ಹುಬ್ಬಳ್ಳಿ, ಜೂನ್ 29: ಐತಿಹಾಸಿಕ ಹಿನ್ನೆಲೆ ಹೊಂದಿದ ಉತ್ತರ ಕರ್ನಾಟಕದ ಹೆಮ್ಮೆಯ ನಗರ ಹುಬ್ಬಳ್ಳಿ, ವಾಣಿಜ್ಯ ಕೇಂದ್ರವೆಂದು, “ಛೋಟಾ ಮುಂಬೈ”ಯೆಂದು ಖ್ಯಾತಿ ಪಡೆದಿರುವ ಈ ನಗರ ಈಗ ಕನ್ನಡಪರ ಅಭಿಮಾನಿಗಳ ಮನಸ್ಸಿಗೆ ನೋವುಂಟುಮಾಡುವ ಘಟನೆಗೆ ಸಾಕ್ಷಿಯಾಗಿದೆ. ನಗರದ ಹೃದಯ ಭಾಗವಾದ ಚೆನ್ನಮ್ಮ ವೃತ್ತದಲ್ಲಿ ಹಾರುತ್ತಿದ್ದ ಕನ್ನಡ ಬಾವುಟ ಕೊಳೆಯಾಗಿ ಬಣ್ಣಮಾಸಿ ಅವ್ಯವಸ್ಥೆಯ ಸ್ಥಿತಿಗೆ ತಲುಪಿರುವುದು ಸಾರ್ವಜನಿಕ ಅಸಮಾಧಾನಕ್ಕೆ ಕಾರಣವಾಗಿದೆ.
ಹುಬ್ಬಳ್ಳಿ ನಗರದ ಪೈಕಿ ಹೆಚ್ಚು ಜನ ಓಡಾಡುವ ಪ್ರದೇಶವಲ್ಲದೆ, ಫ್ಲೈ ಓವರ್ ಕಾಮಗಾರಿ ನಡೆಯುತ್ತಿರುವ ಈ ಮಾರ್ಗದ ಮೂಲಕ ಪ್ರತಿದಿನ ನೂರಾರು ಜನರು, ಅಧಿಕಾರಿಗಳು ಮತ್ತು ಸಾರ್ವಜನಿಕರು ಸಂಚರಿಸುತ್ತಿದ್ದಾರೆ. ಆದರೆ ಬಾವುಟದ ತೊಂದರೆ ಯಾರಿಗೂ ಕಾಣಿಸಿಕೊಂಡಿಲ್ಲವೆಂಬಂತೆ ನಿರ್ಲಕ್ಷ್ಯ ಮುಂದುವರಿದಿದೆ. ಬಾವುಟದ ಬಣ್ಣ ಮಾಸಿ, ಹರಿದು, ಕೊಳೆಯಾಗಿ ಬಿಟ್ಟಿದ್ದರೂ ಅದು ಅಲ್ಲಿಯಷ್ಟೆ ನಿಲ್ಲಿಸಿಕೊಂಡಿದ್ದು, ಇದುವರೆಗೆ ಹೊಸ ಬಾವುಟ ಹಾರಿಸುವ ಕಾರ್ಯ ಆರಂಭವಾಗಿಲ್ಲ.
ಸ್ಥಳೀಯ ಕನ್ನಡಪರ ಸಂಘಟನೆಗಳು, ನಾಗರಿಕರು, ಆಕ್ರೋಶ ವ್ಯಕ್ತವಾಗುತ್ತಿದ್ದು, “ಇದು ಕನ್ನಡದ ಹೆಮ್ಮೆ ಹಾಗೂ ಸಾಂಸ್ಕೃತಿಕ ಗೌರವಕ್ಕೆ ಧಕ್ಕೆಯಾಗುವಂತದ್ದು” ಎನ್ನುವ ಗಂಭೀರ ಆರೋಪಗಳು ಕೇಳಿಬರುತ್ತಿವೆ.
“ಹುಬ್ಬಳ್ಳಿಯಂತ ಹಳೆಯ ಶಾಸ್ತ್ರೀಯ ನಗರದಲ್ಲಿ ಕನ್ನಡ ಬಾವುಟವನ್ನು ಇಂತಹ ಸ್ಥಿತಿಯಲ್ಲಿ ನೋಡುವುದು ನಿಜಕ್ಕೂ ಮನನೊಂದುಬಿಡುವಂತಹದ್ದು,” ಎಂದು ಸ್ಥಳೀಯರೊಬ್ಬರು ಅಸಮಾಧಾನ ವ್ಯಕ್ತಪಡಿಸಿದರು.
ಈ ಕುರಿತು ಪ್ರಸ್ತಾಪವಾಗುತ್ತಿದ್ದರೂ ಸಂಬಂಧಪಟ್ಟ ಸ್ಥಳೀಯ ಆಡಳಿತ, ಜನಪ್ರತಿನಿಧಿಗಳು ಹಾಗೂ ಕನ್ನಡ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲವೆಂಬುದು ಆತಂಕಕಾರಿ ವಿಷಯವಾಗಿದೆ.
ಈಗಾದರೂ ಅಧಿಕಾರಿಗಳು ಎಚ್ಚೆತ್ತುಕೊಂಡು ಚೆನ್ನಮ್ಮ ವೃತ್ತದಲ್ಲಿ ಕೊಳೆಯುತ್ತಿರುವ ಬಾವುಟವನ್ನು ಕಿತ್ತಿ ಹಾಕಿ, ಹೊಸ ಬಾವುಟ ಹಾರಿಸುವ ಮೂಲಕ ಕನ್ನಡದ ಗೌರವವನ್ನು ಉಳಿಸಬೇಕಾಗಿದೆ.
ಕನ್ನಡಕ್ಕೆ ಕಣ್ಣು ಕುಗ್ಗದ ನಿಜವಾದ ಗೌರವ ಇದಾಗಿದೆ – ಹೆಸರಿಗಷ್ಟೆ ಕನ್ನಡಪರ ಅನ್ನಿಸದೇ, ಕ್ರಿಯಾತ್ಮಕವಾಗಿ ಕೂಡ ನಿಷ್ಠೆ ತೋರಿಸಲು ಇದು ಸೂಕ್ತ ಸಮಯ ಎಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…