Latest

ಈ.ಐ.ಡಿ ಶುಗರ್ ಫ್ಯಾಕ್ಟರಿಯ ವಿಷಪೂರಿತ ನೀರು ಕುಡಿದು ಮೇಕೆಗಳ ಸಾವು.

ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲೂಕಿನ ನಾಯನೇಗಲಿ ಗ್ರಾಮದ ಪರಸಪ್ಪ ಹನಮಪ್ಪ ಗಂಗೂರ ಎಂಬವರಿಗೆ ಸೇರಿದ 07 ಮೇಕೆಗಳು ಶುಗರ್ ಫ್ಯಾಕ್ಟರಿಯ ವಿಷಪೂರಿತ ನೀರು ಕುಡಿದು ಮೃತಪಟ್ಟಿವೆ. ಹಾಗೂ ಇನ್ನೂ 02 ಮೇಕೆಗಳು ಅಸ್ವಸ್ಥವಾಗಿವೆ. ಇದಕ್ಕೆ ಕಾರಣ ಸಮೀಪದಲ್ಲಿರುವ ಈ.ಐ.ಡಿ ಪ್ಯಾರಿ ಇಂಡಿಯಾ ಶುಗರ್ ಫ್ಯಾಕ್ಟರಿಯ ಕೊಳಚೆ ಹಾಗೂ ವಿಷಪೂರಿತ ನೀರು ಕುಡಿದು ಮೇಕೆಗಳು ಮೃತಪಟ್ಟಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇದಷ್ಟೇ ಅಲ್ಲದೇ ಈ ಶುಗರ್ ಫ್ಯಾಕ್ಟರಿಯವರು ವಿಷಪೂರಿತ ನೀರನ್ನು ಹಳ್ಳ, ಕೆರೆ, ಹಾಗೂ ಕಾಲುವೆಗಳಿಗೆ ಬಿಡುತ್ತಿರುವುದರಿಂದ ಪ್ರಾಣಿಗಳು ಆ ನೀರನ್ನು ಕುಡಿದು ಸಾವನ್ನಪ್ಪುತ್ತೀವೆ. ಈ ವಿಷಯವಾಗಿ ಶುಗರ್ ಫ್ಯಾಕ್ಟರಿಯ ಹಿರಿಯ ಅಧಿಕಾರಿಯಾದ ಜೈರಾಮ್ ಎಂಬವನಿಗೆ ಕರೆ ಮಾಡಿ ತಿಳಿಸಿದರೆ ನನಗೆ ಅದಕ್ಕೆ ಸಂಬಂಧವಿಲ್ಲ ಎಂಬ ಉಡಾಫೆ ಉತ್ತರ ನೀಡಿದ್ದಾನೆ. ಈ ರೀತಿ ಪ್ರಾಣಿಗಳಿಗೆ ಹಾನಿಯಾದರೆ ಅವುಗಳನ್ನೇ ನಂಬಿ ಬದುಕುತ್ತಿರುವ ಕುಟುಂಬಗಳಿಗೆ ಬಹಳ ಕಷ್ಟವಾಗುತ್ತದೆ. ಪ್ರಾಣಿಗಳ ಮೇಲೆಯೇ ಅವಲಂಬಿತವಾಗಿರುವ ಪರಸಪ್ಪ ಗಂಗೂರ ಇವರಿಗೆ ತುಂಬಲಾರದ ನಷ್ಟವಾಗಿದೆ. ಸ್ಥಳಕ್ಕೆ ಆಗಮಿಸಿದ ಎ.ಎಸ್.ಐ ಬಸವರಾಜ ಜಮದಾರ್ ಖಾನಿ ಪರಿಶೀಲನೆ ನಡೆಸಿದ್ದಾರೆ.

ಆದ್ದರಿಂದ ಈ.ಐ.ಡಿ ಶುಗರ್ ಫ್ಯಾಕ್ಟರಿಯ ಅಧಿಕಾರಿಗಳು (Management team) ಈ ಕೂಡಲೇ ಇವರಿಗೆ ಸೂಕ್ತ ಪರಿಹಾರ ಒದಗಿಸಿ ಕೊಡಬೇಕು ಹಾಗೂ ಕೆರೆ, ಹಳ್ಳಗಳಿಗೆ ವಿಷಪೂರಿತ ನೀರನ್ನು ಬಿಡುವುದನ್ನು ನಿಲ್ಲಿಸಬೇಕೆಂದು ಗ್ರಾಮಸ್ಥರು ಹಾಗೂ ಭ್ರಷ್ಟರ ಬೇಟೆ ಪತ್ರಿಕೆ ಆಗ್ರಹಿಸುತ್ತದೆ.
ಈ ವರದಿಯನ್ನು ಕಂಡು ಶುಗರ್ ಫ್ಯಾಕ್ಟರಿಯವರು ಹಾಗೂ ಆಡಳಿತ ಮಂಡಳಿ ಎಚ್ಚೆತ್ತುಕೊಳ್ಳುತ್ತಾರಾ? ಕಾದು ನೋಡಬೇಕಿದೆ.

ವರದಿ: ಮುತ್ತಪ್ಪ ಬಡಿಗೇರ

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

11 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

11 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

11 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

11 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

11 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

11 hours ago