ಬೆಂಗಳೂರು: ಅತ್ತೆಯನ್ನು ಸಾಯಿಸಲು ಸೊಸೆಯೊಬ್ಬಳು ನೇರವಾಗಿ ವೈದ್ಯರ ಬಳಿ ಮಾತ್ರೆ ಕೇಳಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಶಾಕ್ ಮಾಡುವ ಘಟನೆ ನಗರವಾಸಿಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಏನಾಗಿದೆ ವಿಷಯ?
ಬೆಂಗಳೂರು ಮೂಲದ ಡಾಕ್ಟರ್ ಸುನೀಲ್ ಕುಮಾರ್ ಎಂಬವರ ಬಳಿ ಮಹಿಳೆಯೊಬ್ಬಳು, ತನ್ನ ಅತ್ತೆಯನ್ನು ಕೊಲ್ಲಲು ಸಹಾಯ ಕೇಳಿದ್ದಾಳೆ. “ನನ್ನ ಅತ್ತೆ ನನಗೆ ದಿನವೂ ಹಿಂಸೆ ನೀಡುತ್ತಾರೆ. ಅವರಿಗೆ ತುಂಬಾ ವಯಸ್ಸಾಗಿದೆ, ಅವರನ್ನು ಸಾಯಿಸಲು ಏನಾದರೂ ಮಾರ್ಗವಿದೆಯಾ?” ಎಂದು ವೈದ್ಯರಿಗೆ ಮೆಸೇಜ್ ಮಾಡಿದ್ದಾಳೆ.
ಅಷ್ಟೇ ಅಲ್ಲದೆ, “ಸಾಯಿಸಲು ಮಾತ್ರೆಗಳು ಇರಲ್ವಾ? ಒಂದೆರಡು ಮಾತ್ರೆ ತಗೊಂಡರೆ ಸಾಕಾ?” ಎಂದು ವಿಶೇಷವಾಗಿ ಕೇಳಿದ್ದಾಳೆ. ಈ ಸಂದೇಶಗಳು ವೈದ್ಯರನ್ನು ಅಚ್ಚರಿಗೊಳಿಸಿದ್ದು, ಅವರು ತಕ್ಷಣ ಈ ಬಗ್ಗೆ ಪ್ರಶ್ನೆ ಮಾಡಿದಾಗ, ಮಹಿಳೆ ತನ್ನ ಸಂದೇಶವನ್ನು ತಕ್ಷಣ ಡಿಲೀಟ್ ಮಾಡಿ, ವೈದ್ಯರ ನಂಬರ್ ಬ್ಲಾಕ್ ಮಾಡಿದ್ದಾಳೆ.
ಡಾಕ್ಟರ್ ಸೂಕ್ತ ಕ್ರಮ ತೆಗೆದುಕೊಂಡರು
ಮೆಸೇಜ್ ಡಿಲೀಟ್ ಮಾಡುತ್ತಿದ್ದರೂ, ಡಾಕ್ಟರ್ ಸುನೀಲ್ ಅವರು ಮುನ್ನೇಚ್ಚರಿಕೆ ವಹಿಸಿ ಸ್ಕ್ರೀನ್ಶಾಟ್ ತೆಗೆದು ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರು. ಅವರ ಈ ಸೂಕ್ಷ್ಮತೆಯಿಂದ ಪ್ರಕರಣ ಗಂಭೀರತೆಯನ್ನು ಪಡೆದುಕೊಂಡಿದೆ.
ಪೊಲೀಸರು ತನಿಖೆ ಆರಂಭಿಸಿದ್ದಾರೆ
ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದು, ಆರೋಪಿಯಾದ ಸೊಸೆಯ ಮೊಬೈಲ್ ಈಗ ಸ್ವಿಚ್ ಆಫ್ ಆಗಿರುವುದಾಗಿ ತಿಳಿದುಬಂದಿದೆ. ಮಹಿಳೆಯ ಪತ್ತೆಯಾದ ಬಳಿಕವೇ ಈ ಘಟನೆಯ ನಿಜವಾದ ಹಿನ್ನೆಲೆ ಬಯಲಿಗೆ ಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಮುಂದಿನ ಕ್ರಮ ಕೈಗೊಳ್ಳಲಿದ್ದು, ಈ ಕೃತ್ಯ ಹೇಗೆ ಮತ್ತು ಏನಕ್ಕಾಗಿ ನಡೆಯುತ್ತಿತ್ತು ಎಂಬುದರ ಕುರಿತು ಸೂಕ್ಷ್ಮ ತನಿಖೆ ನಡೆಸಲಾಗುತ್ತಿದೆ.
ಭೂಮಾಪನ ಇಲಾಖೆಯಲ್ಲಿ ಲಭ್ಯವಿರುವ ವಿವಿಧ ಮೂಲ ದಾಖಲೆಗಳ ನಕಲುಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಾದ ಶುಲ್ಕವನ್ನು ರಾಜ್ಯ ಸರ್ಕಾರ ಪರಿಷ್ಕರಿಸಿದೆ. ವಿವಿಧ…
ತುಮಕೂರು ಜಿಲ್ಲೆಯ ಮದರಸಾವೊಂದರಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯ ದೌರ್ಜನ್ಯ ಮತ್ತು ಬಾಲಕಾರ್ಮಿಕ ಶೋಷಣೆ ನಡೆಸಲಾಗುತ್ತಿದ್ದ ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ…
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…