Latest

ತಂದೆಯಿಂದಲೇ ಬೇರೆ ಜಾತಿಯವನ ಮದುವೆಯಾದ ಮಗಳ ಹತ್ಯೆ: ಸೂಟ್ ಕೇಸ್ ನಲ್ಲಿ ಶವ ಪ್ಯಾಕ್ ಮಾಡಲು ತಾಯಿ ಸಹಾಯ

ಕಳೆದ ಶುಕ್ರವಾರ ಮಥುರಾದ ಯಮುನಾ ಎಕ್ಸ್ಪ್ರೆಸ್ ವೇ ಸರ್ವಿಸ್ ರಸ್ತೆಯಲ್ಲಿ ಟ್ರಾಲಿ ಬ್ಯಾಗ್ ವೊಂದರಲ್ಲಿ 25 ವರ್ಷದ ಆಯುಷಿ ಚೌಧರಿ ಅವರ ಮೃತದೇಹ ಪತ್ತೆಯಾಗಿತ್ತು. ಇದು ಮರ್ಯಾದಾ ಹತ್ಯೆಯಿಂದಾಗಿರುವುದಾಗಿ ತಿಳಿದುಬಂದಿದೆ. ಈ ಸಂಬಂಧ ಉತ್ತರ ಪ್ರದೇಶ ಪೊಲೀಸರು ಸೋಮವಾರ ಆಕೆಯ ಪೋಷಕರನ್ನು ಮಥುರಾದಲ್ಲಿ ಬಂಧಿಸಿದ್ದಾರೆ.
ದಕ್ಷಿಣ ದೆಹಲಿಯ ಬದರ್ಪುರದಲ್ಲಿ ನೆಲೆಸಿದ್ದ ಆಯುಷಿಯನ್ನು ಆಕೆಯ ತಂದೆ ನಿತೇಶ್ ಯಾದವ್ ಹತ್ಯೆಗೈದಿದ್ದಾರೆ ಎಂದು ಉತ್ತರ ಪ್ರದೇಶ ಪೊಲೀಸರು ಸೋಮವಾರ ತಿಳಿಸಿದ್ದಾರೆ. ಆಕೆ ಬೇರೆ ಜಾತಿಯ ಹುಡುಗನನ್ನು ಮದುವೆಯಾಗಿದ್ದರಿಂದ ಹಾಗೂ ಆಕೆ ಆಗಾಗ್ಗೆ ತಡರಾತ್ರಿವರೆಗೂ ಹೊರಗೆ ಇರುತ್ತಿದ್ದರಿಂದ ಕೋಪಗೊಂಡು ಗುಂಡಿಕ್ಕಿ ಹತ್ಯೆ ಮಾಡಿರುವುದಾಗಿ ಮಥುರಾ ಪೊಲೀಸ್ ಅಧೀಕ್ಷರು ತಿಳಿಸಿದ್ದಾರೆ. ನವೆಂಬರ್ 17 ರಂದು ಆಯುಷಿಯನ್ನು ತನ್ನ ಪರವಾನಗಿ ಪಡೆದ ಗನ್ನಿಂದ ಶೂಟ್ ಮಾಡಿದ ನಂತರ ಯಾದವ್ , ಶವವನ್ನು 12 ಗಂಟೆಗಳ ಕಾಲ ಮನೆಯಲ್ಲಿಯೇ ಇಟ್ಟುಕೊಂಡಿದ್ದ ಎಂದು ಆರೋಪಿಸಲಾಗಿದೆ. ಅವನು ಮತ್ತು ಆತನ ಹೆಂಡತಿ ತಡರಾತ್ರಿಯವರೆಗೂ ಕಾದು ನಂತರ ಶವವನ್ನು ಸೂಟ್ಕೇಸ್ನಲ್ಲಿ ಪ್ಯಾಕ್ ಮಾಡಿ ಮಥುರಾದಲ್ಲಿ ಎಸೆದಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕಳೆದ ಶುಕ್ರವಾರ ಮಥುರಾದ ಯಮುನಾ ಎಕ್ಸ್ಪ್ರೆಸ್ವೇ ಬಳಿ ದೊಡ್ಡ ಕೆಂಪು ಸೂಟ್ಕೇಸ್ನಲ್ಲಿ ಪ್ಲಾಸ್ಟಿಕ್ನಲ್ಲಿ ಸುತ್ತಿದ ಶವ ಪತ್ತೆಯಾಗಿದೆ. ಸೂಟ್ಕೇಸ್ ಗಮನಿಸಿದ ಕಾರ್ಮಿಕರು ಪೊಲೀಸರಿಗೆ ಕರೆ ಮಾಡಿದ್ದಾರೆ. ಆಯುಷಿಯನ್ನು ಆಕೆಯ ತಂದೆ ನಿತೇಶ್ ಯಾದವ್ ಕೊಂದಿರುವುದು ಆಕೆಯ ತಾಯಿ ಮತ್ತು ಸಹೋದರನಿಗೆ ತಿಳಿದಿತ್ತು ಎಂದು ಪೊಲೀಸರು ಹೇಳಿದ್ದಾರೆ.
ಸೂಟ್ಕೇಸ್ ವಶಪಡಿಸಿಕೊಂಡ ನಂತರ, ಪೊಲೀಸರು ಫೋನ್ ಪತ್ತೆಹಚ್ಚುವ ಮೂಲಕ ತನಿಖೆಯನ್ನು ಪ್ರಾರಂಭಿಸಿದರು, ಸಿಸಿಟಿವಿ ದೃಶ್ಯಗಳು ಮತ್ತು ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳನ್ನು ಪರಿಶೀಲಿಸಿದರು ಎಂದು ಅವರು ಹೇಳಿದ್ದಾರೆ.
ಆರಂಭದಲ್ಲಿ, ಆಕೆಯ ಗುರುತಿನ ಬಗ್ಗೆ ಸುಳಿವು ಇಲ್ಲದ ಯುಪಿ ಪೊಲೀಸರು ಸುಳಿವುಗಳಿಗಾಗಿ ಐದು ತಂಡಗಳನ್ನು ರಚಿಸಿದ್ದರು. ಆಕೆಯ ತಾಯಿ ಮತ್ತು ಸಹೋದರ ಅವಳನ್ನು ಗುರುತಿಸಲು ಮುಂದೆ ಬಂದಾಗ ಇದು ಬೆಳಕಿಗೆ ಬಂದಿತ್ತು. ಕರೆ ಮಾಡಿದ ಅಪರಿಚಿತರೊಬ್ಬರು ಭಾನುವಾರ ಬೆಳಿಗ್ಗೆ ಆಕೆಯ ಗುರುತನ್ನು ಬಹಿರಂಗಪಡಿಸಿದ್ದಾರೆ. ಮಥುರಾದ ಯಮುನಾ ಎಕ್ಸ್ಪ್ರೆಸ್ವೇನಲ್ಲಿರುವ ಕೃಷಿ ಸಂಶೋಧನಾ ಸಂಸ್ಥೆಯ ಬಳಿಯ ಸರ್ವಿಸ್ ರಸ್ತೆಯಲ್ಲಿ ಸೂಟ್ಕೇಸ್ನಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ತಲೆಗೆ ಗಾಯ ಮತ್ತು ಭುಜದ ಮೇಲೆ ಗಾಯವಾಗಿತ್ತು.
ಪೊಲೀಸರು ವಿಚಾರಣೆ ನಡೆಸಿದ ನಂತರ ಸಂತ್ರಸ್ತೆಯ ತಂದೆಯನ್ನು ಬಂಧಿಸಲಾಗಿದೆ. ದೆಹಲಿಯಲ್ಲಿಯೇ ನೆಲೆಸಿದ ನಿತೇಶ್ ಯಾದವ್ ಪ್ರಸ್ತುತ ಎಲೆಕ್ಟ್ರಾನಿಕ್ ಗ್ಯಾಜೆಟ್ಗಳನ್ನು ಮಾರಾಟ ಮಾಡುವ ಅಂಗಡಿಯನ್ನು ನಡೆಸುತ್ತಿದ್ದಾರೆ. ಮೃತಪಟ್ಟ ಆಯುಷಿ ಬಿಸಿಎ (ಬ್ಯಾಚುಲರ್ ಇನ್ ಕಂಪ್ಯೂಟರ್ ಅಪ್ಲಿಕೇಷನ್) ಕೋರ್ಸ್ ಓದುತ್ತಿದ್ದರು. ಆಯುಷಿ ತನ್ನ ಮನೆಯವರಿಗೆ ತಿಳಿಯದಂತೆ ಬೇರೆ ಜಾತಿಯ ಛತ್ರಪಾಲ್ ಚೌಧರಿ ಎಂಬ ವ್ಯಕ್ತಿಯನ್ನು ಮದುವೆಯಾಗಿದ್ದಳು ಎಂದು ತಿಳಿದುಬಂದಿದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago