Latest

ದರ್ಶನ್ ಫ್ಯಾನ್ಸ್ ಜಾಗ್ರತೆಯಿರಿ! ಅಶ್ಲೀಲ ಮೆಸೇಜ್‌ಗೆ 7 ವರ್ಷ ಜೈಲು ಫಿಕ್ಸ್.!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಕುರಿತು ನಟಿ ರಮ್ಯಾ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ನಟ ದರ್ಶನ್ ಅವರ ಕೆಲ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಾಚ್ಯ ಭಾಷೆಯಲ್ಲಿ ಕಮೆಂಟ್ ಮಾಡಿರುವ ಘಟನೆಗೆ ಇದೀಗ ಗಂಭೀರ ತಿರುವು ಸಿಕ್ಕಿದೆ.

ನಟಿ ರಮ್ಯಾ ವಿರುದ್ಧ ಅವಹೇಳನಕಾರಿ ಹಾಗೂ ಮಾನಹಾನಿಕರ ಸಂದೇಶಗಳನ್ನು ಕಳಿಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲು ರಾಜ್ಯ ಮಹಿಳಾ ಆಯೋಗ ಸಜ್ಜಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು, “ಇದು ರಮ್ಯಾ ಅವರನ್ನು ಮಾತ್ರವಲ್ಲದೆ, ಎಲ್ಲಾ ಮಹಿಳೆಯರ ಗೌರವದ ವಿರುದ್ಧ ನಡೆದಿರುವ ಘೋರ ಅಪರಾಧ” ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಸ್ವಯಂ ಪ್ರೇರಿತ ದೂರು, ಪೊಲೀಸ್ ಆಯುಕ್ತರಿಗೆ ಪತ್ರ

“ಈ ಘಟನೆ ಮಾಧ್ಯಮಗಳಲ್ಲಿ ವರದಿಯಾದ ಬೆನ್ನಲ್ಲೇ ನಮಗೆ ದೂರು ಕೂಡ ಬಂದಿತ್ತು. ಆದ್ದರಿಂದ ನಾವು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡೆವು. ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಭಾಷೆ ಬಳಸುವುದು ಕಾನೂನಿನ ಪ್ರಕಾರ ದಂಡನೀಯ ಅಪರಾಧ. ಇದೇ ಕಾರಣಕ್ಕೆ ನಾವು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದು, ತ್ವರಿತ ಕ್ರಮಕ್ಕೆ ಒತ್ತಾಯಿಸಿದ್ದೇವೆ” ಎಂದು ನಾಗಲಕ್ಷ್ಮಿ ಚೌಧರಿ ತಿಳಿಸಿದ್ದಾರೆ.

ಅಶ್ಲೀಲ ಸಂದೇಶ, ಕಮೆಂಟ್ ಮೇಲೆ ತಕ್ಷಣ ಕ್ರಮ ಅಗತ್ಯ

“ಇಂತಹ ಕಮೆಂಟ್‌ಗಳನ್ನು ತಕ್ಷಣವಾಗಿ ಬ್ಲಾಕ್ ಮಾಡಿಸಿ, ಅವುಗಳನ್ನು ಪೋಸ್ಟ್ ಮಾಡಿದ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿ, ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಬೇಕು. ಇದು ಯಾವುದೇ ವ್ಯಕ್ತಿಗೆ ತನ್ನ ಅಭಿಪ್ರಾಯವನ್ನು ವ್ಯಕ್ತಪಡಿಸುವ ಹಕ್ಕನ್ನು ಕಿತ್ತುಕೊಳ್ಳುವುದು ಅಲ್ಲ, ಆದರೆ ಆ ಹಕ್ಕು ಮಹಿಳೆಯರ ಗೌರವಕ್ಕೆ ಧಕ್ಕೆ ತರುವ ರೀತಿಯಲ್ಲಿರಬಾರದು” ಎಂದು ಅವರು ಹೇಳಿದರು.

7 ವರ್ಷ ಜೈಲು ಶಿಕ್ಷೆ ಸಾಧ್ಯತೆ

“ಹೆಣ್ಣಿನ ಕುರಿತು ಅಶ್ಲೀಲ ಕಮೆಂಟ್‌ಗಳು ಅಥವಾ ಸಂದೇಶಗಳನ್ನು ಕಳಿಸುವುದು ಭಾರತೀಯ ದಂಡಸಂಹಿತೆಯ ಪ್ರಕಾರ ಗಂಭೀರ ಅಪರಾಧವಾಗಿದೆ. ತಪ್ಪು ಸಾಬೀತಾದರೆ ಕನಿಷ್ಠ 7 ವರ್ಷವರೆಗೆ ಜೈಲು ಶಿಕ್ಷೆ ವಿಧವಾಗಬಹುದು. ಕಮೆಂಟ್ ಮಾಡುವ ಮೊದಲು ಇದರ ಪರಿಣಾಮಗಳ ಬಗ್ಗೆ ಯೋಚಿಸಬೇಕು” ಎಂದು ಅವರು ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ನಟಿ ರಮ್ಯಾ ವಿರುದ್ಧ ನಡೆಯುತ್ತಿರುವ ಈ ದೌರ್ಜನ್ಯ ಸಾಮಾಜಿಕ ಜವಾಬ್ದಾರಿಯ ಕೊರತೆಯನ್ನು ತೋರಿಸುತ್ತಿದ್ದು, ಇಂಥ ಅಪರಾಧಗಳ ವಿರುದ್ಧದ ಹೋರಾಟಕ್ಕೆ ಮಹಿಳಾ ಆಯೋಗ ಮುಂಚೂಣಿಯಲ್ಲಿ ನಿಲ್ಲಲು ಸಿದ್ಧವಾಗಿದೆ ಎಂಬುದನ್ನು ಈ ಘಟ್ಟ ಸ್ಪಷ್ಟಪಡಿಸಿದೆ.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago