ದಾವಣಗೆರೆ, ಆಗಸ್ಟ್ 06: ದಾವಣಗೆರೆ ಜಿಲ್ಲೆಯಲ್ಲಿ ಚಿರತೆಗಳ ದಾಳಿಯಿಂದ ಭೀಕರ ಘಟನೆ ನಡೆದಿದೆ. ಹರಿಹರ ತಾಲೂಕಿನ ಸಿರಿಗೆರೆ ಕ್ರಾಸ್ ಬಳಿ ಚಿರತೆಗಳು ಆಕ್ರಮಣ ನಡೆಸಿ 30ಕ್ಕೂ ಹೆಚ್ಚು ಕುರಿಗಳನ್ನು ಬಲಿ ತೆಗೆದುಕೊಂಡಿರುವ ಘಟನೆ ಸ್ಥಳೀಯರ್ನೆ ಬೆಚ್ಚಿ ಬೀಳಿಸಿದೆ.
ಘಟನೆ ಹಿನ್ನಲೆಯಲ್ಲಿ ದೊರೆತ ಮಾಹಿತಿಯ ಪ್ರಕಾರ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಗ್ರಾಮದ ಕುರಿಗಾಯಿಯಾದ ಸೋಮಣ್ಣನವರು ತಮ್ಮ ಕುರಿಗಳನ್ನು ದಾವಣಗೆರೆ ಜಿಲ್ಲೆಯ ಸಿರಿಗೆರೆ ಸಮೀಪದ ದಿಳ್ಳೆಪ್ಪ ಎಂಬ ರೈತನ ಅಡಿಕೆ ತೋಟದ ಬಳಿಯ ಕುರಿಹಟ್ಟಿಯಲ್ಲಿ ಇರಿಸಿದ್ದರು. ಮಂಗಳವಾರ ತಡರಾತ್ರಿ ಭಾರಿ ಮಳೆಯ ಹಿನ್ನೆಲೆಯಲ್ಲಿ ಕುರಿಗಾಯಿಗಳು ತಾತ್ಕಾಲಿಕವಾಗಿ ಎತ್ತರದ ಪ್ರದೇಶಕ್ಕೆ ಸ್ಥಳಾಂತರಗೊಂಡಿದ್ದರು. ಈ ಸಮಯದಲ್ಲಿ ಎರಡು ಮೂರು ಕೊಟ್ಟಿಗೆ ಚಿರತೆಗಳು ಹಟ್ಟಿಗೆ ನುಗ್ಗಿ, ಭೀಕರ ದಾಳಿ ನಡೆಸಿವೆ.
ಚಿರತೆಗಳು ಹಟ್ಟಿಯಲ್ಲಿ ಸಿಕ್ಕ ಸಿಕ್ಕ ಕುರಿಗಳ ಮೇಲೆ ದಾಳಿ ಮಾಡಿ ಕೆಲವೊಂದಿಷ್ಟು ಕುರಿಗಳನ್ನು ಸ್ಥಳದಲ್ಲೇ ಹತ್ಯೆ ಮಾಡಿದ್ದು, ಕೆಲವನ್ನಾಗಿ ಅರ್ಧಂಬರ್ಧ ಕಚ್ಚಿ ತಿಂದು ಪರಾರಿಯಾಗಿವೆ. ಪರಿಣಾಮ 30ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ್ದು, ಸೋಮಣ್ಣ ಮತ್ತು ಅವರ ಸಹಚರರು ಬೆಚ್ಚಿ ಬಿದ್ದಿದ್ದಾರೆ.
ಘಟನೆ ಕುರಿತು ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅಧಿಕಾರಿಗಳು ಕೂಡ ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಸುತ್ತಮುತ್ತಲಿನ ಪ್ರದೇಶದಲ್ಲಿಎರಡು ಮೂರು ಚಿರತೆಗಳು ಚಲನವಲನ ನಡೆಸುತ್ತಿರುವ ಮಾಹಿತಿಯಿದ್ದು, ಗ್ರಾಮಸ್ಥರಿಗೆ ಎಚ್ಚರಿಕೆ ನೀಡಲಾಗಿದೆ.
ಅರಣ್ಯ ಇಲಾಖೆ ಹೆಚ್ಚಿನ ನಿಗಾವಹಿಸಿ, ಚಿರತೆಗಳನ್ನು ಹಿಡಿಯಲು ಕ್ರಮ ಕೈಗೊಳ್ಳುತ್ತಿದೆ. ಈ ನಡುವೆ ಕುರಿಗಾಯಿಗಳು ಅಧಿಕಾರಿಗಳಿಂದ ಸೂಕ್ತ ಪರಿಹಾರದ ನಿರೀಕ್ಷೆಯಲ್ಲಿದ್ದಾರೆ.
ತುಮಕೂರು ಜಿಲ್ಲೆಯ ಮದರಸಾವೊಂದರಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯ ದೌರ್ಜನ್ಯ ಮತ್ತು ಬಾಲಕಾರ್ಮಿಕ ಶೋಷಣೆ ನಡೆಸಲಾಗುತ್ತಿದ್ದ ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ…
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…