Latest

ಈ.ಐ.ಡಿ ಶುಗರ್ ಫ್ಯಾಕ್ಟರಿಯ ವಿಷಪೂರಿತ ನೀರು ಕುಡಿದು ಮೇಕೆಗಳ ಸಾವು.

ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲೂಕಿನ ನಾಯನೇಗಲಿ ಗ್ರಾಮದ ಪರಸಪ್ಪ ಹನಮಪ್ಪ ಗಂಗೂರ ಎಂಬವರಿಗೆ ಸೇರಿದ 07 ಮೇಕೆಗಳು ಶುಗರ್ ಫ್ಯಾಕ್ಟರಿಯ ವಿಷಪೂರಿತ ನೀರು ಕುಡಿದು ಮೃತಪಟ್ಟಿವೆ. ಹಾಗೂ ಇನ್ನೂ 02 ಮೇಕೆಗಳು ಅಸ್ವಸ್ಥವಾಗಿವೆ. ಇದಕ್ಕೆ ಕಾರಣ ಸಮೀಪದಲ್ಲಿರುವ ಈ.ಐ.ಡಿ ಪ್ಯಾರಿ ಇಂಡಿಯಾ ಶುಗರ್ ಫ್ಯಾಕ್ಟರಿಯ ಕೊಳಚೆ ಹಾಗೂ ವಿಷಪೂರಿತ ನೀರು ಕುಡಿದು ಮೇಕೆಗಳು ಮೃತಪಟ್ಟಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇದಷ್ಟೇ ಅಲ್ಲದೇ ಈ ಶುಗರ್ ಫ್ಯಾಕ್ಟರಿಯವರು ವಿಷಪೂರಿತ ನೀರನ್ನು ಹಳ್ಳ, ಕೆರೆ, ಹಾಗೂ ಕಾಲುವೆಗಳಿಗೆ ಬಿಡುತ್ತಿರುವುದರಿಂದ ಪ್ರಾಣಿಗಳು ಆ ನೀರನ್ನು ಕುಡಿದು ಸಾವನ್ನಪ್ಪುತ್ತೀವೆ. ಈ ವಿಷಯವಾಗಿ ಶುಗರ್ ಫ್ಯಾಕ್ಟರಿಯ ಹಿರಿಯ ಅಧಿಕಾರಿಯಾದ ಜೈರಾಮ್ ಎಂಬವನಿಗೆ ಕರೆ ಮಾಡಿ ತಿಳಿಸಿದರೆ ನನಗೆ ಅದಕ್ಕೆ ಸಂಬಂಧವಿಲ್ಲ ಎಂಬ ಉಡಾಫೆ ಉತ್ತರ ನೀಡಿದ್ದಾನೆ. ಈ ರೀತಿ ಪ್ರಾಣಿಗಳಿಗೆ ಹಾನಿಯಾದರೆ ಅವುಗಳನ್ನೇ ನಂಬಿ ಬದುಕುತ್ತಿರುವ ಕುಟುಂಬಗಳಿಗೆ ಬಹಳ ಕಷ್ಟವಾಗುತ್ತದೆ. ಪ್ರಾಣಿಗಳ ಮೇಲೆಯೇ ಅವಲಂಬಿತವಾಗಿರುವ ಪರಸಪ್ಪ ಗಂಗೂರ ಇವರಿಗೆ ತುಂಬಲಾರದ ನಷ್ಟವಾಗಿದೆ. ಸ್ಥಳಕ್ಕೆ ಆಗಮಿಸಿದ ಎ.ಎಸ್.ಐ ಬಸವರಾಜ ಜಮದಾರ್ ಖಾನಿ ಪರಿಶೀಲನೆ ನಡೆಸಿದ್ದಾರೆ.

ಆದ್ದರಿಂದ ಈ.ಐ.ಡಿ ಶುಗರ್ ಫ್ಯಾಕ್ಟರಿಯ ಅಧಿಕಾರಿಗಳು (Management team) ಈ ಕೂಡಲೇ ಇವರಿಗೆ ಸೂಕ್ತ ಪರಿಹಾರ ಒದಗಿಸಿ ಕೊಡಬೇಕು ಹಾಗೂ ಕೆರೆ, ಹಳ್ಳಗಳಿಗೆ ವಿಷಪೂರಿತ ನೀರನ್ನು ಬಿಡುವುದನ್ನು ನಿಲ್ಲಿಸಬೇಕೆಂದು ಗ್ರಾಮಸ್ಥರು ಹಾಗೂ ಭ್ರಷ್ಟರ ಬೇಟೆ ಪತ್ರಿಕೆ ಆಗ್ರಹಿಸುತ್ತದೆ.
ಈ ವರದಿಯನ್ನು ಕಂಡು ಶುಗರ್ ಫ್ಯಾಕ್ಟರಿಯವರು ಹಾಗೂ ಆಡಳಿತ ಮಂಡಳಿ ಎಚ್ಚೆತ್ತುಕೊಳ್ಳುತ್ತಾರಾ? ಕಾದು ನೋಡಬೇಕಿದೆ.

ವರದಿ: ಮುತ್ತಪ್ಪ ಬಡಿಗೇರ

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago