ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲೂಕಿನ ನಾಯನೇಗಲಿ ಗ್ರಾಮದ ಪರಸಪ್ಪ ಹನಮಪ್ಪ ಗಂಗೂರ ಎಂಬವರಿಗೆ ಸೇರಿದ 07 ಮೇಕೆಗಳು ಶುಗರ್ ಫ್ಯಾಕ್ಟರಿಯ ವಿಷಪೂರಿತ ನೀರು ಕುಡಿದು ಮೃತಪಟ್ಟಿವೆ. ಹಾಗೂ ಇನ್ನೂ 02 ಮೇಕೆಗಳು ಅಸ್ವಸ್ಥವಾಗಿವೆ. ಇದಕ್ಕೆ ಕಾರಣ ಸಮೀಪದಲ್ಲಿರುವ ಈ.ಐ.ಡಿ ಪ್ಯಾರಿ ಇಂಡಿಯಾ ಶುಗರ್ ಫ್ಯಾಕ್ಟರಿಯ ಕೊಳಚೆ ಹಾಗೂ ವಿಷಪೂರಿತ ನೀರು ಕುಡಿದು ಮೇಕೆಗಳು ಮೃತಪಟ್ಟಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇದಷ್ಟೇ ಅಲ್ಲದೇ ಈ ಶುಗರ್ ಫ್ಯಾಕ್ಟರಿಯವರು ವಿಷಪೂರಿತ ನೀರನ್ನು ಹಳ್ಳ, ಕೆರೆ, ಹಾಗೂ ಕಾಲುವೆಗಳಿಗೆ ಬಿಡುತ್ತಿರುವುದರಿಂದ ಪ್ರಾಣಿಗಳು ಆ ನೀರನ್ನು ಕುಡಿದು ಸಾವನ್ನಪ್ಪುತ್ತೀವೆ. ಈ ವಿಷಯವಾಗಿ ಶುಗರ್ ಫ್ಯಾಕ್ಟರಿಯ ಹಿರಿಯ ಅಧಿಕಾರಿಯಾದ ಜೈರಾಮ್ ಎಂಬವನಿಗೆ ಕರೆ ಮಾಡಿ ತಿಳಿಸಿದರೆ ನನಗೆ ಅದಕ್ಕೆ ಸಂಬಂಧವಿಲ್ಲ ಎಂಬ ಉಡಾಫೆ ಉತ್ತರ ನೀಡಿದ್ದಾನೆ. ಈ ರೀತಿ ಪ್ರಾಣಿಗಳಿಗೆ ಹಾನಿಯಾದರೆ ಅವುಗಳನ್ನೇ ನಂಬಿ ಬದುಕುತ್ತಿರುವ ಕುಟುಂಬಗಳಿಗೆ ಬಹಳ ಕಷ್ಟವಾಗುತ್ತದೆ. ಪ್ರಾಣಿಗಳ ಮೇಲೆಯೇ ಅವಲಂಬಿತವಾಗಿರುವ ಪರಸಪ್ಪ ಗಂಗೂರ ಇವರಿಗೆ ತುಂಬಲಾರದ ನಷ್ಟವಾಗಿದೆ. ಸ್ಥಳಕ್ಕೆ ಆಗಮಿಸಿದ ಎ.ಎಸ್.ಐ ಬಸವರಾಜ ಜಮದಾರ್ ಖಾನಿ ಪರಿಶೀಲನೆ ನಡೆಸಿದ್ದಾರೆ.
ಆದ್ದರಿಂದ ಈ.ಐ.ಡಿ ಶುಗರ್ ಫ್ಯಾಕ್ಟರಿಯ ಅಧಿಕಾರಿಗಳು (Management team) ಈ ಕೂಡಲೇ ಇವರಿಗೆ ಸೂಕ್ತ ಪರಿಹಾರ ಒದಗಿಸಿ ಕೊಡಬೇಕು ಹಾಗೂ ಕೆರೆ, ಹಳ್ಳಗಳಿಗೆ ವಿಷಪೂರಿತ ನೀರನ್ನು ಬಿಡುವುದನ್ನು ನಿಲ್ಲಿಸಬೇಕೆಂದು ಗ್ರಾಮಸ್ಥರು ಹಾಗೂ ಭ್ರಷ್ಟರ ಬೇಟೆ ಪತ್ರಿಕೆ ಆಗ್ರಹಿಸುತ್ತದೆ.
ಈ ವರದಿಯನ್ನು ಕಂಡು ಶುಗರ್ ಫ್ಯಾಕ್ಟರಿಯವರು ಹಾಗೂ ಆಡಳಿತ ಮಂಡಳಿ ಎಚ್ಚೆತ್ತುಕೊಳ್ಳುತ್ತಾರಾ? ಕಾದು ನೋಡಬೇಕಿದೆ.
ವರದಿ: ಮುತ್ತಪ್ಪ ಬಡಿಗೇರ
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…