Latest

ಈ.ಐ.ಡಿ ಶುಗರ್ ಫ್ಯಾಕ್ಟರಿಯ ವಿಷಪೂರಿತ ನೀರು ಕುಡಿದು ಮೇಕೆಗಳ ಸಾವು.

ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲೂಕಿನ ನಾಯನೇಗಲಿ ಗ್ರಾಮದ ಪರಸಪ್ಪ ಹನಮಪ್ಪ ಗಂಗೂರ ಎಂಬವರಿಗೆ ಸೇರಿದ 07 ಮೇಕೆಗಳು ಶುಗರ್ ಫ್ಯಾಕ್ಟರಿಯ ವಿಷಪೂರಿತ ನೀರು ಕುಡಿದು ಮೃತಪಟ್ಟಿವೆ. ಹಾಗೂ ಇನ್ನೂ 02 ಮೇಕೆಗಳು ಅಸ್ವಸ್ಥವಾಗಿವೆ. ಇದಕ್ಕೆ ಕಾರಣ ಸಮೀಪದಲ್ಲಿರುವ ಈ.ಐ.ಡಿ ಪ್ಯಾರಿ ಇಂಡಿಯಾ ಶುಗರ್ ಫ್ಯಾಕ್ಟರಿಯ ಕೊಳಚೆ ಹಾಗೂ ವಿಷಪೂರಿತ ನೀರು ಕುಡಿದು ಮೇಕೆಗಳು ಮೃತಪಟ್ಟಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇದಷ್ಟೇ ಅಲ್ಲದೇ ಈ ಶುಗರ್ ಫ್ಯಾಕ್ಟರಿಯವರು ವಿಷಪೂರಿತ ನೀರನ್ನು ಹಳ್ಳ, ಕೆರೆ, ಹಾಗೂ ಕಾಲುವೆಗಳಿಗೆ ಬಿಡುತ್ತಿರುವುದರಿಂದ ಪ್ರಾಣಿಗಳು ಆ ನೀರನ್ನು ಕುಡಿದು ಸಾವನ್ನಪ್ಪುತ್ತೀವೆ. ಈ ವಿಷಯವಾಗಿ ಶುಗರ್ ಫ್ಯಾಕ್ಟರಿಯ ಹಿರಿಯ ಅಧಿಕಾರಿಯಾದ ಜೈರಾಮ್ ಎಂಬವನಿಗೆ ಕರೆ ಮಾಡಿ ತಿಳಿಸಿದರೆ ನನಗೆ ಅದಕ್ಕೆ ಸಂಬಂಧವಿಲ್ಲ ಎಂಬ ಉಡಾಫೆ ಉತ್ತರ ನೀಡಿದ್ದಾನೆ. ಈ ರೀತಿ ಪ್ರಾಣಿಗಳಿಗೆ ಹಾನಿಯಾದರೆ ಅವುಗಳನ್ನೇ ನಂಬಿ ಬದುಕುತ್ತಿರುವ ಕುಟುಂಬಗಳಿಗೆ ಬಹಳ ಕಷ್ಟವಾಗುತ್ತದೆ. ಪ್ರಾಣಿಗಳ ಮೇಲೆಯೇ ಅವಲಂಬಿತವಾಗಿರುವ ಪರಸಪ್ಪ ಗಂಗೂರ ಇವರಿಗೆ ತುಂಬಲಾರದ ನಷ್ಟವಾಗಿದೆ. ಸ್ಥಳಕ್ಕೆ ಆಗಮಿಸಿದ ಎ.ಎಸ್.ಐ ಬಸವರಾಜ ಜಮದಾರ್ ಖಾನಿ ಪರಿಶೀಲನೆ ನಡೆಸಿದ್ದಾರೆ.

ಆದ್ದರಿಂದ ಈ.ಐ.ಡಿ ಶುಗರ್ ಫ್ಯಾಕ್ಟರಿಯ ಅಧಿಕಾರಿಗಳು (Management team) ಈ ಕೂಡಲೇ ಇವರಿಗೆ ಸೂಕ್ತ ಪರಿಹಾರ ಒದಗಿಸಿ ಕೊಡಬೇಕು ಹಾಗೂ ಕೆರೆ, ಹಳ್ಳಗಳಿಗೆ ವಿಷಪೂರಿತ ನೀರನ್ನು ಬಿಡುವುದನ್ನು ನಿಲ್ಲಿಸಬೇಕೆಂದು ಗ್ರಾಮಸ್ಥರು ಹಾಗೂ ಭ್ರಷ್ಟರ ಬೇಟೆ ಪತ್ರಿಕೆ ಆಗ್ರಹಿಸುತ್ತದೆ.
ಈ ವರದಿಯನ್ನು ಕಂಡು ಶುಗರ್ ಫ್ಯಾಕ್ಟರಿಯವರು ಹಾಗೂ ಆಡಳಿತ ಮಂಡಳಿ ಎಚ್ಚೆತ್ತುಕೊಳ್ಳುತ್ತಾರಾ? ಕಾದು ನೋಡಬೇಕಿದೆ.

ವರದಿ: ಮುತ್ತಪ್ಪ ಬಡಿಗೇರ

ಭ್ರಷ್ಟರ ಬೇಟೆ

Recent Posts

ಮುಂಡಗೋಡದ ಇಬ್ಬರು ಭ್ರಷ್ಟರಿಗೆ ಲೋಕಾಯುಕ್ತ ಶಾಕ್!

ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…

9 minutes ago

ಇಬ್ಬರು ಪತ್ನಿಯರಿದ್ದರೂ ಅಪ್ರಾಪ್ತೆಯ ಮೇಲೆ ಅತ್ಯಾಚಾರ ವ್ಯಸಗಿ ಮದುವೆಯಾದ: 45 ವರ್ಷದ ವ್ಯಕ್ತಿ ಪೋಕ್ಸೋ ಅಡಿಯಲ್ಲಿ ಬಂಧನ

ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…

13 minutes ago

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

19 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

24 hours ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

24 hours ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

24 hours ago