ಕುಂದಗೋಳ: ಸಾಲಗಾರರ ಕಾಟದಿಂದ ಬೇಸತ್ತು ಯುವಕನೊಬ್ಬ ಮನನೊಂದು ಕಳೆನಾಶಕವನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕುಂದಗೋಳ ಗ್ರಾಮೀಣ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
ಕುಂದಗೋಳ ಪಟ್ಟಣದ ನಿವಾಸಿ ಸುನೀಲ ಹೆೇಮಣ್ಣ ಪಾತ್ರೋಟಿ (26) ಎಂಬ ಯುವಕ ತಮ್ಮ ತಂದೆ ಅನಾರೋಗ್ಯದಿಂದ ಬಳಲುತ್ತಿದ್ದ ಎಂಬ ಕಾರಣದಿಂದ ಚಿಕಿತ್ಸೆಗೆ ಅಂತ 2023ರಲ್ಲಿ ಆರೋಪಿತ ನಾದ ಸಂತೋಷ ಸಿದ್ದಪ್ಪ ಮುಳ್ಳೂಳ್ಳಿ ಇವರಿಂದ 40 ಸಾವಿರ ರೂಪಾಯಿ ಕೈಗಡ ಸಾಲವನ್ನು ತೆಗೆದುಕೊಂಡಿರುತ್ತಾನೆ. ನಾಲ್ಕು ತಿಂಗಳ ಬಳಿಕ ಸಾಲ ಪಡೆದ ತಂದೆ ತೀರಿ ಹೋಗಿರುತ್ತಾರೆ. ಸಾಲಗಾರರು ಮರಳಿ ಹಣವನ್ನು ಕೂಡು ಎಂತು ಕೇಳಿದಾಗ ಸ್ವಲ್ಪ ದಿನ ನಂತರ ಕೊಡುತ್ತೇನೆ ಎಂದು ಸುನೀಲ್ ಹೇಳಿರುತ್ತಾನೆ.
ಬಳಿಕ 2024 ರ ಅಗಸ್ಟ್ ರಂದು 4 ಆರೋಪಿಗಳು ಸೇರಿಕೊಂಡು ಸುನೀಲ ಪಾತ್ರೋಟಿ ಇವರ ಮನೆಯ ಮುಂದೆ ಹೋಗಿ 30 ಸಾವಿರ ರೂಪಾಯಿಗೆ ಬಡ್ಡಿ ಸೇರಿ 1,80 ಸಾವಿರ ಆಗಿದೆ ಎಂದು ಕಿರುಕುಳ ಕೊಟ್ಟಿದ್ದಕ್ಕೆ ಸಾಲಗಾರ ಸುನೀಲ ಆರೋಪಿತ ನಾದ ಸಂತೋಷ ಸಿದ್ದಪ್ಪ ಮುಳ್ಳೂಳ್ಳಿ ಇವನಿಗೆ ಪ್ರತಿವಾರ ಪೋನ್ ಫೇ ಹಾಗೂ ಕೈಗಡ 5 ಸಾವಿರ ರೂಪಾಯಿ ನೀಡುತ್ತ ಬಂದಿರುತ್ತಾನೆ.
ಇದಲ್ಲದೆ ಸಾಲ ತೀರಿಲ್ಲ ಎಂದು ಬೆಟದೂರ ರಸ್ತ ಬಳಿ ಸಂತೋಷ ಮೂಳ್ಳೂಳ್ಳಿ, ಜತೆ ಶಿವು ಮೂಳ್ಳೂಳ್ಳಿ, ಪ್ರವೀಣ ಮುದೆಣ್ಣವರ, ಪ್ರಕಾಶ ಮೂಳ್ಳೂಳ್ಳಿ, ಸೇರಿಕೂಂಡು ಸುನೀಲ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರುಕುಳ ನೀಡಿ ಕಾರನ್ನು ತೆಗೆದುಕೊಂಡು ಹೋಗಿರುತ್ತಾರೆ. ಇದರಿಂದಾಗಿ ಮನನೊಂದು ಸುನೀಲ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯುತ್ನಿಸಿದ್ದಾನೆ. ಈ ಕುರಿತು ಕುಂದಗೋಳ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್ಐಆರ್…