Categories: Latest

“ಕಾಲೇಜಿಗೆ ಹೋಗ್ತೀನಿ ಅಂತ ಹೇಳಿ OYOಗೆ!” — ಮಗಳ ಮೇಲೆ ತಾಯಿ ದಾಳಿ ವಿಡಿಯೋ ವೈರಲ್.

ಇಂಟರ್‌ನೆಟ್ ಕ್ರಾಂತಿಯ ನಂತರ ಸ್ಮಾರ್ಟ್‌ಫೋನ್ ಪ್ರತಿಯೊಬ್ಬರ ಕೈಗೆ ತಲುಪಿದ ಪರಿಣಾಮ, ಸಾಮಾನ್ಯ ಜನರೂ ಈಗ ಕಂಟೆಂಟ್ ಕ್ರಿಯೇಟರ್‌ಗಳಾಗಿ ಪರಿಣಮಿಸಿದ್ದಾರೆ. ಈ ಹಿನ್ನೆಲೆ, ಯುವತಿ ಮತ್ತು ಆಕೆಯ ತಾಯಿ ನಡುವೆ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.

ವೈರಲ್ ವಿಡಿಯೋ ಪ್ರಕಾರ, ಯುವತಿ ತನ್ನ ಪ್ರಿಯಕರನೊಂದಿಗೆ OYO ಹೋಟೆಲ್ ರೂಮ್‌ನಲ್ಲಿ ಇದ್ದಾಗ, ಆಕೆಯ ತಾಯಿ ಪೊಲೀಸರೊಂದಿಗೆ ಅಚಾನಕ್ ದಾಳಿ ನಡೆಸಿರುವುದು ಕಾಣಿಸುತ್ತದೆ. “ಕಾಲೇಜಿಗೆ ಹೋಗ್ತೀನಿ ಅಂತ ಹೇಳಿ ಇಲ್ಲಿ ಏನು ಮಾಡ್ತಿದ್ದೀಯ?” ಎಂದು ತಾಯಿ ಪ್ರಶ್ನಿಸುತ್ತಿದ್ದಂತೆ, ಮಗಳು ಬೆಚ್ಚಿಬಿದ್ದಿರುವ ದೃಶ್ಯ ವಿಡಿಯೋದಲ್ಲಿ ಸ್ಪಷ್ಟವಾಗುತ್ತದೆ.

ಈ ವೇಳೆ ತಾಯಿ ಮತ್ತು ಮಗಳ ನಡುವೆ ವಾಗ್ವಾದವೂ ನಡೆಯುತ್ತದೆ. ಪಕ್ಕದಲ್ಲಿದ್ದ ವ್ಯಕ್ತಿಯೊಬ್ಬರು ಈ ಘಟನೆವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ವಿಡಿಯೋ ಕ್ಷಣಾರ್ಧದಲ್ಲಿ ವೈರಲ್ ಆಗಿದೆ. ಲಕ್ಷಾಂತರ ಮಂದಿ ಈ ವಿಡಿಯೋವನ್ನು ವೀಕ್ಷಿಸಿದ್ದಾರೆ.

ಆದರೆ, ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರ ನಡುವೆ ಸಂಶಯವೂ ಹುಟ್ಟಿಕೊಂಡಿದೆ. ಕೆಲವರು “ಇದು ಪೂರ್ವಯೋಜಿತ (pre-planned) ವಿಡಿಯೋ ಆಗಿರಬಹುದು” ಎಂದು ಹೇಳುತ್ತಿದ್ದರೆ, ಇನ್ನೂ ಕೆಲವರು “ನೈಸ್ ಸ್ಕ್ರಿಪ್ಟ್!” ಎಂದು ಪ್ರತಿಕ್ರಿಯಿಸಿದ್ದಾರೆ.

ಮತ್ತೊಂದೆಡೆ, ಕೆಲವು ಬಳಕೆದಾರರು ಈ ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡು, “ಪೋಷಕರು ತಮ್ಮ ಮಕ್ಕಳ ಚಟುವಟಿಕೆಗಳ ಮೇಲೆ ಗಮನ ಇರಿಸಬೇಕು. ಅವರು ಎಲ್ಲಿಗೆ ಹೋಗುತ್ತಾರೆ, ಯಾರ ಜೊತೆಗಿದ್ದಾರೆ ಎಂಬುದರ ಬಗ್ಗೆ ಅರಿವು ಇರಬೇಕು” ಎಂದು ಸಲಹೆ ನೀಡಿದ್ದಾರೆ.

ಒಟ್ಟಿನಲ್ಲಿ, ಈ ವಿಡಿಯೋ ನಿಜವಾದ ಘಟನೆನಾ ಅಥವಾ ಕೇವಲ ಸೋಶಿಯಲ್ ಮೀಡಿಯಾ ಕಂಟೆಂಟ್‌ಗಾಗಿ ರೂಪಿಸಿದ ನಾಟಕವೋ ಎಂಬುದರ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ.

ಭ್ರಷ್ಟರ ಬೇಟೆ

Recent Posts

ಯಾದಗಿರಿಯಲ್ಲಿ ಭೀಕರ ರಸ್ತೆ ದುರಂತ: ಕಾರು–ಬಸ್ ಡಿಕ್ಕಿ, 6 ಮಂದಿ ಸಜೀವ ದಹನ—ಹೃದಯ ಕಲುಕುವ ದೃಶ್ಯ

ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಆರು ಮಂದಿ ಸಜೀವ…

2 hours ago

ಧರ್ಮಾಧಾರಿತ ಮೀಸಲಾತಿಗೆ ಅವಕಾಶ ಇಲ್ಲ— ಲೋಕಸಭೆಯಲ್ಲಿ ಅಮಿತ್ ಶಾ ಕಠಿಣ ನಿಲುವು

ನವದೆಹಲಿ: ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವುದು ಎಂದರೆ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ನೀಡುವುದಾಗಿ ಅರ್ಥೈಸಿಕೊಳ್ಳಲಾಗುವುದಿಲ್ಲ ಎಂದು ಕೇಂದ್ರ ಗೃಹ…

4 hours ago

ಐಪಿಎಲ್ ಟಿಕೆಟ್ ಕಾಳಬಜಾರ್ ಭೇದಿಸಿದ ಸಿಸಿಬಿ! ₹1,200 ಟಿಕೆಟ್ ₹19,000ಕ್ಕೆ ಮಾರಾಟ—ಚಿನ್ನಸ್ವಾಮಿ ಒಳಗೇ ನಡೆಯುತ್ತಿದ್ದ ದೊಡ್ಡ ದಂಧೆ ಬಯಲು

ಬೆಂಗಳೂರು: ಐಪಿಎಲ್ ಹುಚ್ಚನ್ನು ದುರುಪಯೋಗಪಡಿಸಿಕೊಂಡು ಅಭಿಮಾನಿಗಳಿಂದ ಲಕ್ಷಾಂತರ ಹಣ ದೋಚುತ್ತಿದ್ದ ದೊಡ್ಡ ಟಿಕೆಟ್ ಕಾಳಬಜಾರ್ ಜಾಲವೊಂದನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ.…

7 hours ago

ಅಂಕೋಲ: ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಪೆಟ್ರೋಲಿಯಂ ಟ್ಯಾಂಕರ್ – ಸಂಚಾರ ಸ್ಥಗಿತ

ಅಂಕೋಲ: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕಂಚಿನಬಾಗಿಲು ಬಳಿ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಪೆಟ್ರೋಲಿಯಂ ಉತ್ಪನ್ನ ಹೊತ್ತೊಯ್ಯುತ್ತಿದ್ದ ಟ್ಯಾಂಕರ್…

20 hours ago

ಮುಂಡಗೋಡದಲ್ಲಿ ಯೂರಿಯಾ ಸಂಕಷ್ಟ ತಡೆಗೆ ಸಭೆ: ತಾಲೂಕು ರೈತರಿಗೆ ಮೊದಲ ಆದ್ಯತೆ ನೀಡಲು ಸೂಚನೆ

ಮುಂಡಗೋಡ: ಶಿರಸಿಯ ಕೃಷಿ ಉಪ ನಿರ್ದೇಶಕರಾದ ಪಾಂಡು ಅವರ ನೇತೃತ್ವದಲ್ಲಿ ಮುಂಡಗೋಡ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಬುಧವಾರ ರಸಗೊಬ್ಬರ ಮಾರಾಟಗಾರರ…

20 hours ago

ಸೋಷಿಯಲ್ ಮೀಡಿಯಾ ಪ್ರೇಮದ ಸೆಳೆತ: 40ರ ಮಹಿಳೆಗಾಗಿ ಮನೆಬಿಟ್ಟು ಓಡಿದ 21ರ ಯುವಕ!

ಇತ್ತೀಚಿನ ದಿನಗಳಲ್ಲಿ ಪ್ರೇಮದ ಪರಿಕಲ್ಪನೆಗಳು ಬದಲಾಗುತ್ತಿದ್ದು, ವಯಸ್ಸಿನ ಅಂತರವನ್ನೇ ಮೀರಿ ಸಂಬಂಧಗಳು ರೂಪುಗೊಳ್ಳುತ್ತಿರುವುದು ಗಮನಾರ್ಹ. ಹಿಂದೆ ಸಾಮಾನ್ಯವಾಗಿ ಹುಡುಗ ಹುಡುಗಿಗಿಂತ…

24 hours ago