Latest

ಚೆನ್ನಮ್ಮ ವೃತ್ತದಲ್ಲಿ ಕೊಳೆಯುತ್ತಿರುವ ಕನ್ನಡ ಧ್ವಜ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕ ಆಕ್ರೋಶ.

ಹುಬ್ಬಳ್ಳಿ, ಜೂನ್ 29: ಐತಿಹಾಸಿಕ ಹಿನ್ನೆಲೆ ಹೊಂದಿದ ಉತ್ತರ ಕರ್ನಾಟಕದ ಹೆಮ್ಮೆಯ ನಗರ ಹುಬ್ಬಳ್ಳಿ, ವಾಣಿಜ್ಯ ಕೇಂದ್ರವೆಂದು, “ಛೋಟಾ ಮುಂಬೈ”ಯೆಂದು ಖ್ಯಾತಿ ಪಡೆದಿರುವ ಈ ನಗರ ಈಗ ಕನ್ನಡಪರ ಅಭಿಮಾನಿಗಳ ಮನಸ್ಸಿಗೆ ನೋವುಂಟುಮಾಡುವ ಘಟನೆಗೆ ಸಾಕ್ಷಿಯಾಗಿದೆ. ನಗರದ ಹೃದಯ ಭಾಗವಾದ ಚೆನ್ನಮ್ಮ ವೃತ್ತದಲ್ಲಿ ಹಾರುತ್ತಿದ್ದ ಕನ್ನಡ ಬಾವುಟ ಕೊಳೆಯಾಗಿ ಬಣ್ಣಮಾಸಿ ಅವ್ಯವಸ್ಥೆಯ ಸ್ಥಿತಿಗೆ ತಲುಪಿರುವುದು ಸಾರ್ವಜನಿಕ ಅಸಮಾಧಾನಕ್ಕೆ ಕಾರಣವಾಗಿದೆ.

ಹುಬ್ಬಳ್ಳಿ ನಗರದ ಪೈಕಿ ಹೆಚ್ಚು ಜನ ಓಡಾಡುವ ಪ್ರದೇಶವಲ್ಲದೆ, ಫ್ಲೈ ಓವರ್ ಕಾಮಗಾರಿ ನಡೆಯುತ್ತಿರುವ ಈ ಮಾರ್ಗದ ಮೂಲಕ ಪ್ರತಿದಿನ ನೂರಾರು ಜನರು, ಅಧಿಕಾರಿಗಳು ಮತ್ತು ಸಾರ್ವಜನಿಕರು ಸಂಚರಿಸುತ್ತಿದ್ದಾರೆ. ಆದರೆ ಬಾವುಟದ ತೊಂದರೆ ಯಾರಿಗೂ ಕಾಣಿಸಿಕೊಂಡಿಲ್ಲವೆಂಬಂತೆ ನಿರ್ಲಕ್ಷ್ಯ ಮುಂದುವರಿದಿದೆ. ಬಾವುಟದ ಬಣ್ಣ ಮಾಸಿ, ಹರಿದು, ಕೊಳೆಯಾಗಿ ಬಿಟ್ಟಿದ್ದರೂ ಅದು ಅಲ್ಲಿಯಷ್ಟೆ ನಿಲ್ಲಿಸಿಕೊಂಡಿದ್ದು, ಇದುವರೆಗೆ ಹೊಸ ಬಾವುಟ ಹಾರಿಸುವ ಕಾರ್ಯ ಆರಂಭವಾಗಿಲ್ಲ.

ಸ್ಥಳೀಯ ಕನ್ನಡಪರ ಸಂಘಟನೆಗಳು, ನಾಗರಿಕರು, ಆಕ್ರೋಶ ವ್ಯಕ್ತವಾಗುತ್ತಿದ್ದು, “ಇದು ಕನ್ನಡದ ಹೆಮ್ಮೆ ಹಾಗೂ ಸಾಂಸ್ಕೃತಿಕ ಗೌರವಕ್ಕೆ ಧಕ್ಕೆಯಾಗುವಂತದ್ದು” ಎನ್ನುವ ಗಂಭೀರ ಆರೋಪಗಳು ಕೇಳಿಬರುತ್ತಿವೆ.

“ಹುಬ್ಬಳ್ಳಿಯಂತ ಹಳೆಯ ಶಾಸ್ತ್ರೀಯ ನಗರದಲ್ಲಿ ಕನ್ನಡ ಬಾವುಟವನ್ನು ಇಂತಹ ಸ್ಥಿತಿಯಲ್ಲಿ ನೋಡುವುದು ನಿಜಕ್ಕೂ ಮನನೊಂದುಬಿಡುವಂತಹದ್ದು,” ಎಂದು ಸ್ಥಳೀಯರೊಬ್ಬರು ಅಸಮಾಧಾನ ವ್ಯಕ್ತಪಡಿಸಿದರು.

ಈ ಕುರಿತು ಪ್ರಸ್ತಾಪವಾಗುತ್ತಿದ್ದರೂ ಸಂಬಂಧಪಟ್ಟ ಸ್ಥಳೀಯ ಆಡಳಿತ, ಜನಪ್ರತಿನಿಧಿಗಳು ಹಾಗೂ ಕನ್ನಡ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲವೆಂಬುದು ಆತಂಕಕಾರಿ ವಿಷಯವಾಗಿದೆ.

ಈಗಾದರೂ ಅಧಿಕಾರಿಗಳು ಎಚ್ಚೆತ್ತುಕೊಂಡು ಚೆನ್ನಮ್ಮ ವೃತ್ತದಲ್ಲಿ ಕೊಳೆಯುತ್ತಿರುವ ಬಾವುಟವನ್ನು ಕಿತ್ತಿ ಹಾಕಿ, ಹೊಸ ಬಾವುಟ ಹಾರಿಸುವ ಮೂಲಕ ಕನ್ನಡದ ಗೌರವವನ್ನು ಉಳಿಸಬೇಕಾಗಿದೆ.

ಕನ್ನಡಕ್ಕೆ ಕಣ್ಣು ಕುಗ್ಗದ ನಿಜವಾದ ಗೌರವ ಇದಾಗಿದೆ – ಹೆಸರಿಗಷ್ಟೆ ಕನ್ನಡಪರ ಅನ್ನಿಸದೇ, ಕ್ರಿಯಾತ್ಮಕವಾಗಿ ಕೂಡ ನಿಷ್ಠೆ ತೋರಿಸಲು ಇದು ಸೂಕ್ತ ಸಮಯ ಎಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ.

nazeer ahamad

Recent Posts

ಗದಗದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ಖಾಸಗಿ ದೂರು; ಎಫ್‌ಐಆರ್ ವಿಳಂಬ ಆರೋಪ

ಗದಗ ಜಿಲ್ಲೆಯ ಡಿವೈಎಸ್ಪಿ ಮುರ್ತುಜಾ ಖಾದ್ರಿ ಮತ್ತು ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ಸಿದ್ದರಾಮೇಶ್ವರ ಗಡದ ವಿರುದ್ಧ ಗದಗ ಜೆಎಂಎಫ್‌ಸಿ…

35 minutes ago

ರಾಪಿಡೋ, ಓಲಾ, ಉಬರ್ ಬೈಕ್ ಟ್ಯಾಕ್ಸಿ ಸೇವೆ ನಿಷೇಧಕ್ಕೆ ಆಗ್ರಹ; ಜಿಲ್ಲಾಧಿಕಾರಿಗೆ ಶಿರಸಿ ಆಟೋ ಚಾಲಕರ ಸಂಘ ಮನವಿ

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಓಲಾ, ಉಬರ್ ಹಾಗೂ ರಾಪಿಡೋ ಬೈಕ್ ಟ್ಯಾಕ್ಸಿ ಸೇವೆಗಳನ್ನು ತಕ್ಷಣವೇ ನಿಷೇಧಿಸಬೇಕು ಎಂದು ಆಗ್ರಹಿಸಿ…

36 minutes ago

ಶಿರಸಿ ಬಸ್ ನಿಲ್ದಾಣದಲ್ಲಿ 1.59 ಲಕ್ಷ ರೂ. ಚಿನ್ನಾಭರಣ ಕಳವು ಪ್ರಕರಣ ಭೇದಿಸಿದ ಪೊಲೀಸರು; ಬೆಂಗಳೂರು ಮೂಲದ ಮಹಿಳೆ ಬಂಧನ

ಶಿರಸಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಬ್ಯಾಗ್‌ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣವನ್ನು ಶಿರಸಿ ನಗರ…

38 minutes ago

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

19 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

24 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

24 hours ago