡಿದ್ದಕ್ಕೆ ಸವರ್ಣೀಯ ಸಮುದಾಯಕ್ಕೆ ಸೇರಿದ ಮೂವರು ದುಷ್ಕರ್ಮಿಗಳು ಆತನ ಮೇಲೆ ಭೀಕರ ದಾಳಿ ನಡೆಸಿದ ಘಟನೆ ನಡೆದಿದೆ.

ಘಟನೆಯು ಬುಧವಾರ ಸಂಜೆ ಸಂಭವಿಸಿದ್ದು, ರೈಡ್ ಮಾಡುತ್ತಿದ್ದ ಐಯ್ಯಸಾಮಿಯನ್ನು ಆರ್. ವಿನೋತ್ ಕುಮಾರ್ (21), ಎ. ಅಥೀಶ್ವರನ್ (22) ಮತ್ತು ಎಂ. ವಲ್ಲರಸು (21) ಎಂಬವರು ತಡೆದು ಜಾತಿ ನಿಂದನೆ ಮಾಡಿದ್ದಾಗಿ ತಿಳಿದುಬಂದಿದೆ. ಬಳಿಕ ಹಲ್ಲೆಗಿಳಿದ ಈ ದುಷ್ಕರ್ಮಿಗಳು ಹರಿತವಾದ ಆಯುಧಗಳಿಂದ ಆತನ ಮೇಲೆ ಅಮಾನುಷ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ್ದಾರೆ. ಹಲ್ಲೆಯಿಂದ ಐಯ್ಯಸಾಮಿಯ ಎರಡೂ ಕೈಗಳಿಗೆ ಭಾರಿ ಗಾಯಗಳಾಗಿದ್ದು, ತಕ್ಷಣವೇ ಮಧುರೈ ಸರ್ಕಾರಿ ರಾಜಾಜಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಕುಟುಂಬದ ಆಕ್ರೋಶ

ಈ ಅಮಾನುಷ ದಾಳಿಯ ಬಗ್ಗೆ ಪ್ರತಿಕ್ರಿಯಿಸಿರುವ ಐಯ್ಯಸಾಮಿಯ ಸಂಬಂಧಿ ಮುನಿಯಸಾಮಿ, “ಗ್ರಾಮದಲ್ಲಿ ದಲಿತರುತ ಬುಲೆಟ್ ಬೈಕ್ ಓಡಿಸಬಾರದು ಎಂಬ ಮನೋಭಾವ ಈಗಲೂ ಜೀವಂತವಿದೆ. ಈ ಹಿಂದೆಯೂ ಈ ಯುವಕರು ಜಾತಿಯ ಹೆಸರಿನಲ್ಲಿ ಅವಮಾನಿಸಿದ್ದನ್ನು ನಾವು ಕಂಡಿದ್ದೇವೆ. ಐಯ್ಯಸಾಮಿ ತಕ್ಷಣ ಓಡಿಹೋಗಿ ಬಚಾವಾಗದಿದ್ದರೆ ಅವರೇನು ಮಾಡುತ್ತಿದ್ದರೋ ತಿಳಿಯದು. ಹಲ್ಲೆಯ ಬಳಿಕವೂ ಈ ದುಷ್ಕರ್ಮಿಗಳು ನಮ್ಮ ಮನೆಯತ್ತ ನುಗ್ಗಲು ಯತ್ನಿಸಿದ್ದಾರೆ. ಹೀಗಾಗಿ, ನಮ್ಮ ಕುಟುಂಬಕ್ಕೆ ಪೊಲೀಸ್ ರಕ್ಷಣೆ ಬೇಕು,” ಎಂದು ಆಗ್ರಹಿಸಿದ್ದಾರೆ.

ಐಯ್ಯಸಾಮಿಯ ತಂದೆ ಭೂಮಿನಾಥನ್ ಮಾತು

ಈ ಬಗ್ಗೆ ಮಾತನಾಡಿದ ಭೂಮಿನಾಥನ್, “ಈಗಾಗಲೇ ಈ ಯುವಕರು ಐಯ್ಯಸಾಮಿಯ ಬೈಕ್‌ ನಷ್ಟಪಡಿಸಲು ಯತ್ನಿಸಿದ್ದರು. ನನ್ನ ಮಗ ಬುಲೆಟ್ ಬೈಕ್ ಓಡಿಸುವುದು ಅವರಿಗೆ ಸಹಿಸಲಿಲ್ಲ. ಇದನ್ನು ಪ್ರಶ್ನಿಸುವ ಧೈರ್ಯ ಅವರು ಹೊಂದಿರಲಿಲ್ಲ, ಆದ್ದರಿಂದ ಹಲ್ಲೆಗೆ ಮುಂದಾದರು,” ಎಂದು ಹೇಳಿದ್ದಾರೆ.

ಪೊಲೀಸರ ಕ್ರಮ

ಈ ಪ್ರಕರಣದಲ್ಲಿ ಈಗಾಗಲೇ ಆರ್. ವಿನೋತ್ ಕುಮಾರ್, ಎ. ಅಥೀಶ್ವರನ್ ಮತ್ತು ಎಂ. ವಲ್ಲರಸು ಬಂಧಿತರಾಗಿದ್ದಾರೆ. ಇವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 296 (1), 126 (2), 118 (1), 351 (3) ಮತ್ತು ಎಸ್ಸಿ-ಎಸ್ಟಿ (ಅತ್ಯಾಚಾರ ತಡೆ) ಕಾಯ್ದೆಯ 3(1)(r)(s) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.

ಈ ಘಟನೆಯು ತಮಿಳುನಾಡಿನಲ್ಲಿ ಇನ್ನೂ ಜಾತಿ ವೈಷಮ್ಯ ಜೀವಂತವಾಗಿರುವುದನ್ನು ತೋರಿಸುತ್ತಿದ್ದು, ಸಂತ್ರಸ್ತನಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯ ವೃದ್ಧಿಯಾಗುತ್ತಿದೆ.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

12 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

12 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

12 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

12 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

12 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

12 hours ago