Latest

ರಾಯಲ್ ಎನ್‌ಫೀಲ್ಡ್ ಬೈಕ್ ಓಡಿಸಿದ ಕಾರಣಕ್ಕೆ ದಲಿತ ವಿದ್ಯಾರ್ಥಿಯ ಕೈ ಕತ್ತರಿಸಿದ ದುಷ್ಕರ್ಮಿಗಳು!

ತಮಿಳುನಾಡಿನ ಶಿವಗಂಗೈ ಜಿಲ್ಲೆಯ ಮೇಳಪಿಡವೂರು ಗ್ರಾಮದಲ್ಲಿ ಜಾತಿ ತಾರತಮ್ಯದ ಭಯಾನಕ ಮುಖ ಮತ್ತೊಮ್ಮೆ ಬಯಲಾಯಿತು. ಸರ್ಕಾರಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ದಲಿತ ವಿದ್ಯಾರ್ಥಿ ಆರ್. ಐಯ್ಯಸಾಮಿ ರಾಯಲ್ ಎನ್‌ಫೀಲ್ಡ್ ಬೈಕ್ ಸವಾರಿ ಮಾಡಿದ್ದಕ್ಕೆ ಸವರ್ಣೀಯ ಸಮುದಾಯಕ್ಕೆ ಸೇರಿದ ಮೂವರು ದುಷ್ಕರ್ಮಿಗಳು ಆತನ ಮೇಲೆ ಭೀಕರ ದಾಳಿ ನಡೆಸಿದ ಘಟನೆ ನಡೆದಿದೆ.

ಘಟನೆಯು ಬುಧವಾರ ಸಂಜೆ ಸಂಭವಿಸಿದ್ದು, ರೈಡ್ ಮಾಡುತ್ತಿದ್ದ ಐಯ್ಯಸಾಮಿಯನ್ನು ಆರ್. ವಿನೋತ್ ಕುಮಾರ್ (21), ಎ. ಅಥೀಶ್ವರನ್ (22) ಮತ್ತು ಎಂ. ವಲ್ಲರಸು (21) ಎಂಬವರು ತಡೆದು ಜಾತಿ ನಿಂದನೆ ಮಾಡಿದ್ದಾಗಿ ತಿಳಿದುಬಂದಿದೆ. ಬಳಿಕ ಹಲ್ಲೆಗಿಳಿದ ಈ ದುಷ್ಕರ್ಮಿಗಳು ಹರಿತವಾದ ಆಯುಧಗಳಿಂದ ಆತನ ಮೇಲೆ ಅಮಾನುಷ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ್ದಾರೆ. ಹಲ್ಲೆಯಿಂದ ಐಯ್ಯಸಾಮಿಯ ಎರಡೂ ಕೈಗಳಿಗೆ ಭಾರಿ ಗಾಯಗಳಾಗಿದ್ದು, ತಕ್ಷಣವೇ ಮಧುರೈ ಸರ್ಕಾರಿ ರಾಜಾಜಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಕುಟುಂಬದ ಆಕ್ರೋಶ

ಈ ಅಮಾನುಷ ದಾಳಿಯ ಬಗ್ಗೆ ಪ್ರತಿಕ್ರಿಯಿಸಿರುವ ಐಯ್ಯಸಾಮಿಯ ಸಂಬಂಧಿ ಮುನಿಯಸಾಮಿ, “ಗ್ರಾಮದಲ್ಲಿ ದಲಿತರುತ ಬುಲೆಟ್ ಬೈಕ್ ಓಡಿಸಬಾರದು ಎಂಬ ಮನೋಭಾವ ಈಗಲೂ ಜೀವಂತವಿದೆ. ಈ ಹಿಂದೆಯೂ ಈ ಯುವಕರು ಜಾತಿಯ ಹೆಸರಿನಲ್ಲಿ ಅವಮಾನಿಸಿದ್ದನ್ನು ನಾವು ಕಂಡಿದ್ದೇವೆ. ಐಯ್ಯಸಾಮಿ ತಕ್ಷಣ ಓಡಿಹೋಗಿ ಬಚಾವಾಗದಿದ್ದರೆ ಅವರೇನು ಮಾಡುತ್ತಿದ್ದರೋ ತಿಳಿಯದು. ಹಲ್ಲೆಯ ಬಳಿಕವೂ ಈ ದುಷ್ಕರ್ಮಿಗಳು ನಮ್ಮ ಮನೆಯತ್ತ ನುಗ್ಗಲು ಯತ್ನಿಸಿದ್ದಾರೆ. ಹೀಗಾಗಿ, ನಮ್ಮ ಕುಟುಂಬಕ್ಕೆ ಪೊಲೀಸ್ ರಕ್ಷಣೆ ಬೇಕು,” ಎಂದು ಆಗ್ರಹಿಸಿದ್ದಾರೆ.

ಐಯ್ಯಸಾಮಿಯ ತಂದೆ ಭೂಮಿನಾಥನ್ ಮಾತು

ಈ ಬಗ್ಗೆ ಮಾತನಾಡಿದ ಭೂಮಿನಾಥನ್, “ಈಗಾಗಲೇ ಈ ಯುವಕರು ಐಯ್ಯಸಾಮಿಯ ಬೈಕ್‌ ನಷ್ಟಪಡಿಸಲು ಯತ್ನಿಸಿದ್ದರು. ನನ್ನ ಮಗ ಬುಲೆಟ್ ಬೈಕ್ ಓಡಿಸುವುದು ಅವರಿಗೆ ಸಹಿಸಲಿಲ್ಲ. ಇದನ್ನು ಪ್ರಶ್ನಿಸುವ ಧೈರ್ಯ ಅವರು ಹೊಂದಿರಲಿಲ್ಲ, ಆದ್ದರಿಂದ ಹಲ್ಲೆಗೆ ಮುಂದಾದರು,” ಎಂದು ಹೇಳಿದ್ದಾರೆ.

ಪೊಲೀಸರ ಕ್ರಮ

ಈ ಪ್ರಕರಣದಲ್ಲಿ ಈಗಾಗಲೇ ಆರ್. ವಿನೋತ್ ಕುಮಾರ್, ಎ. ಅಥೀಶ್ವರನ್ ಮತ್ತು ಎಂ. ವಲ್ಲರಸು ಬಂಧಿತರಾಗಿದ್ದಾರೆ. ಇವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 296 (1), 126 (2), 118 (1), 351 (3) ಮತ್ತು ಎಸ್ಸಿ-ಎಸ್ಟಿ (ಅತ್ಯಾಚಾರ ತಡೆ) ಕಾಯ್ದೆಯ 3(1)(r)(s) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.

ಈ ಘಟನೆಯು ತಮಿಳುನಾಡಿನಲ್ಲಿ ಇನ್ನೂ ಜಾತಿ ವೈಷಮ್ಯ ಜೀವಂತವಾಗಿರುವುದನ್ನು ತೋರಿಸುತ್ತಿದ್ದು, ಸಂತ್ರಸ್ತನಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯ ವೃದ್ಧಿಯಾಗುತ್ತಿದೆ.

nazeer ahamad

Recent Posts

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ತಕ್ಷಣ ಶಾಸಕ ಸ್ಥಾನ ರದ್ದು, ಮುಂದೇನು?

ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…

6 hours ago

ಪೆಟ್ರೋಲ್ ಬಂಕ್ ನಕಾಶೆ ಅಪ್ಲೋಡ್‌ಗೆ ಹಣ ಬೇಡಿಕೆ – ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…

6 hours ago

ಖಾತೆಗಾಗಿ ಲಂಚ ಬೇಡಿಕೆ: ನೆಲಮಂಗಲದ ಕಳಲುಘಟ್ಟ ಪಿಡಿಓ ಲೋಕಾಯುಕ್ತ ಬಲೆಗೆ

ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…

9 hours ago

ವಿಷು ಪೋಸ್ಟರ್ ವಿವಾದ: ಶ್ರೀಕೃಷ್ಣನ ಪಕ್ಕದಲ್ಲಿ ಚಿಕನ್ ಚಿತ್ರ – ರೆಸ್ಟೋರೆಂಟ್ ಮಾಲೀಕ ಆರೆಸ್ಟ್.!!!

ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್‌ನಲ್ಲಿ ಶ್ರೀಕೃಷ್ಣನ…

11 hours ago

ಹಾರ್ಮುಝ್ ಜಲಸಂಧಿ ಮತ್ತೆ ತೆರೆಯಿತು: ಯುದ್ಧ ವಿರಾಮದ ಬಳಿಕ ಜಾಗತಿಕ ತೈಲ ಮಾರುಕಟ್ಟೆಗೆ ನೆಮ್ಮದಿ

ಇರಾನ್ ಮತ್ತು ಲೆಬನಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನವಾಗುತ್ತಿರುವ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಾರ್ಮುಝ್ ಜಲಸಂಧಿಯನ್ನು ಮತ್ತೆ ಎಲ್ಲಾ…

11 hours ago

ಇನ್‌ಸ್ಟಾಗ್ರಾಮ್ ಹನಿಟ್ರ್ಯಾಪ್: 14 ವರ್ಷದ ಬಾಲಕ ಅಪಹರಣ – 1 ಕೋಟಿ ಸುಲಿಗೆ ಯತ್ನ, ಸಂಬಂಧಿಯೇ ಮಾಸ್ಟರ್ ಮೈಂಡ್!

ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ನಡೆದ ಅಪಹರಣ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. 14…

11 hours ago