Latest

ರಾಯಲ್ ಎನ್‌ಫೀಲ್ಡ್ ಬೈಕ್ ಓಡಿಸಿದ ಕಾರಣಕ್ಕೆ ದಲಿತ ವಿದ್ಯಾರ್ಥಿಯ ಕೈ ಕತ್ತರಿಸಿದ ದುಷ್ಕರ್ಮಿಗಳು!

ತಮಿಳುನಾಡಿನ ಶಿವಗಂಗೈ ಜಿಲ್ಲೆಯ ಮೇಳಪಿಡವೂರು ಗ್ರಾಮದಲ್ಲಿ ಜಾತಿ ತಾರತಮ್ಯದ ಭಯಾನಕ ಮುಖ ಮತ್ತೊಮ್ಮೆ ಬಯಲಾಯಿತು. ಸರ್ಕಾರಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ದಲಿತ ವಿದ್ಯಾರ್ಥಿ ಆರ್. ಐಯ್ಯಸಾಮಿ ರಾಯಲ್ ಎನ್‌ಫೀಲ್ಡ್ ಬೈಕ್ ಸವಾರಿ ಮಾಡಿದ್ದಕ್ಕೆ ಸವರ್ಣೀಯ ಸಮುದಾಯಕ್ಕೆ ಸೇರಿದ ಮೂವರು ದುಷ್ಕರ್ಮಿಗಳು ಆತನ ಮೇಲೆ ಭೀಕರ ದಾಳಿ ನಡೆಸಿದ ಘಟನೆ ನಡೆದಿದೆ.

ಘಟನೆಯು ಬುಧವಾರ ಸಂಜೆ ಸಂಭವಿಸಿದ್ದು, ರೈಡ್ ಮಾಡುತ್ತಿದ್ದ ಐಯ್ಯಸಾಮಿಯನ್ನು ಆರ್. ವಿನೋತ್ ಕುಮಾರ್ (21), ಎ. ಅಥೀಶ್ವರನ್ (22) ಮತ್ತು ಎಂ. ವಲ್ಲರಸು (21) ಎಂಬವರು ತಡೆದು ಜಾತಿ ನಿಂದನೆ ಮಾಡಿದ್ದಾಗಿ ತಿಳಿದುಬಂದಿದೆ. ಬಳಿಕ ಹಲ್ಲೆಗಿಳಿದ ಈ ದುಷ್ಕರ್ಮಿಗಳು ಹರಿತವಾದ ಆಯುಧಗಳಿಂದ ಆತನ ಮೇಲೆ ಅಮಾನುಷ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ್ದಾರೆ. ಹಲ್ಲೆಯಿಂದ ಐಯ್ಯಸಾಮಿಯ ಎರಡೂ ಕೈಗಳಿಗೆ ಭಾರಿ ಗಾಯಗಳಾಗಿದ್ದು, ತಕ್ಷಣವೇ ಮಧುರೈ ಸರ್ಕಾರಿ ರಾಜಾಜಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಕುಟುಂಬದ ಆಕ್ರೋಶ

ಈ ಅಮಾನುಷ ದಾಳಿಯ ಬಗ್ಗೆ ಪ್ರತಿಕ್ರಿಯಿಸಿರುವ ಐಯ್ಯಸಾಮಿಯ ಸಂಬಂಧಿ ಮುನಿಯಸಾಮಿ, “ಗ್ರಾಮದಲ್ಲಿ ದಲಿತರುತ ಬುಲೆಟ್ ಬೈಕ್ ಓಡಿಸಬಾರದು ಎಂಬ ಮನೋಭಾವ ಈಗಲೂ ಜೀವಂತವಿದೆ. ಈ ಹಿಂದೆಯೂ ಈ ಯುವಕರು ಜಾತಿಯ ಹೆಸರಿನಲ್ಲಿ ಅವಮಾನಿಸಿದ್ದನ್ನು ನಾವು ಕಂಡಿದ್ದೇವೆ. ಐಯ್ಯಸಾಮಿ ತಕ್ಷಣ ಓಡಿಹೋಗಿ ಬಚಾವಾಗದಿದ್ದರೆ ಅವರೇನು ಮಾಡುತ್ತಿದ್ದರೋ ತಿಳಿಯದು. ಹಲ್ಲೆಯ ಬಳಿಕವೂ ಈ ದುಷ್ಕರ್ಮಿಗಳು ನಮ್ಮ ಮನೆಯತ್ತ ನುಗ್ಗಲು ಯತ್ನಿಸಿದ್ದಾರೆ. ಹೀಗಾಗಿ, ನಮ್ಮ ಕುಟುಂಬಕ್ಕೆ ಪೊಲೀಸ್ ರಕ್ಷಣೆ ಬೇಕು,” ಎಂದು ಆಗ್ರಹಿಸಿದ್ದಾರೆ.

ಐಯ್ಯಸಾಮಿಯ ತಂದೆ ಭೂಮಿನಾಥನ್ ಮಾತು

ಈ ಬಗ್ಗೆ ಮಾತನಾಡಿದ ಭೂಮಿನಾಥನ್, “ಈಗಾಗಲೇ ಈ ಯುವಕರು ಐಯ್ಯಸಾಮಿಯ ಬೈಕ್‌ ನಷ್ಟಪಡಿಸಲು ಯತ್ನಿಸಿದ್ದರು. ನನ್ನ ಮಗ ಬುಲೆಟ್ ಬೈಕ್ ಓಡಿಸುವುದು ಅವರಿಗೆ ಸಹಿಸಲಿಲ್ಲ. ಇದನ್ನು ಪ್ರಶ್ನಿಸುವ ಧೈರ್ಯ ಅವರು ಹೊಂದಿರಲಿಲ್ಲ, ಆದ್ದರಿಂದ ಹಲ್ಲೆಗೆ ಮುಂದಾದರು,” ಎಂದು ಹೇಳಿದ್ದಾರೆ.

ಪೊಲೀಸರ ಕ್ರಮ

ಈ ಪ್ರಕರಣದಲ್ಲಿ ಈಗಾಗಲೇ ಆರ್. ವಿನೋತ್ ಕುಮಾರ್, ಎ. ಅಥೀಶ್ವರನ್ ಮತ್ತು ಎಂ. ವಲ್ಲರಸು ಬಂಧಿತರಾಗಿದ್ದಾರೆ. ಇವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 296 (1), 126 (2), 118 (1), 351 (3) ಮತ್ತು ಎಸ್ಸಿ-ಎಸ್ಟಿ (ಅತ್ಯಾಚಾರ ತಡೆ) ಕಾಯ್ದೆಯ 3(1)(r)(s) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.

ಈ ಘಟನೆಯು ತಮಿಳುನಾಡಿನಲ್ಲಿ ಇನ್ನೂ ಜಾತಿ ವೈಷಮ್ಯ ಜೀವಂತವಾಗಿರುವುದನ್ನು ತೋರಿಸುತ್ತಿದ್ದು, ಸಂತ್ರಸ್ತನಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯ ವೃದ್ಧಿಯಾಗುತ್ತಿದೆ.

nazeer ahamad

Recent Posts

ಕುಡಿತದ ದುರಂತ ಅಂತ್ಯ: ಆಸ್ತಿ ಹಣದ ಜಗಳಕ್ಕೆ ತಾಯಿಯನ್ನೇ ಕೊಂದ ಮಗಳು-ಮೊಮ್ಮಗ!

ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…

3 hours ago

ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ: ಪ್ರೌಢಶಾಲಾ ಶಿಕ್ಷಕಿ ಬಂಧನ

ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…

3 hours ago

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

6 hours ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

6 hours ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

6 hours ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

6 hours ago