ಸಿದ್ದಾಪುರ: ಅಮಾಯಕ ದಲಿತ ಯುವಕನನ್ನು ಸಂಶಯದ ಹಿನ್ನೆಲೆಯಲ್ಲಿ ತೀವ್ರವಾಗಿ ಥಳಿಸಿದ ಘಟನೆಗೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲಾ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿರಸಿ ವಲಯ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಕಾನಸೂರು ಸೆಕ್ಷನ್ ಡಿ ಆರ್ ಎಫ್ ಓ ಕಾರ್ತಿಕ ನಾರ್ವೇಕರ್ ಹಾಗೂ ಬೀಟ್ ಗಾರ್ಡ್ ರೋಹಿತ ನಾಯ್ಕ್ ಸೇರಿದಂತೆ ಮೂವರ ಮೇಲೆ ದಲಿತ ದೌರ್ಜನ್ಯ ಅಟ್ರಾಸಿಟಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ತಿಕ ನಾರ್ವೆeಕರ ಹಾಗೂ ರೋಹಿತ ನಾಯ್ಕ್ ಹಾಗೂ ಇನ್ನೊಬ್ಬ ಸೇರಿ ಮೂವರು ತ್ಯಾಗಲಿ ಸಮೀಪ ಇತ್ತೀಚೆಗೆ ಶವವಾಗಿ ಪತ್ತೆಯಾದ ಕಡವೆ ಪ್ರಕರಣದಲ್ಲಿ,ಸಿದ್ದಾಪುರ ತಾಲೂಕಿನ ನಾಣಿಕಟ್ಟ ಗ್ರಾಮದ ಕೂಲಿಕಾರ ಯುವಕ ನಾಗರಾಜ ಬಂಗಾರ್ಯ ಚೆನ್ನಯ್ಯ ಎಂಬಾತನನ್ನು ತನಿಖೆಯ ನೆಪದಲ್ಲಿ ಆತನ ಮನೆಯಿಂದ ಕರೆದೊಯ್ದು ಕಾನಸೂರಿನ ನರ್ಸರಿಯಲ್ಲಿ ತೀವ್ರವಾಗಿ ಥಳಿಸಿದ್ದಾರೆಂದು ಆಪಾದಿಸಲಾಗಿತ್ತು. ಥಳಿತಕ್ಕೊಳಗಾದ ಯುವಕ ದಲಿತ ವರ್ಗಕ್ಕೆ ಸೇರಿದ ಹಿನ್ನಲೆಯಲ್ಲಿ ಸ್ಥಳೀಯ ಭೀಮ ಘರ್ಜನೆ ಸಂಘಟನೆ ಪ್ರತಿಭಟನೆ ನಡೆಸಿತ್ತು. ಈ ನಡುವೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದಿನಾಂಕ 13 ರಂದು ತಡರಾತ್ರಿ ಪ್ರಕರಣ ದಾಖಲಾಗಿದೆ. ಕಾರ್ತಿಕ ನಾರ್ವೆಕರ ಹಾಗೂ ರೋಹಿತ ನಾಯ್ಕ್ ಮತ್ತು ಇನ್ನೋರ್ವನ ಮೇಲೆ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇಲ್ಲಿ ದಲಿತ ಯುವಕನ ಮೇಲೆ ನಡೆದಿರುವ ದೌರ್ಜನ್ಯ ತೀವ್ರ ವಿವಾದ ಹುಟ್ಟು ಹಾಕಿದ್ದು ಥಳಿಸಿದ ಇನ್ನೋರ್ವ ಆರೋಪಿ ಯಾರು ಎಂಬುದು ಪತ್ತೆ ಆಗಬೇಕಾಗಿದೆ.
ಮಹಾರಾಷ್ಟ್ರದ ನಾಗ್ಪುರದಲ್ಲಿ ಭಾರತೀಯ ವಾಯುಸೇನೆಯ (IAF) ಅಧಿಕಾರಿಯೊಬ್ಬರ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾಚಾರ ಎಸಗಿದಲ್ಲದೆ, ಬಲವಂತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರ…
ಬಾಗಲಕೋಟೆ: ತಾಲ್ಲೂಕಿನ ನಾಯನೇಗಲಿ ಗ್ರಾಮದಲ್ಲಿ ಪಿಕೆಪಿಎಸ್ ಬ್ಯಾಂಕ್ನ ನೂತನ ಕಚೇರಿಯನ್ನು ಇಂದು ಬೆಳಿಗ್ಗೆ 9.30 ಗಂಟೆಗೆ ಬಾಗಲಕೋಟೆ ಗ್ರಾಮೀಣ ಕ್ಷೇತ್ರದ…
ನವದೆಹಲಿ: ದೇಶಾದ್ಯಂತ ಔಷಧಿಗಳ ಮಾರಾಟ ನಿಯಮಗಳಲ್ಲಿ ಮಹತ್ವದ ಬದಲಾವಣೆ ತರಲಾಗಿದ್ದು, ಇನ್ಮುಂದೆ ಕೆಮ್ಮಿನ ಸಿರಪ್ ಸೇರಿದಂತೆ ಯಾವುದೇ ರೀತಿಯ ಸಿರಪ್ಗಳನ್ನು…
ಬೆಂಗಳೂರು: ಪ್ರೇಮ ಸಂಬಂಧ, ಗುಟ್ಟಿನ ಮದುವೆ ಹಾಗೂ ಕುಟುಂಬದ ವಿರೋಧದ ನಡುವೆ ಯುವತಿಯೊಬ್ಬಳು ಹತ್ಯೆಯಾಗಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್…
ಭ್ರಷ್ಟಾಚಾರ ಮತ್ತು ಅಕ್ರಮ ಆಸ್ತಿ ಗಳಿಕೆ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಬೃಹತ್…
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಮದ್ಯದ ಅಮಲಿನಲ್ಲಿದ್ದ ರೌಡಿಶೀಟರ್ ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ನಡೆಸಿ, ಪರಿಸ್ಥಿತಿ ನಿಯಂತ್ರಿಸಲು ಬಂದ ಪೊಲೀಸರ…