Categories: CrimeLatest

ಬದುಕಿರುವ ಗಂಡನಿಗೆ ಮರಣ ಪತ್ರ: ಪತ್ನಿಯ ಮೋಸದ ಜಾಲ ಬಯಲು

ರಾಜಧಾನಿ ಬೆಂಗಳೂರಿನಲ್ಲಿ ಜೀವಂತ ವ್ಯಕ್ತಿಗೆ ಮರಣ ಪ್ರಮಾಣ ಪತ್ರ ನೀಡಿದ ಪ್ರಕರಣಕ್ಕೆ ಅಚ್ಚರಿಯ ತಿರುವು ಸಿಕ್ಕಿದ್ದು, ಇದರ ಹಿಂದೆ ಪತ್ನಿಯೇ ನಡೆಸಿದ ವಂಚನೆ ಬಹಿರಂಗವಾಗಿದೆ.

39 ವರ್ಷದ ಮೆಹೆಬೂಬ್ ಬಾಷಾ ಅವರು ಬದುಕಿದ್ದರೂ ತಮ್ಮ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಲಾಗಿದೆ ಎಂದು ನ್ಯಾಯಾಲಯದ ಮೊರೆ ಹೋಗಿದ್ದರು. 2025ರ ಏಪ್ರಿಲ್ 23ರಂದು ಬಾಷಾ ಮೃತಪಟ್ಟಿದ್ದಾರೆ ಎಂದು ಚಿಕ್ಕಪೇಟೆಯ ಜನನ ಮತ್ತು ಮರಣ ನೋಂದಣಾಧಿಕಾರಿ ಪ್ರಮಾಣ ಪತ್ರ ನೀಡಿದ್ದರಿಂದ ಅವರ ಬಿಪಿಎಲ್ ಕಾರ್ಡ್ ಸಹ ರದ್ದಾಗಿತ್ತು.

ನ್ಯಾಯಾಲಯದ ನಿರ್ದೇಶನದಂತೆ ಬಿಬಿಎಂಪಿ ನಡೆಸಿದ ತನಿಖೆಯಲ್ಲಿ ಪ್ರಕರಣದ ಅಸಲಿ ಸತ್ಯ ಬೆಳಕಿಗೆ ಬಂದಿದೆ. ಬಾಷಾ ಅವರ ಪತ್ನಿ ಶಬಾನಾ, ತನ್ನ ಗಂಡನ ಬಿಪಿಎಲ್ ಮತ್ತು ಆಧಾರ್ ಕಾರ್ಡ್ ಬಳಸಿ ಕಿದ್ವಾಯಿ ಆಸ್ಪತ್ರೆಯಲ್ಲಿ ಬೇರೊಬ್ಬ ವ್ಯಕ್ತಿಗೆ ಚಿಕಿತ್ಸೆ ಕೊಡಿಸಿದ್ದಳು ಎಂಬುದು ಪತ್ತೆಯಾಗಿದೆ.

ಆಸ್ಪತ್ರೆಯ ಎಲ್ಲಾ ಹಂತಗಳಲ್ಲೂ ಬಾಷಾ ಅವರ ದಾಖಲೆಗಳನ್ನು ಬಳಸಲಾಗಿದ್ದರಿಂದ, ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯ ಗುರುತು ತಪ್ಪಾಗಿ ದಾಖಲಾಗಿತ್ತು. ಬಳಿಕ 2025ರ ಏಪ್ರಿಲ್ 23ರಂದು ಆ ಅನ್ಯ ವ್ಯಕ್ತಿ ಮೃತಪಟ್ಟಾಗ, ಆಸ್ಪತ್ರೆ ದಾಖಲೆಗಳ ಆಧಾರದ ಮೇಲೆ ಬಾಷಾ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ಹೊರಡಿಸಲಾಯಿತು.

ಇನ್ನಷ್ಟು ಅಚ್ಚರಿಯ ವಿಷಯವೆಂದರೆ, ಮೃತಪಟ್ಟ ವ್ಯಕ್ತಿಯ ಮೃತದೇಹವನ್ನು ಕೂಡ ಶಬಾನಾ ‘ತನ್ನ ಪತಿ’ ಎಂದು ಸಹಿ ಹಾಕಿ ಪಡೆದುಕೊಂಡಿದ್ದಾಳೆ. ಇದರಿಂದ ಆಸ್ಪತ್ರೆ ಮತ್ತು ಬಿಬಿಎಂಪಿ ಅಧಿಕಾರಿಗಳು ದಾಖಲೆಗಳನ್ನೇ ನಂಬಿ ಕ್ರಮ ಕೈಗೊಂಡಿದ್ದರು.

ಈ ಪ್ರಕರಣವು ದಾಖಲೆಗಳ ದುರುಪಯೋಗದ ಮೂಲಕ ನಡೆದ ದೊಡ್ಡ ಮಟ್ಟದ ವಂಚನೆಯನ್ನು ಬಹಿರಂಗಪಡಿಸಿದ್ದು, ಪತ್ನಿಯ ಕೃತ್ಯ ಎಲ್ಲರನ್ನೂ ಬೆಚ್ಚಿಬೀಳಿಸಿದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

19 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

19 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

19 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

19 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

20 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

20 hours ago