Latest

ತುಮಕೂರಿನಲ್ಲಿ ಲಾಡ್ಜ್ ರೂಂನಲ್ಲಿ ನೇಣುಬಿಗಿದುಕೊಂಡು ಸಾವಿಗೆ ಶರಣಾದ ದಾವಣಗೆರೆ PSI

ತುಮಕೂರು, ಜುಲೈ 6: ದಾವಣಗೆರೆ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಸೇವೆ ನಿರ್ವಹಿಸುತ್ತಿದ್ದ ಸಬ್ ಇನ್ಸ್‌ಪೆಕ್ಟರ್ (PSI) ಆತ್ಮಹತ್ಯೆಗೆ ಶರಣಾಗಿರುವ ದುಃಖದ ಘಟನೆ ತುಮಕೂರು ನಗರದಲ್ಲಿ ಬೆಳಕಿಗೆ ಬಂದಿದೆ. ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 58 ವರ್ಷದ ನಾಗರಾಜು ಅವರು, ತುಮಕೂರಿನ ದ್ವಾರಕಾ ಹೋಟೆಲ್ ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಸಾವಿಗೀಡಾಗಿದ್ದಾರೆ.

ಜುಲೈ 1ರಂದು ಲಾಡ್ಜ್‌ನ ನಾಲ್ಕನೇ ಮಹಡಿಯಲ್ಲಿರುವ ರೂಂ ಒಂದನ್ನು ಬಾಡಿಗೆಗೆ ತೆಗೆದುಕೊಂಡಿದ್ದ ನಾಗರಾಜು, ಅದೇ ಕೋಣೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ನಾಲ್ಕು ದಿನಗಳ ನಂತರ ಲಾಡ್ಜ್‌ ಸಿಬ್ಬಂದಿಗೆ ಕೋಣೆಯಿಂದ ದುರ್ವಾಸನೆ ಹರಡಿದ್ದು, ಸ್ಥಳಕ್ಕೆ ಭೇಟಿ ನೀಡಿದಾಗ ಈ ದುರ್ಘಟನೆ ಬೆಳಕಿಗೆ ಬಂದಿದೆ.

ತಕ್ಷಣ ಸ್ಥಳಕ್ಕೆ ಧಾವಿಸಿದ ತುಮಕೂರು ನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣದ ಸಂಬಂಧ ತನಿಖೆ ಪ್ರಾರಂಭಿಸಿದ್ದಾರೆ. ಮೂಲಗಳ ಪ್ರಕಾರ, ಮೃತ ನಾಗರಾಜು ಸಾವಿಗೆ ಮೊದಲು ಸುಮಾರು ಮೂರು ಪುಟಗಳ ಡೆತ್ ನೋಟು ಬರೆದಿದ್ದು, “ನನ್ನ ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ. ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ನನ್ನದೇ ನಿರ್ಧಾರ” ಎಂದು ಬರೆದಿರುವುದಾಗಿ ತಿಳಿದು ಬಂದಿದೆ. ಆದರೆ ಡೆತ್ ನೋಟಿನ ಸಂಪೂರ್ಣ ವಿವರ ಇನ್ನೂ ಬಹಿರಂಗವಾಗಿಲ್ಲ.

ಆರೋಗ್ಯ ಸಮಸ್ಯೆ, ಮಾನಸಿಕ ಒತ್ತಡ?

ಮೃತರು ದಾವಣಗೆರೆ ತಾಲೂಕಿನ ಜವಳಘಟ್ಟ ಗ್ರಾಮದ ನಿವಾಸಿಯಾಗಿದ್ದು, ಸದ್ಯ ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಮತ್ತೂ ಒಂದೂವರೆ ವರ್ಷದಲ್ಲಿ ನಿವೃತ್ತಿ ಹೊಂದಬೇಕಾಗಿದ್ದ ನಾಗರಾಜು, ನಿವೃತ್ತಿ ಜೀವನವನ್ನು ಕುಟುಂಬದೊಂದಿಗೆ ಕಳೆದಿರಬಹುದಾಗಿತ್ತು. ಆದರೆ ಆ ನಿರೀಕ್ಷೆಗೆ ಇದೊಂದು ಭೀಕರ ಅಂತ್ಯವಾಗಿದೆ.

ಮೃತರ ಪತ್ನಿ ಲಲಿತಮ್ಮ ಮಾತುಗಳು ಹೃದಯವಿದ್ರಾವಕವಾಗಿದ್ದು, “ ಜುಲೈ 1ರಂದು ಮನೆಯಿಂದ ಹೊರಡಿದ ಬಳಿಕ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ನಾಪತ್ತೆ ಪ್ರಕರಣವನ್ನು ದಾವಣಗೆರೆ ಕೆಟಿಜೆ ನಗರ ಠಾಣೆಯಲ್ಲಿ ದಾಖಲಿಸಿದ್ದೆವು. ಈಗ ಅವರ ಸಾವಿನ ಸುದ್ದಿ ಕೇಳಿ ಶಾಕ್ ಆಗಿದ್ದೇವೆ,” ಎಂದು ತಿಳಿಸಿದ್ದಾರೆ.

ಅಲ್ಲದೆ, “ಅವರಿಗೆ ಶುಗರ್, ಬಿಪಿ, ಹೃದಯ ಸಂಬಂಧಿ ಕಾಯಿಲೆ ಇದ್ದವು. ಇತ್ತೀಚೆಗೆ ಅವರ ಆರೋಗ್ಯದಲ್ಲಿ ಏರುಪೇರುಗಳೂ ಕಂಡುಬಂದಿದ್ದವು. ಕಳೆದ ವರ್ಷ ಮಗಳ ಮದುವೆ ಮಾಡಿದ್ದೆವು, ಮುಂದಿನ ತಿಂಗಳು ಮಗಳ ಹೆರಿಗೆ ಇದೆ. ಇಂತಹ ಸಂದರ್ಭದಲ್ಲಿ ಇಂಥ ತೀರ್ಮಾನಕ್ಕೆ ಏಕೆ ಬಂದರು ಎಂಬುದು ಅರ್ಥವಾಗುತ್ತಿಲ್ಲ” ಎಂದು ಕಣ್ಣೀರಲ್ಲಿ ಹೇಳಿದರು.

ಪೊಲೀಸರ ತನಿಖೆ ಮುಂದುವರಿಕೆ

ಪಿಎಸ್‌ಐ ನಾಗರಾಜು ಆತ್ಮಹತ್ಯೆಗೆ ಕಾರಣಗಳ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಡೆತ್ ನೋಟಿನ ವಿಷಯ, ಆರೋಗ್ಯ ಸ್ಥಿತಿ, ವ್ಯಕ್ತಿಗತ ಒತ್ತಡಗಳು ಸೇರಿದಂತೆ ಎಲ್ಲ ಮೂಲಗಳನ್ನು ಪರಿಶೀಲಿಸಲಾಗುತ್ತಿದೆ.

ಈ ಘಟನೆ ಪೊಲೀಸ್ ಇಲಾಖೆ ಹಾಗೂ ನಾಗರಾಜು ಅವರ ಕುಟುಂಬದಲ್ಲಿ ಆಘಾತವನ್ನುಂಟು ಮಾಡಿದ್ದು, ಹಿರಿಯ ಅಧಿಕಾರಿಗಳು ಮರಣೋತ್ತರ ವರದಿ ಹಾಗೂ ಡೆತ್ ನೋಟಿನ ವಿವರದೊಂದಿಗೆ ಮುನ್ನಡೆ ನಡೆಸುತ್ತಿದ್ದಾರೆ.

nazeer ahamad

Recent Posts

ಬಾಗಲಕೋಟೆ ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…

2 days ago

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

2 months ago