Latest

ತುಮಕೂರಿನಲ್ಲಿ ಲಾಡ್ಜ್ ರೂಂನಲ್ಲಿ ನೇಣುಬಿಗಿದುಕೊಂಡು ಸಾವಿಗೆ ಶರಣಾದ ದಾವಣಗೆರೆ PSI

ತುಮಕೂರು, ಜುಲೈ 6: ದಾವಣಗೆರೆ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಸೇವೆ ನಿರ್ವಹಿಸುತ್ತಿದ್ದ ಸಬ್ ಇನ್ಸ್‌ಪೆಕ್ಟರ್ (PSI) ಆತ್ಮಹತ್ಯೆಗೆ ಶರಣಾಗಿರುವ ದುಃಖದ ಘಟನೆ ತುಮಕೂರು ನಗರದಲ್ಲಿ ಬೆಳಕಿಗೆ ಬಂದಿದೆ. ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 58 ವರ್ಷದ ನಾಗರಾಜು ಅವರು, ತುಮಕೂರಿನ ದ್ವಾರಕಾ ಹೋಟೆಲ್ ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಸಾವಿಗೀಡಾಗಿದ್ದಾರೆ.

ಜುಲೈ 1ರಂದು ಲಾಡ್ಜ್‌ನ ನಾಲ್ಕನೇ ಮಹಡಿಯಲ್ಲಿರುವ ರೂಂ ಒಂದನ್ನು ಬಾಡಿಗೆಗೆ ತೆಗೆದುಕೊಂಡಿದ್ದ ನಾಗರಾಜು, ಅದೇ ಕೋಣೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ನಾಲ್ಕು ದಿನಗಳ ನಂತರ ಲಾಡ್ಜ್‌ ಸಿಬ್ಬಂದಿಗೆ ಕೋಣೆಯಿಂದ ದುರ್ವಾಸನೆ ಹರಡಿದ್ದು, ಸ್ಥಳಕ್ಕೆ ಭೇಟಿ ನೀಡಿದಾಗ ಈ ದುರ್ಘಟನೆ ಬೆಳಕಿಗೆ ಬಂದಿದೆ.

ತಕ್ಷಣ ಸ್ಥಳಕ್ಕೆ ಧಾವಿಸಿದ ತುಮಕೂರು ನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣದ ಸಂಬಂಧ ತನಿಖೆ ಪ್ರಾರಂಭಿಸಿದ್ದಾರೆ. ಮೂಲಗಳ ಪ್ರಕಾರ, ಮೃತ ನಾಗರಾಜು ಸಾವಿಗೆ ಮೊದಲು ಸುಮಾರು ಮೂರು ಪುಟಗಳ ಡೆತ್ ನೋಟು ಬರೆದಿದ್ದು, “ನನ್ನ ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ. ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ನನ್ನದೇ ನಿರ್ಧಾರ” ಎಂದು ಬರೆದಿರುವುದಾಗಿ ತಿಳಿದು ಬಂದಿದೆ. ಆದರೆ ಡೆತ್ ನೋಟಿನ ಸಂಪೂರ್ಣ ವಿವರ ಇನ್ನೂ ಬಹಿರಂಗವಾಗಿಲ್ಲ.

ಆರೋಗ್ಯ ಸಮಸ್ಯೆ, ಮಾನಸಿಕ ಒತ್ತಡ?

ಮೃತರು ದಾವಣಗೆರೆ ತಾಲೂಕಿನ ಜವಳಘಟ್ಟ ಗ್ರಾಮದ ನಿವಾಸಿಯಾಗಿದ್ದು, ಸದ್ಯ ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಮತ್ತೂ ಒಂದೂವರೆ ವರ್ಷದಲ್ಲಿ ನಿವೃತ್ತಿ ಹೊಂದಬೇಕಾಗಿದ್ದ ನಾಗರಾಜು, ನಿವೃತ್ತಿ ಜೀವನವನ್ನು ಕುಟುಂಬದೊಂದಿಗೆ ಕಳೆದಿರಬಹುದಾಗಿತ್ತು. ಆದರೆ ಆ ನಿರೀಕ್ಷೆಗೆ ಇದೊಂದು ಭೀಕರ ಅಂತ್ಯವಾಗಿದೆ.

ಮೃತರ ಪತ್ನಿ ಲಲಿತಮ್ಮ ಮಾತುಗಳು ಹೃದಯವಿದ್ರಾವಕವಾಗಿದ್ದು, “ ಜುಲೈ 1ರಂದು ಮನೆಯಿಂದ ಹೊರಡಿದ ಬಳಿಕ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ನಾಪತ್ತೆ ಪ್ರಕರಣವನ್ನು ದಾವಣಗೆರೆ ಕೆಟಿಜೆ ನಗರ ಠಾಣೆಯಲ್ಲಿ ದಾಖಲಿಸಿದ್ದೆವು. ಈಗ ಅವರ ಸಾವಿನ ಸುದ್ದಿ ಕೇಳಿ ಶಾಕ್ ಆಗಿದ್ದೇವೆ,” ಎಂದು ತಿಳಿಸಿದ್ದಾರೆ.

ಅಲ್ಲದೆ, “ಅವರಿಗೆ ಶುಗರ್, ಬಿಪಿ, ಹೃದಯ ಸಂಬಂಧಿ ಕಾಯಿಲೆ ಇದ್ದವು. ಇತ್ತೀಚೆಗೆ ಅವರ ಆರೋಗ್ಯದಲ್ಲಿ ಏರುಪೇರುಗಳೂ ಕಂಡುಬಂದಿದ್ದವು. ಕಳೆದ ವರ್ಷ ಮಗಳ ಮದುವೆ ಮಾಡಿದ್ದೆವು, ಮುಂದಿನ ತಿಂಗಳು ಮಗಳ ಹೆರಿಗೆ ಇದೆ. ಇಂತಹ ಸಂದರ್ಭದಲ್ಲಿ ಇಂಥ ತೀರ್ಮಾನಕ್ಕೆ ಏಕೆ ಬಂದರು ಎಂಬುದು ಅರ್ಥವಾಗುತ್ತಿಲ್ಲ” ಎಂದು ಕಣ್ಣೀರಲ್ಲಿ ಹೇಳಿದರು.

ಪೊಲೀಸರ ತನಿಖೆ ಮುಂದುವರಿಕೆ

ಪಿಎಸ್‌ಐ ನಾಗರಾಜು ಆತ್ಮಹತ್ಯೆಗೆ ಕಾರಣಗಳ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಡೆತ್ ನೋಟಿನ ವಿಷಯ, ಆರೋಗ್ಯ ಸ್ಥಿತಿ, ವ್ಯಕ್ತಿಗತ ಒತ್ತಡಗಳು ಸೇರಿದಂತೆ ಎಲ್ಲ ಮೂಲಗಳನ್ನು ಪರಿಶೀಲಿಸಲಾಗುತ್ತಿದೆ.

ಈ ಘಟನೆ ಪೊಲೀಸ್ ಇಲಾಖೆ ಹಾಗೂ ನಾಗರಾಜು ಅವರ ಕುಟುಂಬದಲ್ಲಿ ಆಘಾತವನ್ನುಂಟು ಮಾಡಿದ್ದು, ಹಿರಿಯ ಅಧಿಕಾರಿಗಳು ಮರಣೋತ್ತರ ವರದಿ ಹಾಗೂ ಡೆತ್ ನೋಟಿನ ವಿವರದೊಂದಿಗೆ ಮುನ್ನಡೆ ನಡೆಸುತ್ತಿದ್ದಾರೆ.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago