Latest

ತಾರಿಹಾಳ ಸ್ಪಾರ್ಕರ್ ಫ್ಯಾಕ್ಟರಿಯ ಬೆಂಕಿ ಅವಘಡದಲ್ಲಿ ಸಾವಿನ ಪ್ರಮಾಣ 3 ಕ್ಕೆ ಏರಿಕೆ.

ಕಳೆದ ದಿ 23/07/2022 ರಂದು ಸಾಯಂಕಾಲ ಧಾರವಾಡ ಜಿಲ್ಲೆಯ ತಾರಿಹಾಳ್ ಕೈಗಾರಿಕಾ ಪ್ರದೇಶದಲ್ಲಿ ಈ ಐ ಸಿ ಪ್ಲೇಮ್ ( ಸ್ಪಾರ್ಕರ್ ) ಫ್ಯಾಕ್ಟರಿಯಲ್ಲಿ ಸುಮಾರು 4 ಘಂ ವೇಳೆಯಲ್ಲಿ ಬೆಂಕಿ ಅವಘಡವಾಗಿತ್ತು ಈ ಘಟನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 8 ಜನ ಕೆಲಸಗಾರರು ಬೆಂಕಿ ತಗುಲಿ ಗಾಯಗೊಂಡಿದ್ದರು ತಕ್ಷಣ ಸ್ಥಳೀಯ ಅಗ್ನಿಶಾಮಕ ಹಾಗೂ ಪೊಲೀಸ್ ಇಲಾಖೆಯ ಸಹಕಾರದಿಂದ ಈ ಗಾಯಗೊಂಡ 8 ಜನರನ್ನು ತುರ್ತು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಮಾನ್ಯ ಸ್ಥಳಿಯ ಶಾಸಕರು ಶ್ರೀ ಶಂಕರ ಪಾಟೀಲ್ ಮುನೇನಕೊಪ್ಪ, ಶ್ರೀ ಅರವಿಂದ ಬೆಲ್ಲದ ಹಾಗೂ ಜಿಲ್ಲಾಧಿಕಾರಿ ಶ್ರೀ ಗುರುದತ್ತ ಹೆಗಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಲೋಕೇಶ್ ಜಲಾಸಗರ್ ರವರು ಕಿಮ್ಸ್ ಆಸ್ಪತ್ರೆಯ ವೈದ್ಯರಿಗೇ ನೀವು ಹಾಗೂ ನಿಮ್ಮ ತಂಡದವರು ಆ ಗಾಯಾಳುಗಳಿಗೆ ಒಳ್ಳೆಯ ಚಿಕಿತ್ಸೆ ನೀಡಬೇಕು ಹಾಗೂ ಅವರೆಲ್ಲರೂ ಬೇಗ ಗುಣಮುಖರಾಗಬೇಕು ಎಂದು ಸೂಚಿಸಿದ್ದರು ಆದರೇ ವಿಧಿ ಎಷ್ಟು ಕ್ರೂರಿ 8 ಜನ ಸುಟ್ಟು ಗಾಯಗೊಂಡವರಲ್ಲಿ ಗದಗ್ ಮೂಲದ 35 ವರ್ಷದ ವಿಜಯಲಕ್ಷ್ಮಿ ವೀರಭದ್ರಪ್ಪ ಯಚ್ಚನಾಗರ್ ಎಂಬ ಮಹಿಳೆ ತಡರಾತ್ರಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ ಹಾಗೂ ಬೆಳಗ್ಗೆ 45 ವರ್ಷದ ಗೌರವ್ವ ಎಂಬ ಮಹಿಳೆ ಮತ್ತೂ 27 ವರ್ಷದ ಮಾಲೇಶ್ ಹದ್ದಣ್ಣವರ್ ಎಂಬ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ 8 ಜನರಲ್ಲಿ 3 ಜನರು ಅಸುನಿಗಿದ್ದು ಇನ್ನೂ 5 ಜನರ ಚಿಕಿತ್ಸೆ ಮುಂದುವರೆದಿದೆ .
ಈ ಬೆಂಕಿ ಅವಘಡದಲ್ಲಿ ಗಾಯಗೊಂಡವರು
1) ವಿಜಯಲಕ್ಷ್ಮಿ ಯಚ್ಚನಾಗರ್
35 ವರ್ಷ .
2) ಗೌರವ್ವ ಹಿರೇಮಠ್ 45 ವರ್ಷ.
3) ಮಲಿಕ್ರೆಹನ್ ಕೊಪ್ಪದ್ 27 ವರ್ಷ.
4) ನಿರ್ಮಲಾ ಹುಚ್ಚಣ್ಣವರ್ 29 ವರ್ಷ.
5) ಚೆನ್ನವ್ವಾ ಅರಿಮಲ್ 42 ವರ್ಷ.
6) ಮಾಲೇಶ ಹದ್ದಣ್ಣವರ್ 27 ವರ್ಷ.
7) ನಾನೀಮಾ ಅರಿಮಲ್ 35 ವರ್ಷ.
8) ಪ್ರೇಮಾ ಅರಿಮಲ್ 20 ವರ್ಷ.
ಎಂದೂ ತಿಳಿದು ಬಂದಿದೆ .
ವರದಿ : ಶಿವ ಹುಬ್ಬಳ್ಳಿ .

ಭ್ರಷ್ಟರ ಬೇಟೆ

Recent Posts

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

10 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

12 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

23 hours ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

24 hours ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

24 hours ago

ಕೊನೆಗೂ 21 ದಿನಗಳ ಬಳಿಕ ಅಣುಸ್ಥಾವರದ ಮೇಲೆ ಅಮೆರಿಕ ದಾಳಿ! ಇರಾನ್ ಅಣು ಕೇಂದ್ರ ವಿಕಿರಣ ಸೋರಿಕೆ ಭೀತಿ ಹೆಚ್ಚಳ?

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…

1 day ago