Crime

ಸಾಲಗಾರರ ಕಾಟ; ಯುವಕ ಆತ್ಮಹತ್ಯೆಗೆ ಯತ್ನ…!

ಕುಂದಗೋಳ: ಸಾಲಗಾರರ ಕಾಟದಿಂದ ಬೇಸತ್ತು ಯುವಕನೊಬ್ಬ ಮನನೊಂದು ಕಳೆನಾಶಕವನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕುಂದಗೋಳ ಗ್ರಾಮೀಣ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

ಕುಂದಗೋಳ ಪಟ್ಟಣದ ನಿವಾಸಿ ಸುನೀಲ ಹೆೇಮಣ್ಣ ಪಾತ್ರೋಟಿ (26) ಎಂಬ ಯುವಕ ತಮ್ಮ ತಂದೆ ಅನಾರೋಗ್ಯದಿಂದ ಬಳಲುತ್ತಿದ್ದ ಎಂಬ ಕಾರಣದಿಂದ ಚಿಕಿತ್ಸೆಗೆ ಅಂತ 2023ರಲ್ಲಿ ಆರೋಪಿತ ನಾದ ಸಂತೋಷ ಸಿದ್ದಪ್ಪ ಮುಳ್ಳೂಳ್ಳಿ ಇವರಿಂದ 40 ಸಾವಿರ ರೂಪಾಯಿ ಕೈಗಡ ಸಾಲವನ್ನು ತೆಗೆದುಕೊಂಡಿರುತ್ತಾನೆ. ನಾಲ್ಕು ತಿಂಗಳ ಬಳಿಕ ಸಾಲ ಪಡೆದ ತಂದೆ ತೀರಿ ಹೋಗಿರುತ್ತಾರೆ. ಸಾಲಗಾರರು ಮರಳಿ ಹಣವನ್ನು ಕೂಡು ಎಂತು ಕೇಳಿದಾಗ ಸ್ವಲ್ಪ ದಿನ ನಂತರ ಕೊಡುತ್ತೇನೆ ಎಂದು ಸುನೀಲ್ ಹೇಳಿರುತ್ತಾನೆ.

ಬಳಿಕ 2024 ರ ಅಗಸ್ಟ್ ರಂದು 4 ಆರೋಪಿಗಳು ಸೇರಿಕೊಂಡು ಸುನೀಲ ಪಾತ್ರೋಟಿ ಇವರ ಮನೆಯ ಮುಂದೆ ಹೋಗಿ 30 ಸಾವಿರ ರೂಪಾಯಿಗೆ ಬಡ್ಡಿ ಸೇರಿ 1,80 ಸಾವಿರ ಆಗಿದೆ ಎಂದು ಕಿರುಕುಳ ಕೊಟ್ಟಿದ್ದಕ್ಕೆ ಸಾಲಗಾರ ಸುನೀಲ ಆರೋಪಿತ ನಾದ ಸಂತೋಷ ಸಿದ್ದಪ್ಪ ಮುಳ್ಳೂಳ್ಳಿ ಇವನಿಗೆ ಪ್ರತಿವಾರ ಪೋನ್ ಫೇ ಹಾಗೂ ಕೈಗಡ 5 ಸಾವಿರ ರೂಪಾಯಿ ನೀಡುತ್ತ ಬಂದಿರುತ್ತಾನೆ.

ಇದಲ್ಲದೆ ಸಾಲ ತೀರಿಲ್ಲ ಎಂದು ಬೆಟದೂರ ರಸ್ತ ಬಳಿ ಸಂತೋಷ ಮೂಳ್ಳೂಳ್ಳಿ, ಜತೆ ಶಿವು ಮೂಳ್ಳೂಳ್ಳಿ, ಪ್ರವೀಣ ಮುದೆಣ್ಣವರ, ಪ್ರಕಾಶ ಮೂಳ್ಳೂಳ್ಳಿ, ಸೇರಿಕೂಂಡು ಸುನೀಲ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರುಕುಳ ನೀಡಿ ಕಾರನ್ನು ತೆಗೆದುಕೊಂಡು ಹೋಗಿರುತ್ತಾರೆ. ಇದರಿಂದಾಗಿ ಮನನೊಂದು ಸುನೀಲ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯುತ್ನಿಸಿದ್ದಾನೆ. ಈ ಕುರಿತು ಕುಂದಗೋಳ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಭ್ರಷ್ಟರ ಬೇಟೆ

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

3 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

3 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

3 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

3 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago