Latest

ಚೆನ್ನಮ್ಮ ವೃತ್ತದಲ್ಲಿ ಕೊಳೆಯುತ್ತಿರುವ ಕನ್ನಡ ಧ್ವಜ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕ ಆಕ್ರೋಶ.

ಹುಬ್ಬಳ್ಳಿ, ಜೂನ್ 29: ಐತಿಹಾಸಿಕ ಹಿನ್ನೆಲೆ ಹೊಂದಿದ ಉತ್ತರ ಕರ್ನಾಟಕದ ಹೆಮ್ಮೆಯ ನಗರ ಹುಬ್ಬಳ್ಳಿ, ವಾಣಿಜ್ಯ ಕೇಂದ್ರವೆಂದು, “ಛೋಟಾ ಮುಂಬೈ”ಯೆಂದು ಖ್ಯಾತಿ ಪಡೆದಿರುವ ಈ ನಗರ ಈಗ ಕನ್ನಡಪರ ಅಭಿಮಾನಿಗಳ ಮನಸ್ಸಿಗೆ ನೋವುಂಟುಮಾಡುವ ಘಟನೆಗೆ ಸಾಕ್ಷಿಯಾಗಿದೆ. ನಗರದ ಹೃದಯ ಭಾಗವಾದ ಚೆನ್ನಮ್ಮ ವೃತ್ತದಲ್ಲಿ ಹಾರುತ್ತಿದ್ದ ಕನ್ನಡ ಬಾವುಟ ಕೊಳೆಯಾಗಿ ಬಣ್ಣಮಾಸಿ ಅವ್ಯವಸ್ಥೆಯ ಸ್ಥಿತಿಗೆ ತಲುಪಿರುವುದು ಸಾರ್ವಜನಿಕ ಅಸಮಾಧಾನಕ್ಕೆ ಕಾರಣವಾಗಿದೆ.

ಹುಬ್ಬಳ್ಳಿ ನಗರದ ಪೈಕಿ ಹೆಚ್ಚು ಜನ ಓಡಾಡುವ ಪ್ರದೇಶವಲ್ಲದೆ, ಫ್ಲೈ ಓವರ್ ಕಾಮಗಾರಿ ನಡೆಯುತ್ತಿರುವ ಈ ಮಾರ್ಗದ ಮೂಲಕ ಪ್ರತಿದಿನ ನೂರಾರು ಜನರು, ಅಧಿಕಾರಿಗಳು ಮತ್ತು ಸಾರ್ವಜನಿಕರು ಸಂಚರಿಸುತ್ತಿದ್ದಾರೆ. ಆದರೆ ಬಾವುಟದ ತೊಂದರೆ ಯಾರಿಗೂ ಕಾಣಿಸಿಕೊಂಡಿಲ್ಲವೆಂಬಂತೆ ನಿರ್ಲಕ್ಷ್ಯ ಮುಂದುವರಿದಿದೆ. ಬಾವುಟದ ಬಣ್ಣ ಮಾಸಿ, ಹರಿದು, ಕೊಳೆಯಾಗಿ ಬಿಟ್ಟಿದ್ದರೂ ಅದು ಅಲ್ಲಿಯಷ್ಟೆ ನಿಲ್ಲಿಸಿಕೊಂಡಿದ್ದು, ಇದುವರೆಗೆ ಹೊಸ ಬಾವುಟ ಹಾರಿಸುವ ಕಾರ್ಯ ಆರಂಭವಾಗಿಲ್ಲ.

ಸ್ಥಳೀಯ ಕನ್ನಡಪರ ಸಂಘಟನೆಗಳು, ನಾಗರಿಕರು, ಆಕ್ರೋಶ ವ್ಯಕ್ತವಾಗುತ್ತಿದ್ದು, “ಇದು ಕನ್ನಡದ ಹೆಮ್ಮೆ ಹಾಗೂ ಸಾಂಸ್ಕೃತಿಕ ಗೌರವಕ್ಕೆ ಧಕ್ಕೆಯಾಗುವಂತದ್ದು” ಎನ್ನುವ ಗಂಭೀರ ಆರೋಪಗಳು ಕೇಳಿಬರುತ್ತಿವೆ.

“ಹುಬ್ಬಳ್ಳಿಯಂತ ಹಳೆಯ ಶಾಸ್ತ್ರೀಯ ನಗರದಲ್ಲಿ ಕನ್ನಡ ಬಾವುಟವನ್ನು ಇಂತಹ ಸ್ಥಿತಿಯಲ್ಲಿ ನೋಡುವುದು ನಿಜಕ್ಕೂ ಮನನೊಂದುಬಿಡುವಂತಹದ್ದು,” ಎಂದು ಸ್ಥಳೀಯರೊಬ್ಬರು ಅಸಮಾಧಾನ ವ್ಯಕ್ತಪಡಿಸಿದರು.

ಈ ಕುರಿತು ಪ್ರಸ್ತಾಪವಾಗುತ್ತಿದ್ದರೂ ಸಂಬಂಧಪಟ್ಟ ಸ್ಥಳೀಯ ಆಡಳಿತ, ಜನಪ್ರತಿನಿಧಿಗಳು ಹಾಗೂ ಕನ್ನಡ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲವೆಂಬುದು ಆತಂಕಕಾರಿ ವಿಷಯವಾಗಿದೆ.

ಈಗಾದರೂ ಅಧಿಕಾರಿಗಳು ಎಚ್ಚೆತ್ತುಕೊಂಡು ಚೆನ್ನಮ್ಮ ವೃತ್ತದಲ್ಲಿ ಕೊಳೆಯುತ್ತಿರುವ ಬಾವುಟವನ್ನು ಕಿತ್ತಿ ಹಾಕಿ, ಹೊಸ ಬಾವುಟ ಹಾರಿಸುವ ಮೂಲಕ ಕನ್ನಡದ ಗೌರವವನ್ನು ಉಳಿಸಬೇಕಾಗಿದೆ.

ಕನ್ನಡಕ್ಕೆ ಕಣ್ಣು ಕುಗ್ಗದ ನಿಜವಾದ ಗೌರವ ಇದಾಗಿದೆ – ಹೆಸರಿಗಷ್ಟೆ ಕನ್ನಡಪರ ಅನ್ನಿಸದೇ, ಕ್ರಿಯಾತ್ಮಕವಾಗಿ ಕೂಡ ನಿಷ್ಠೆ ತೋರಿಸಲು ಇದು ಸೂಕ್ತ ಸಮಯ ಎಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

10 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

17 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

17 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago