Categories: CrimeLatest

ಕೊಡಗು ಜೈಲಿನಲ್ಲಿ ವಿಚಾರಣಾಧೀನ ಕೈದಿಯ ಸಾವು: ‘ಹನಿಟ್ರ್ಯಾಪ್‌, ಸುಳ್ಳು ಪ್ರಕರಣ’ ಆರೋಪಗಳಿಂದ ಪ್ರಕರಣಕ್ಕೆ ಹೊಸ ತಿರುವು

ಕೊಡಗು ಜಿಲ್ಲಾ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದ 68 ವರ್ಷದ ಚೆಂಗಪ್ಪ ಅವರ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸುಮಾರು 20 ದಿನಗಳ ಹಿಂದೆ ಲೈಂಗಿಕ ದೌರ್ಜನ್ಯ ಹಾಗೂ ಜಾತಿ ನಿಂದನೆ ಪ್ರಕರಣದಲ್ಲಿ ಬಂಧಿತರಾಗಿದ್ದ ಅವರು, ಮೊನ್ನೆ ಸಂಜೆ ಹಠಾತ್ ಅನಾರೋಗ್ಯಕ್ಕೊಳಗಾಗಿ ಇಂದು ಮೃತಪಟ್ಟಿದ್ದಾರೆ.

ಕುಶಾಲನಗರ ನಿವಾಸಿಯಾಗಿದ್ದ ಚೆಂಗಪ್ಪ ನಿವೃತ್ತ ಕಾರ್ಮಿಕ ಅಧಿಕಾರಿ ಆಗಿದ್ದು, ಅವರ ವಿರುದ್ಧ ಸುಳ್ಳು ದೂರು ದಾಖಲಾಗಿತ್ತು ಎಂದು ಕುಟುಂಬದವರು ಆರೋಪಿಸಿದ್ದಾರೆ. ಪೊಲೀಸರು ಸಮಗ್ರ ತನಿಖೆ ನಡೆಸದೇ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರಿಂದ ಮಾನಸಿಕ ಆಘಾತಕ್ಕೊಳಗಾಗಿ ಅವರು ಮೃತಪಟ್ಟಿದ್ದಾರೆ ಎಂದು ಸಹೋದರ ಬೆಳ್ಳಿ ಪ್ರಕಾಶ್ ತಿಳಿಸಿದ್ದಾರೆ.

ಒಂಟಿಯಾಗಿ ವಾಸ ಮಾಡುತ್ತಿದ್ದ ಚೆಂಗಪ್ಪ, ಕಂಪೆನಿಯೊಂದರ ಮೂಲಕ ಮಹಿಳೆಯೊಬ್ಬರನ್ನು ಕೇರ್ ಟೇಕರ್ ಆಗಿ ನೇಮಿಸಿಕೊಂಡಿದ್ದರು. ಆದರೆ ಅದೇ ಮಹಿಳೆ ಹನಿಟ್ರ್ಯಾಪ್ ಮೂಲಕ ಅವರನ್ನು ಬ್ಲಾಕ್‌ಮೇಲ್ ಮಾಡಿದ್ದಾಳೆ ಎಂಬ ಗಂಭೀರ ಆರೋಪವನ್ನು ಕುಟುಂಬದವರು ಮಾಡಿದ್ದಾರೆ.

ಆ ಮಹಿಳೆಯೇ ಚೆಂಗಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಜಾತಿ ನಿಂದನೆ ಆರೋಪದಡಿ ದೂರು ನೀಡಿದ್ದಳು. ದೂರು ಆಧರಿಸಿ ಕುಶಾಲನಗರ ಗ್ರಾಮಾಂತರ ಪೊಲೀಸರು ಚೆಂಗಪ್ಪ ಅವರನ್ನು ವಿಚಾರಣೆಗೆ ಕರೆಸಿ ಬಂಧಿಸಿದ್ದರು. ಆದರೆ ಅವರು ಮತ್ತೆ ಮನೆಗೆ ಮರಳದೇ ಜೈಲಿಗೇ ಹೋಗಿ, ವಿಚಾರಣೆ ಪೂರ್ಣಗೊಳ್ಳುವ ಮೊದಲೇ ಸಾವನ್ನಪ್ಪಿದ್ದಾರೆ.

ಕುಟುಂಬದವರ ಪ್ರಕಾರ, ಆ ಮಹಿಳೆ ಇದೇ ರೀತಿಯಲ್ಲಿ ಇನ್ನೂ ಹಲವರ ವಿರುದ್ಧ ಪ್ರಕರಣ ದಾಖಲಿಸಿದ್ದಾಳೆ ಮತ್ತು ವಿಶೇಷವಾಗಿ ಒಂಟಿ ಪುರುಷರನ್ನು ಟಾರ್ಗೆಟ್ ಮಾಡುತ್ತಿದ್ದಾಳೆ ಎನ್ನಲಾಗಿದೆ. ಇದಲ್ಲದೆ, ಜಾಮೀನು ಕೊಡಿಸುವುದಾಗಿ ಹೇಳಿ ವಕೀಲರೊಬ್ಬರು ಚೆಂಗಪ್ಪರಿಂದ ಲಕ್ಷಾಂತರ ರೂಪಾಯಿ ಪಡೆದು ಮೋಸ ಮಾಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

ಚೆಂಗಪ್ಪ ಅವರ ಮೊಬೈಲ್ ಮತ್ತು ಬ್ಯಾಂಕ್ ಖಾತೆಯ ಮಾಹಿತಿ ಪಡೆದು ಹಣ ದುರುಪಯೋಗ ಮಾಡಲಾಗಿದೆ. ಅವರ ಖಾತೆಯಿಂದ ಹಣ ತೆಗೆದು ಬೈಕ್ ಖರೀದಿ ಮಾಡಿದ್ದು, ಇನ್ನಿತರ ಖಾತೆಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ ಎಂದು ಕುಟುಂಬದವರು ದೂರಿದ್ದಾರೆ. ಈ ವಿಚಾರ ತಿಳಿದು ಕುಟುಂಬವು ಬ್ಯಾಂಕ್ ಖಾತೆಯನ್ನು ಫ್ರೀಜ್ ಮಾಡಿಸಿದೆ.

ಈ ಎಲ್ಲಾ ಆರೋಪಗಳ ಹಿನ್ನೆಲೆ, ಚೆಂಗಪ್ಪ ಸಾವಿನ ಪ್ರಕರಣ ಇದೀಗ ಹೊಸ ತಿರುವು ಪಡೆದಿದ್ದು, ಸಮಗ್ರ ತನಿಖೆಗೆ ಒತ್ತಾಯ ಕೇಳಿಬಂದಿದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

15 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

15 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

15 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

15 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

15 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

15 hours ago