ದಾಂಡೇಲಿ: ದಾಂಡೇಲಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಆಸಾಮಿ ಬಾಬು ತಂದೆ ರಾಮಪ್ಪ ದೊಡ್ಡಮನಿ (41) ಅವರನ್ನು ಆರು ತಿಂಗಳ ಅವಧಿಗೆ ಉತ್ತರ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು ಆದೇಶ ಹೊರಡಿಸಿದ್ದಾರೆ.
ಬರ್ಚಿ ರಸ್ತೆ, ಜನತಾ ವಿದ್ಯಾಲಯ ಸಮೀಪದ ನಿವಾಸಿಯಾಗಿರುವ ಬಾಬು ದೊಡ್ಡಮನಿ ವಿರುದ್ಧ ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ 2012ರಿಂದ 2025ರವರೆಗೆ ಒಟ್ಟು 9 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಇವರ ವಿರುದ್ಧ ಕೊ. ಲೆ ಯತ್ನ, ದೊಂಬಿ, ಜೂಜಾಟ, ಲೈಂಗಿಕ ದೌರ್ಜನ್ಯ, ಹಲ್ಲೆ ಹಾಗೂ ಎಸ್ಸಿ-ಎಸ್ಟಿ ಕಾಯ್ದೆಯಡಿ ಪ್ರಕರಣಗಳು ದಾಖಲಾಗಿರುವ ಹಿನ್ನೆಲೆಯಲ್ಲಿ ರೌಡಿ ಶಿಟರ್ ತೆರೆಯಲಾಗಿತ್ತು.
ಆದರೆ, ಪೊಲೀಸ್ ನಿಗಾದ ನಡುವೆಯೂ ಕ್ರಿಮಿನಲ್ ಚಟುವಟಿಕೆಗಳನ್ನು ಮುಂದುವರಿಸುತ್ತಿದ್ದರಿಂದ ಹಾಗೂ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಸಾಧ್ಯತೆ ಕಂಡುಬಂದ ಹಿನ್ನೆಲೆಯಲ್ಲಿ ದಾಂಡೇಲಿ ನಗರ ಪೊಲೀಸ್ ಠಾಣೆಯವರು ಗಡಿಪಾರು ಕ್ರಮಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರು, ಕರ್ನಾಟಕ ಪೊಲೀಸ್ ಕಾಯ್ದೆ ಅಡಿಯಲ್ಲಿ ಬಾಬು ದೊಡ್ಡಮನಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ 6 ತಿಂಗಳ ಕಾಲ ಉತ್ತರ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ, ಬೀದರ ಜಿಲ್ಲೆಯ ಬೀದರ ಸಬ್ ಅರ್ಬನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸಿಸುವಂತೆ ಆದೇಶಿಸಿದ್ದಾರೆ.
ಆದೇಶದಂತೆ ದಾಂಡೇಲಿ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಬಾಬು ದೊಡ್ಡಮನಿ ಅವರನ್ನು ಬೀದರ ಸಬ್ ಅರ್ಬನ್ ಪೊಲೀಸ್ ಠಾಣೆಯ ಅಧಿಕಾರಿಗಳ ಮುಂದೆ ಹಾಜರುಪಡಿಸಿದ್ದಾರೆ.
ಬಾಗಲಕೋಟೆ ನಗರದಲ್ಲಿ ಸರ್ಕಾರಿ ಕಚೇರಿಗಳ ಕಾರ್ಯವೈಖರಿ ಹಾಗೂ ಖಾಸಗಿ ವ್ಯಕ್ತಿಗಳ ಹಸ್ತಕ್ಷೇಪದ ಬಗ್ಗೆ ಸಾರ್ವಜನಿಕರ ಅಸಮಾಧಾನ ಮತ್ತೊಮ್ಮೆ ಹೊರಹೊಮ್ಮಿದೆ. ಬಿಟಿಡಿಎ…
ಭಟ್ಕಳ: ಕುಡಿಯುವ ನೀರಿನ ತೀವ್ರ ಸಮಸ್ಯೆಯಿಂದ ಬೇಸತ್ತ ಭಟ್ಕಳ ತಾಲೂಕಿನ ಮುಂಡಳ್ಳಿ ಗ್ರಾಮದ ಕೋಟಿ ಖಜಾನೆ ಮನೆ ಪ್ರದೇಶದ ನಿವಾಸಿಗಳು…
ಮುತ್ತಗಿ: ಬಸವನ ಬಾಗೇವಾಡಿ ತಾಲ್ಲೂಕಿನ ಮುತ್ತಗಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಳೆದ ಸುಮಾರು 20…
ಬೆಳಗಾವಿಯಲ್ಲಿ ಮಾಜಿ ಸೈನಿಕನ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ತಿರುವು ಸಿಕ್ಕಿದ್ದು, ಮೃತನ ಪತ್ನಿಯ ಪ್ರಿಯಕರನೊಬ್ಬ ಬಿಡುಗಡೆ ಮಾಡಿದ…
ಮುಂಬೈ: ಹೈಡ್ರೋಪೋನಿಕ್ ಗಾಂಜಾವನ್ನು ಅಕ್ರಮವಾಗಿ ಭಾರತಕ್ಕೆ ಸಾಗಿಸುತ್ತಿದ್ದ ಆರೋಪದ ಮೇಲೆ 28 ವರ್ಷದ ಮಾಡೆಲ್ ಹಾಗೂ ‘ಮಿಸೆಸ್ ಕೇರಳ 2025’…
ಡಂಬಳ: ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದಲ್ಲಿ ಅಪರೂಪದ ಹಾಗೂ ವಿಸ್ಮಯಕಾರಿ ಘಟನೆಯೊಂದು ಗ್ರಾಮಸ್ಥರ ಗಮನ ಸೆಳೆಯುತ್ತಿದೆ. ಗ್ರಾಮದ…