Latest

ದರ್ಶನ್ ಫ್ಯಾನ್ಸ್ ಜಾಗ್ರತೆಯಿರಿ! ಅಶ್ಲೀಲ ಮೆಸೇಜ್‌ಗೆ 7 ವರ್ಷ ಜೈಲು ಫಿಕ್ಸ್.!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಕುರಿತು ನಟಿ ರಮ್ಯಾ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ನಟ ದರ್ಶನ್ ಅವರ ಕೆಲ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಾಚ್ಯ ಭಾಷೆಯಲ್ಲಿ ಕಮೆಂಟ್ ಮಾಡಿರುವ ಘಟನೆಗೆ ಇದೀಗ ಗಂಭೀರ ತಿರುವು ಸಿಕ್ಕಿದೆ.

ನಟಿ ರಮ್ಯಾ ವಿರುದ್ಧ ಅವಹೇಳನಕಾರಿ ಹಾಗೂ ಮಾನಹಾನಿಕರ ಸಂದೇಶಗಳನ್ನು ಕಳಿಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲು ರಾಜ್ಯ ಮಹಿಳಾ ಆಯೋಗ ಸಜ್ಜಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು, “ಇದು ರಮ್ಯಾ ಅವರನ್ನು ಮಾತ್ರವಲ್ಲದೆ, ಎಲ್ಲಾ ಮಹಿಳೆಯರ ಗೌರವದ ವಿರುದ್ಧ ನಡೆದಿರುವ ಘೋರ ಅಪರಾಧ” ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಸ್ವಯಂ ಪ್ರೇರಿತ ದೂರು, ಪೊಲೀಸ್ ಆಯುಕ್ತರಿಗೆ ಪತ್ರ

“ಈ ಘಟನೆ ಮಾಧ್ಯಮಗಳಲ್ಲಿ ವರದಿಯಾದ ಬೆನ್ನಲ್ಲೇ ನಮಗೆ ದೂರು ಕೂಡ ಬಂದಿತ್ತು. ಆದ್ದರಿಂದ ನಾವು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡೆವು. ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಭಾಷೆ ಬಳಸುವುದು ಕಾನೂನಿನ ಪ್ರಕಾರ ದಂಡನೀಯ ಅಪರಾಧ. ಇದೇ ಕಾರಣಕ್ಕೆ ನಾವು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದು, ತ್ವರಿತ ಕ್ರಮಕ್ಕೆ ಒತ್ತಾಯಿಸಿದ್ದೇವೆ” ಎಂದು ನಾಗಲಕ್ಷ್ಮಿ ಚೌಧರಿ ತಿಳಿಸಿದ್ದಾರೆ.

ಅಶ್ಲೀಲ ಸಂದೇಶ, ಕಮೆಂಟ್ ಮೇಲೆ ತಕ್ಷಣ ಕ್ರಮ ಅಗತ್ಯ

“ಇಂತಹ ಕಮೆಂಟ್‌ಗಳನ್ನು ತಕ್ಷಣವಾಗಿ ಬ್ಲಾಕ್ ಮಾಡಿಸಿ, ಅವುಗಳನ್ನು ಪೋಸ್ಟ್ ಮಾಡಿದ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿ, ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಬೇಕು. ಇದು ಯಾವುದೇ ವ್ಯಕ್ತಿಗೆ ತನ್ನ ಅಭಿಪ್ರಾಯವನ್ನು ವ್ಯಕ್ತಪಡಿಸುವ ಹಕ್ಕನ್ನು ಕಿತ್ತುಕೊಳ್ಳುವುದು ಅಲ್ಲ, ಆದರೆ ಆ ಹಕ್ಕು ಮಹಿಳೆಯರ ಗೌರವಕ್ಕೆ ಧಕ್ಕೆ ತರುವ ರೀತಿಯಲ್ಲಿರಬಾರದು” ಎಂದು ಅವರು ಹೇಳಿದರು.

7 ವರ್ಷ ಜೈಲು ಶಿಕ್ಷೆ ಸಾಧ್ಯತೆ

“ಹೆಣ್ಣಿನ ಕುರಿತು ಅಶ್ಲೀಲ ಕಮೆಂಟ್‌ಗಳು ಅಥವಾ ಸಂದೇಶಗಳನ್ನು ಕಳಿಸುವುದು ಭಾರತೀಯ ದಂಡಸಂಹಿತೆಯ ಪ್ರಕಾರ ಗಂಭೀರ ಅಪರಾಧವಾಗಿದೆ. ತಪ್ಪು ಸಾಬೀತಾದರೆ ಕನಿಷ್ಠ 7 ವರ್ಷವರೆಗೆ ಜೈಲು ಶಿಕ್ಷೆ ವಿಧವಾಗಬಹುದು. ಕಮೆಂಟ್ ಮಾಡುವ ಮೊದಲು ಇದರ ಪರಿಣಾಮಗಳ ಬಗ್ಗೆ ಯೋಚಿಸಬೇಕು” ಎಂದು ಅವರು ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ನಟಿ ರಮ್ಯಾ ವಿರುದ್ಧ ನಡೆಯುತ್ತಿರುವ ಈ ದೌರ್ಜನ್ಯ ಸಾಮಾಜಿಕ ಜವಾಬ್ದಾರಿಯ ಕೊರತೆಯನ್ನು ತೋರಿಸುತ್ತಿದ್ದು, ಇಂಥ ಅಪರಾಧಗಳ ವಿರುದ್ಧದ ಹೋರಾಟಕ್ಕೆ ಮಹಿಳಾ ಆಯೋಗ ಮುಂಚೂಣಿಯಲ್ಲಿ ನಿಲ್ಲಲು ಸಿದ್ಧವಾಗಿದೆ ಎಂಬುದನ್ನು ಈ ಘಟ್ಟ ಸ್ಪಷ್ಟಪಡಿಸಿದೆ.

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

9 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

14 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

14 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

14 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

14 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

19 hours ago