Latest

ದಾವಣಗೆರೆ: ಸಿರಿಗೆರೆ ಬಳಿ ಚಿರತೆಗಳ ದಾಳಿ – 30ಕ್ಕೂ ಹೆಚ್ಚು ಕುರಿಗಳು ಬಲಿಯಾದ ಭೀಕರ ಘಟನೆ

ದಾವಣಗೆರೆ, ಆಗಸ್ಟ್ 06: ದಾವಣಗೆರೆ ಜಿಲ್ಲೆಯಲ್ಲಿ ಚಿರತೆಗಳ ದಾಳಿಯಿಂದ ಭೀಕರ ಘಟನೆ ನಡೆದಿದೆ. ಹರಿಹರ ತಾಲೂಕಿನ ಸಿರಿಗೆರೆ ಕ್ರಾಸ್ ಬಳಿ ಚಿರತೆಗಳು ಆಕ್ರಮಣ ನಡೆಸಿ 30ಕ್ಕೂ ಹೆಚ್ಚು ಕುರಿಗಳನ್ನು ಬಲಿ ತೆಗೆದುಕೊಂಡಿರುವ ಘಟನೆ ಸ್ಥಳೀಯರ್ನೆ ಬೆಚ್ಚಿ ಬೀಳಿಸಿದೆ.

ಘಟನೆ ಹಿನ್ನಲೆಯಲ್ಲಿ ದೊರೆತ ಮಾಹಿತಿಯ ಪ್ರಕಾರ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಗ್ರಾಮದ ಕುರಿಗಾಯಿಯಾದ ಸೋಮಣ್ಣನವರು ತಮ್ಮ ಕುರಿಗಳನ್ನು ದಾವಣಗೆರೆ ಜಿಲ್ಲೆಯ ಸಿರಿಗೆರೆ ಸಮೀಪದ ದಿಳ್ಳೆಪ್ಪ ಎಂಬ ರೈತನ ಅಡಿಕೆ ತೋಟದ ಬಳಿಯ ಕುರಿಹಟ್ಟಿಯಲ್ಲಿ ಇರಿಸಿದ್ದರು. ಮಂಗಳವಾರ ತಡರಾತ್ರಿ ಭಾರಿ ಮಳೆಯ ಹಿನ್ನೆಲೆಯಲ್ಲಿ ಕುರಿಗಾಯಿಗಳು ತಾತ್ಕಾಲಿಕವಾಗಿ ಎತ್ತರದ ಪ್ರದೇಶಕ್ಕೆ ಸ್ಥಳಾಂತರಗೊಂಡಿದ್ದರು. ಈ ಸಮಯದಲ್ಲಿ ಎರಡು ಮೂರು ಕೊಟ್ಟಿಗೆ ಚಿರತೆಗಳು ಹಟ್ಟಿಗೆ ನುಗ್ಗಿ, ಭೀಕರ ದಾಳಿ ನಡೆಸಿವೆ.

ಚಿರತೆಗಳು ಹಟ್ಟಿಯಲ್ಲಿ ಸಿಕ್ಕ ಸಿಕ್ಕ ಕುರಿಗಳ ಮೇಲೆ ದಾಳಿ ಮಾಡಿ ಕೆಲವೊಂದಿಷ್ಟು ಕುರಿಗಳನ್ನು ಸ್ಥಳದಲ್ಲೇ ಹತ್ಯೆ ಮಾಡಿದ್ದು, ಕೆಲವನ್ನಾಗಿ ಅರ್ಧಂಬರ್ಧ ಕಚ್ಚಿ ತಿಂದು ಪರಾರಿಯಾಗಿವೆ. ಪರಿಣಾಮ 30ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ್ದು, ಸೋಮಣ್ಣ ಮತ್ತು ಅವರ ಸಹಚರರು ಬೆಚ್ಚಿ ಬಿದ್ದಿದ್ದಾರೆ.

ಘಟನೆ ಕುರಿತು ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅಧಿಕಾರಿಗಳು ಕೂಡ ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಸುತ್ತಮುತ್ತಲಿನ ಪ್ರದೇಶದಲ್ಲಿಎರಡು ಮೂರು ಚಿರತೆಗಳು ಚಲನವಲನ ನಡೆಸುತ್ತಿರುವ ಮಾಹಿತಿಯಿದ್ದು, ಗ್ರಾಮಸ್ಥರಿಗೆ ಎಚ್ಚರಿಕೆ ನೀಡಲಾಗಿದೆ.

ಅರಣ್ಯ ಇಲಾಖೆ ಹೆಚ್ಚಿನ ನಿಗಾವಹಿಸಿ, ಚಿರತೆಗಳನ್ನು ಹಿಡಿಯಲು ಕ್ರಮ ಕೈಗೊಳ್ಳುತ್ತಿದೆ. ಈ ನಡುವೆ ಕುರಿಗಾಯಿಗಳು ಅಧಿಕಾರಿಗಳಿಂದ ಸೂಕ್ತ ಪರಿಹಾರದ ನಿರೀಕ್ಷೆಯಲ್ಲಿದ್ದಾರೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

12 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

12 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

12 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

12 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago