ಸಿದ್ದಾಪುರ: ಅಮಾಯಕ ದಲಿತ ಯುವಕನನ್ನು ಸಂಶಯದ ಹಿನ್ನೆಲೆಯಲ್ಲಿ ತೀವ್ರವಾಗಿ ಥಳಿಸಿದ ಘಟನೆಗೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲಾ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿರಸಿ ವಲಯ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಕಾನಸೂರು ಸೆಕ್ಷನ್ ಡಿ ಆರ್ ಎಫ್ ಓ ಕಾರ್ತಿಕ ನಾರ್ವೇಕರ್ ಹಾಗೂ ಬೀಟ್ ಗಾರ್ಡ್ ರೋಹಿತ ನಾಯ್ಕ್ ಸೇರಿದಂತೆ ಮೂವರ ಮೇಲೆ ದಲಿತ ದೌರ್ಜನ್ಯ ಅಟ್ರಾಸಿಟಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ತಿಕ ನಾರ್ವೆeಕರ ಹಾಗೂ ರೋಹಿತ ನಾಯ್ಕ್ ಹಾಗೂ ಇನ್ನೊಬ್ಬ ಸೇರಿ ಮೂವರು ತ್ಯಾಗಲಿ ಸಮೀಪ ಇತ್ತೀಚೆಗೆ ಶವವಾಗಿ ಪತ್ತೆಯಾದ ಕಡವೆ ಪ್ರಕರಣದಲ್ಲಿ,ಸಿದ್ದಾಪುರ ತಾಲೂಕಿನ ನಾಣಿಕಟ್ಟ ಗ್ರಾಮದ ಕೂಲಿಕಾರ ಯುವಕ ನಾಗರಾಜ ಬಂಗಾರ್ಯ ಚೆನ್ನಯ್ಯ ಎಂಬಾತನನ್ನು ತನಿಖೆಯ ನೆಪದಲ್ಲಿ ಆತನ ಮನೆಯಿಂದ ಕರೆದೊಯ್ದು ಕಾನಸೂರಿನ ನರ್ಸರಿಯಲ್ಲಿ ತೀವ್ರವಾಗಿ ಥಳಿಸಿದ್ದಾರೆಂದು ಆಪಾದಿಸಲಾಗಿತ್ತು. ಥಳಿತಕ್ಕೊಳಗಾದ ಯುವಕ ದಲಿತ ವರ್ಗಕ್ಕೆ ಸೇರಿದ ಹಿನ್ನಲೆಯಲ್ಲಿ ಸ್ಥಳೀಯ ಭೀಮ ಘರ್ಜನೆ ಸಂಘಟನೆ ಪ್ರತಿಭಟನೆ ನಡೆಸಿತ್ತು. ಈ ನಡುವೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದಿನಾಂಕ 13 ರಂದು ತಡರಾತ್ರಿ ಪ್ರಕರಣ ದಾಖಲಾಗಿದೆ. ಕಾರ್ತಿಕ ನಾರ್ವೆಕರ ಹಾಗೂ ರೋಹಿತ ನಾಯ್ಕ್ ಮತ್ತು ಇನ್ನೋರ್ವನ ಮೇಲೆ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇಲ್ಲಿ ದಲಿತ ಯುವಕನ ಮೇಲೆ ನಡೆದಿರುವ ದೌರ್ಜನ್ಯ ತೀವ್ರ ವಿವಾದ ಹುಟ್ಟು ಹಾಕಿದ್ದು ಥಳಿಸಿದ ಇನ್ನೋರ್ವ ಆರೋಪಿ ಯಾರು ಎಂಬುದು ಪತ್ತೆ ಆಗಬೇಕಾಗಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…