Latest

ಚೆನ್ನಮ್ಮ ವೃತ್ತದಲ್ಲಿ ಕೊಳೆಯುತ್ತಿರುವ ಕನ್ನಡ ಧ್ವಜ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕ ಆಕ್ರೋಶ.

ಹುಬ್ಬಳ್ಳಿ, ಜೂನ್ 29: ಐತಿಹಾಸಿಕ ಹಿನ್ನೆಲೆ ಹೊಂದಿದ ಉತ್ತರ ಕರ್ನಾಟಕದ ಹೆಮ್ಮೆಯ ನಗರ ಹುಬ್ಬಳ್ಳಿ, ವಾಣಿಜ್ಯ ಕೇಂದ್ರವೆಂದು, “ಛೋಟಾ ಮುಂಬೈ”ಯೆಂದು ಖ್ಯಾತಿ ಪಡೆದಿರುವ ಈ ನಗರ ಈಗ ಕನ್ನಡಪರ ಅಭಿಮಾನಿಗಳ ಮನಸ್ಸಿಗೆ ನೋವುಂಟುಮಾಡುವ ಘಟನೆಗೆ ಸಾಕ್ಷಿಯಾಗಿದೆ. ನಗರದ ಹೃದಯ ಭಾಗವಾದ ಚೆನ್ನಮ್ಮ ವೃತ್ತದಲ್ಲಿ ಹಾರುತ್ತಿದ್ದ ಕನ್ನಡ ಬಾವುಟ ಕೊಳೆಯಾಗಿ ಬಣ್ಣಮಾಸಿ ಅವ್ಯವಸ್ಥೆಯ ಸ್ಥಿತಿಗೆ ತಲುಪಿರುವುದು ಸಾರ್ವಜನಿಕ ಅಸಮಾಧಾನಕ್ಕೆ ಕಾರಣವಾಗಿದೆ.

ಹುಬ್ಬಳ್ಳಿ ನಗರದ ಪೈಕಿ ಹೆಚ್ಚು ಜನ ಓಡಾಡುವ ಪ್ರದೇಶವಲ್ಲದೆ, ಫ್ಲೈ ಓವರ್ ಕಾಮಗಾರಿ ನಡೆಯುತ್ತಿರುವ ಈ ಮಾರ್ಗದ ಮೂಲಕ ಪ್ರತಿದಿನ ನೂರಾರು ಜನರು, ಅಧಿಕಾರಿಗಳು ಮತ್ತು ಸಾರ್ವಜನಿಕರು ಸಂಚರಿಸುತ್ತಿದ್ದಾರೆ. ಆದರೆ ಬಾವುಟದ ತೊಂದರೆ ಯಾರಿಗೂ ಕಾಣಿಸಿಕೊಂಡಿಲ್ಲವೆಂಬಂತೆ ನಿರ್ಲಕ್ಷ್ಯ ಮುಂದುವರಿದಿದೆ. ಬಾವುಟದ ಬಣ್ಣ ಮಾಸಿ, ಹರಿದು, ಕೊಳೆಯಾಗಿ ಬಿಟ್ಟಿದ್ದರೂ ಅದು ಅಲ್ಲಿಯಷ್ಟೆ ನಿಲ್ಲಿಸಿಕೊಂಡಿದ್ದು, ಇದುವರೆಗೆ ಹೊಸ ಬಾವುಟ ಹಾರಿಸುವ ಕಾರ್ಯ ಆರಂಭವಾಗಿಲ್ಲ.

ಸ್ಥಳೀಯ ಕನ್ನಡಪರ ಸಂಘಟನೆಗಳು, ನಾಗರಿಕರು, ಆಕ್ರೋಶ ವ್ಯಕ್ತವಾಗುತ್ತಿದ್ದು, “ಇದು ಕನ್ನಡದ ಹೆಮ್ಮೆ ಹಾಗೂ ಸಾಂಸ್ಕೃತಿಕ ಗೌರವಕ್ಕೆ ಧಕ್ಕೆಯಾಗುವಂತದ್ದು” ಎನ್ನುವ ಗಂಭೀರ ಆರೋಪಗಳು ಕೇಳಿಬರುತ್ತಿವೆ.

“ಹುಬ್ಬಳ್ಳಿಯಂತ ಹಳೆಯ ಶಾಸ್ತ್ರೀಯ ನಗರದಲ್ಲಿ ಕನ್ನಡ ಬಾವುಟವನ್ನು ಇಂತಹ ಸ್ಥಿತಿಯಲ್ಲಿ ನೋಡುವುದು ನಿಜಕ್ಕೂ ಮನನೊಂದುಬಿಡುವಂತಹದ್ದು,” ಎಂದು ಸ್ಥಳೀಯರೊಬ್ಬರು ಅಸಮಾಧಾನ ವ್ಯಕ್ತಪಡಿಸಿದರು.

ಈ ಕುರಿತು ಪ್ರಸ್ತಾಪವಾಗುತ್ತಿದ್ದರೂ ಸಂಬಂಧಪಟ್ಟ ಸ್ಥಳೀಯ ಆಡಳಿತ, ಜನಪ್ರತಿನಿಧಿಗಳು ಹಾಗೂ ಕನ್ನಡ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲವೆಂಬುದು ಆತಂಕಕಾರಿ ವಿಷಯವಾಗಿದೆ.

ಈಗಾದರೂ ಅಧಿಕಾರಿಗಳು ಎಚ್ಚೆತ್ತುಕೊಂಡು ಚೆನ್ನಮ್ಮ ವೃತ್ತದಲ್ಲಿ ಕೊಳೆಯುತ್ತಿರುವ ಬಾವುಟವನ್ನು ಕಿತ್ತಿ ಹಾಕಿ, ಹೊಸ ಬಾವುಟ ಹಾರಿಸುವ ಮೂಲಕ ಕನ್ನಡದ ಗೌರವವನ್ನು ಉಳಿಸಬೇಕಾಗಿದೆ.

ಕನ್ನಡಕ್ಕೆ ಕಣ್ಣು ಕುಗ್ಗದ ನಿಜವಾದ ಗೌರವ ಇದಾಗಿದೆ – ಹೆಸರಿಗಷ್ಟೆ ಕನ್ನಡಪರ ಅನ್ನಿಸದೇ, ಕ್ರಿಯಾತ್ಮಕವಾಗಿ ಕೂಡ ನಿಷ್ಠೆ ತೋರಿಸಲು ಇದು ಸೂಕ್ತ ಸಮಯ ಎಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ.

nazeer ahamad

Recent Posts

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

13 minutes ago

ಗೌರಿಬಿದನೂರಿನಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ಬಳಕೆ ವಿರುದ್ಧ ದಾಳಿ – 36 ಸಿಲಿಂಡರ್‌ಗಳು ಜಪ್ತಿ

ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…

33 minutes ago

ರೀಲ್ಸ್ ಹುಚ್ಚಾಟದ ದುರಂತ: ಹುಬ್ಬಳ್ಳಿಯಲ್ಲಿ ಬಾಲಕ ಸಾವು – ಇಬ್ಬರ ಬಂಧನ

ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವ ಹುಚ್ಚಾಟದಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು…

5 hours ago

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

18 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

19 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

1 day ago