ಬೆಂಗಳೂರು, ಜುಲೈ 26 – ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ನಟ ದರ್ಶನ್ ಅವರು ವಿದೇಶ ಪ್ರವಾಸ ಮುಗಿಸಿ ತಡರಾತ್ರಿ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಥಾಯ್ಲೆಂಡ್ನಲ್ಲಿ ‘ದಿ ಡೆವಿಲ್’ ಚಿತ್ರದ ಹಾಡು ಶೂಟಿಂಗ್ ಮುಗಿಸಿ ಕುಟುಂಬ ಸಮೇತ ಪ್ರವಾಸದಿಂದ ಹಿಂದಿರುಗಿದ ದರ್ಶನ್, ಇದೀಗ ಸುಪ್ರೀಂ ಕೋರ್ಟ್ನ ತೀರ್ಪಿನ ನಿರೀಕ್ಷೆಯಲ್ಲಿ ಆತಂಕದ ನೆರಳಲ್ಲಿ ಕಾಲಿಡುತ್ತಿದ್ದಾರೆ.
ಇತ್ತೀಚೆಗೆ ಕರ್ನಾಟಕ ಹೈಕೋರ್ಟ್ ನೀಡಿದ ಜಾಮೀನನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ದರ್ಶನ್ ಸೇರಿದಂತೆ ಏಳು ಆರೋಪಿಗಳ ಜಾಮೀನು ರದ್ದುಪಡಿಸಲು ಅರ್ಜಿ ಸಲ್ಲಿಸಿದೆ. ಕಳೆದ ಕೆಲ ದಿನಗಳ ಹಿಂದೆ ನಡೆದ ವಿಚಾರಣೆಯು ಈಗ ಪೂರ್ಣಗೊಂಡಿದ್ದು, ಅಂತಿಮ ತೀರ್ಪು ಮುಂದಿನ ವಾರ ಪ್ರಕಟವಾಗಲಿದೆ. ಇದರಿಂದಾಗಿ “ಜೈಲಿಗೆ ಮರಳಲಿವೆನಾ?” ಎಂಬ ಪ್ರಶ್ನೆಯು ಈಗಾಗಲೇ ಸಿನಿಮಾಪ್ರಿಯರು ಮತ್ತು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ದರ್ಶನ್ 10 ದಿನಗಳ ಹಿಂದೆ ಪತ್ನಿ ವಿಜಯಲಕ್ಷ್ಮಿ ಮತ್ತು ಪುತ್ರ ವಿನೇಶ್ ಜೊತೆಗೆ ಥಾಯ್ಲೆಂಡ್ಗೆ ಪ್ರಯಾಣ ಬೆಳೆಸಿದ್ದರು. ನ್ಯಾಯಾಲಯದ ನಿರ್ಧಾರಕ್ಕೆ ಅನುಗುಣವಾಗಿ ವಿದೇಶೀ ಪ್ರವಾಸಕ್ಕೆ ಅನುಮತಿ ಪಡೆದುಕೊಂಡಿದ್ದ ಅವರು, ಅಲ್ಲಿರುವ ಶೂಟಿಂಗ್ ಲೊಕೇಷನ್ಗಳಲ್ಲಿ ಭಾಗವಹಿಸಿದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.
ಅದಕ್ಕೂ ಮಿಕ್ಕಿ, ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣ ತಲುಪಿದ ದರ್ಶನ್ಗೆ ಭದ್ರತಾ ಸಿಬ್ಬಂದಿಗಳು ಸೆಲ್ಯೂಟ್ ಹೊಡೆದು ಬರಮಾಡಿಕೊಂಡಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಮತ್ತಷ್ಟು ಟೀಕೆಗಳಿಗೆ ಕಾರಣವಾಗಿವೆ. “ಕೊಲೆ ಆರೋಪಿಯೊಬ್ಬರಿಗೆ ಇಂತಹ ರಾಜಮರ್ಯಾದೆ ಬೇಕಿತ್ತಾ?” ಎಂಬ ಪ್ರಶ್ನೆಗಳು ಸಾರ್ವಜನಿಕರಲ್ಲಿ ಉದ್ಭವವಾಗಿದ್ದು, ಈ ಸಂಬಂಧ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ – “ದರ್ಶನ್ಗೆ ಭದ್ರತೆ ನೀಡಿರುವ ವಿಷಯದಲ್ಲಿ ನನಗೆ ಯಾವುದೇ ಮಾಹಿತಿ ಇಲ್ಲ. ಯಾರು, ಏನಿಗಾಗಿ ಭದ್ರತೆ ಕೊಟ್ಟಿದ್ದಾರೆ ಎಂಬುದರ ಬಗ್ಗೆ ವಿಚಾರಣೆ ಮಾಡಿಸುತ್ತೇನೆ” ಎಂದು ತಿಳಿಸಿದ್ದಾರೆ.
ಪ್ರಸ್ತುತ ಪ್ರಕರಣದಲ್ಲಿ ದರ್ಶನ್ A2 ಆರೋಪಿಯಾಗಿದ್ದರೆ, ಪವಿತ್ರಾ ಗೌಡ (A1), ಪ್ರದೂಷ್ (A14), ಲಕ್ಷ್ಮಣ್ (A12), ನಾಗರಾಜ್ (A11), ಅನುಕುಮಾರ್ (A7), ಜಗದೀಶ್ (A6) ಕೂಡ ಜಾಮೀನಿನಲ್ಲಿ ಬಿಡುಗಡೆಯಾಗಿದ್ದರು. ಈ ಎಲ್ಲರ ಜಾಮೀನನ್ನು ಸುಪ್ರೀಂ ಕೋರ್ಟ್ ಮುಂದಿನ ವಾರ ಕೈಗೊಂಡ ತೀರ್ಪು ನಿರ್ಧರಿಸಲಿದೆ.
ಜಾಮೀನಿಗೆ ‘ಬೆನ್ನು ನೋವು’ ಎನ್ನುವ ಕಾರಣವನ್ನಾಗಿ ಉಲ್ಲೇಖಿಸಿ ಹೊರಬಂದ ದರ್ಶನ್ ಈಗ ಮತ್ತೊಮ್ಮೆ ಬಂಧನದ ಅಂಚಿನಲ್ಲಿ ನಿಂತಿದ್ದಾರೆ. “ಕಿಲ್ಲಿಂಗ್ ಸ್ಟಾರ್”ಗೆ ನ್ಯಾಯಾಲಯ ಯಾವ ಪಾಠ ಕಲಿಸುತ್ತದೆ ಎಂಬ ಕುತೂಹಲ ಸದ್ಯ ಎಲ್ಲರಲ್ಲೂ ಹಬ್ಬಿದ್ದು, ಇಡೀ ಪ್ರಕರಣದ ಮುಂದಿನ ಹಂತದತ್ತ ಎಲ್ಲರ ದೃಷ್ಟಿಯೂ ಸಿದ್ದವಾಗಿದೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…