Categories: CrimeLatest

ಮೀಟರ್ ಬಡ್ಡಿ ದಂದೆಕೋರನ ಮೇಲೆ ಡೆಡ್ಲಿ ಅಟ್ಯಾಕ್, ಮರ್ಡರ್ : ಆರೋಪಿಗಳ ಬಂಧನ

ಮುಂಡಗೋಡ: ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರಿನ ಅಂಬಿಕಾ ಸಾವಜಿ ಹೋಟೆಲ್‌ನಲ್ಲಿ ಊಟಕ್ಕೆ ಕುಳಿತಿದ್ದಾಗ ನಡೆದಿದ್ದ ರೌಡಿ ಶೀಟರ್ ಜಮೀರ್ ಅಹ್ಮದ್ ದರ್ಗಾವಾಲೆ (38) ಅವರ ಭೀಕರ ಕೊಲೆ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳಲ್ಲಿ ಭೇದಿಸಿದ್ದಾರೆ.

ಮೀಟರ್ ಬಡ್ಡಿ ವ್ಯವಹಾರದ ಹಳೇ ದ್ವೇಷಕ್ಕೆ ಸುಪಾರಿ ನೀಡಿ ಈ ಕೊಲೆ ಮಾಡಿಸಲಾಗಿದ್ದು, ಮುಂಡಗೋಡ ಪೊಲೀಸರು ಒಟ್ಟು ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರೌಡಿ ಶೀಟರ್ ಆಗಿದ್ದ ಜಮೀರ್ ಅಹ್ಮದ್ ಅವರು ದಿನಾಂಕ 24/04/2026 ರಂದು ರಾತ್ರಿ ಅಂಬಿಕಾ ಸಾವಜಿ ಹೋಟೆಲ್‌ಗೆ ಊಟಕ್ಕೆ ತೆರಳಿದ್ದರು. ಈ ವೇಳೆ ಹೊಂಚು ಹಾಕಿ ಬಂದಿದ್ದ ಹಂತಕರ ತಂಡ, ಹರಿತವಾದ ಆಯುಧಗಳಿಂದ ಅವರ ಮೇಲೆ ಏಕಾಏಕಿ ಮರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿತ್ತು.

ಈ ಸಂಬಂಧ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ತನಿಖೆಯ ವೇಳೆ ಈ ಕೊಲೆಗೆ ‘ಮೀಟರ್ ಬಡ್ಡಿ’ ವ್ಯವಹಾರದ ಹಗೆತನವೇ ಕಾರಣ ಎಂಬುದು ಬಯಲಾಗಿದೆ. ಮೊದಲನೇ ಆರೋಪಿ ಮಂಜುನಾಥ ಕಾಜಗಾರ ಮತ್ತು ಮೃತ ಜಮೀರ್ ಅಹ್ಮದ್ ನಡುವೆ ಹಣಕಾಸಿನ ವಿಚಾರವಾಗಿ ಮನಸ್ತಾಪ ಉಂಟಾಗಿತ್ತು.
ಇದೇ ಕಾರಣಕ್ಕೆ ಮಂಜುನಾಥ ಇತರ ನಾಲ್ವರಿಗೆ ಸುಪಾರಿ ನೀಡಿ ಜಮೀರ್‌ನನ್ನು ಮುಗಿಸಲು ಪ್ಲಾನ್ ಮಾಡಿದ್ದ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಬಂಧಿತರನ್ನು ಮಂಜುನಾಥ ಕಾಜಗಾರ, ಶ್ರೀಕಾಂತ ಕಿರಣಗಿ, ಮಂಜುನಾಥ ಬೆಳಗಾಂವ, ಅಭಿಷೇಕ ಬದಶೆಟ್ಟಿ ಮತ್ತು ದೀಪಕ ನವಲೆ ಎಂದು ಗುರುತಿಸಲಾಗಿದೆ. ಇವರು ಕೃತ್ಯಕ್ಕೆ ಬಳಸಿದ್ದ ಒಂದು ಕಾರು, ಎರಡು ಬೈಕ್ ಹಾಗೂ ಒಂದು ಕಂಟ್ರಿ ಮೇಡ್ ಪಿಸ್ತೂಲ್ ಮತ್ತು ಆರು ಗುಂಡುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಉತ್ತರ ಕನ್ನಡ ಎಸ್ಪಿ ದೀಪನ್ ಎಮ್.ಎನ್, ಹೆಚ್ಚುವರಿ ಎಸ್ಪಿ ಕೃಷ್ಣಮೂರ್ತಿ, ಶಿರಸಿ ಡಿವೈಎಸ್ಪಿ ಶ್ರೀಮತಿ ಗೀತಾ ಪಾಟೀಲ್, ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್, ಗೋಕರ್ಣ ಠಾಣೆ ಪಿಐ ಶ್ರೀಧರ ಎಸ್.ಆರ್, ಪಿಎಸ್ಐ ಮಂಜುನಾಥ ಗೌಡರ, ಚಿತ್ತಾಕುಲ ಠಾಣೆ ಪಿಎಸ್ಐ ಪರಶುರಾಮ ಮಿರ್ಜಗಿ, ಯಲ್ಲಾಪುರ ಠಾಣೆ ಪಿಎಸ್ಐ ರಾಜಶೇಖರ ವಂದಲಿ ರವರ ನೇತೃತ್ವದಲ್ಲಿ, ಮುಂಡಗೋಡ ಠಾಣೆ ಸಿಬ್ಬಂದಿಗಳಾದ ತಿರುಪತಿ ಚೌಡಣ್ಣನವರ, ಲಂಬಾಣಿ ಬಸವರಾಜ, ಮಹಾಂತೇಶ ಮುಧೋಳ, ಮುತ್ತಣ್ಣ ಭೋದಿ, ನಾಗಪ್ಪ ಮೋರಟಗಿ, ಸಂಜು ರಾಠೋಡ, ಮಂಜುನಾಥ ಓಣಿಕೇರಿ, ಬಸವರಾಜ ಒಡೆಯರ್, ಯಲ್ಲಾಪುರ ಪೋಲೀಸ್ ಠಾಣೆಯ ಸಿಬ್ಬಂದಿಗಳಾದ ಮಹಮ್ಮದ ಶಫೀ ಶೇಖ, ಬಸವರಾಜ ಹಗರಿ, ಪ್ರವೀಣ ಪೂಜಾರ, ಗೊಂಕರ್ಣ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಶ್ರೀಕಾಂತ ಕಟಟರ ಹಾಗೂ ಟೇಕ್ನಿಕಲ್ ಸೆಲ್ ಕಾರವಾರದ ಸಿಬ್ಬಂದಿಯಾದ ಉದಯ ಗುನಗಾ, ಬಬನ್ ಕದಂ ರವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಭ್ರಷ್ಟರ ಬೇಟೆ

Recent Posts

ರಾಂಪೂರ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರ ಬದಲಾವಣೆಗೆ ವಿದ್ಯಾರ್ಥಿಗಳ ಪಟ್ಟು

ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು ರಾಂಪೂರ (ಆರ್.ಸಿ) ಗ್ರಾಮದಲ್ಲಿ ಇಂದು ವಿದ್ಯಾರ್ಥಿಗಳು ಅತಿಥಿ ಉಪನ್ಯಾಸಕರ…

6 hours ago

ಫೇಕ್ ಅಟ್ರಾಸಿಟಿ ಕೇಸ್ ಆರೋಪ: ಮನನೊಂದು ವಿಷ ಸೇವಿಸಿದ ವ್ಯಾಪಾರಿ ಸಾವು, ಹಲವು ಮಂದಿ ಪೊಲೀಸರ ವಶಕ್ಕೆ

ಬೆಂಗಳೂರು ಹೊರವಲಯದ ಕಾಡುಗೋಡಿ ಸಮೀಪದ ಚನ್ನಸಂದ್ರದ ಎಕೆಜಿ ಕಾಲೋನಿಯಲ್ಲಿ ಫೇಕ್ ಅಟ್ರಾಸಿಟಿ ಕೇಸ್‌ನಿಂದ ಮನನೊಂದು ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ…

10 hours ago

ತಾಯಿ-ಮಗಳು ಪ್ರೇಮಕಥೆಯ ಶಾಕ್ ಟ್ವಿಸ್ಟ್: ಒಂದೇ ಕುಟುಂಬದಲ್ಲಿ ಬಯಲಾದ ಅಕ್ರಮ ಸಂಬಂಧದ ಜಾಲ, ತಾಯಿ ಸಾವಿನಲ್ಲಿ ಅಂತ್ಯ!

ಜೈಪುರದ ಅರಂಗೇರಿ ಪ್ರದೇಶದಲ್ಲಿ ನಡೆದ ವಿಚಿತ್ರ ಘಟನೆ ಕುಟುಂಬದೊಳಗಿನ ಅಕ್ರಮ ಸಂಬಂಧಗಳ ಜಾಲವನ್ನು ಬಹಿರಂಗಪಡಿಸಿದ್ದು, ಕೊನೆಗೆ ಮಹಿಳೆಯೊಬ್ಬಳ ಸಾವಿನಲ್ಲಿ ಅಂತ್ಯಗೊಂಡಿದೆ.…

10 hours ago

ಬೈಕ್ ಪಾರ್ಕಿಂಗ್ ಜಗಳಕ್ಕೆ ರಕ್ತರಂಜಿತ ಅಂತ್ಯ: ಮಹಿಳೆ ಹತ್ಯೆ, ಪತಿ ಗಂಭೀರ

ದೆಹಲಿಯ ನೈಋತ್ಯ ಭಾಗದ ಬಿಂದಾಪುರದಲ್ಲಿ ಬೈಕ್ ಪಾರ್ಕಿಂಗ್ ವಿಚಾರವಾಗಿ ಆರಂಭವಾದ ಜಗಳ ಭೀಕರ ಹತ್ಯೆಯಲ್ಲಿ ಅಂತ್ಯಗೊಂಡಿದೆ. ನೆರೆಹೊರೆಯವರೊಂದಿಗೆ ಉಂಟಾದ ವಾಗ್ವಾದದ…

10 hours ago

ಪತ್ನಿಯೊಂದಿಗೆ ಸಂಬಂಧದ ಶಂಕೆ: ವ್ಯಕ್ತಿಯ ಹತ್ಯೆ, ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಅನೈತಿಕ ಸಂಬಂಧದ ಶಂಕೆ ಹಿನ್ನೆಲೆ ವ್ಯಕ್ತಿಯೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ…

10 hours ago

ಗೋಹತ್ಯೆ ಪ್ರಕರಣಗಳ ಹಿನ್ನೆಲೆ: ಭಟ್ಕಳದ ಇಸ್ಮಾಯಿಲ್ ಹವ್ವಾ 6 ತಿಂಗಳು ಗಡಿಪಾರು, ರಾಯಚೂರಿಗೆ ಸ್ಥಳಾಂತರ

ಭಟ್ಕಳ: ಭಟ್ಕಳ ಶಹರ ಪೊಲೀಸ್ ಠಾಣಾ ವ್ಯಾಪ್ತಿಯ ಮೂಸಾನಗರ ನಿವಾಸಿ ಇಸ್ಮಾಯಿಲ್ ಹವ್ವಾ (46) ಅವರನ್ನು ಆರು ತಿಂಗಳ ಅವಧಿಗೆ…

10 hours ago