ಚಿಕ್ಕಮಗಳೂರು ತಾಲೂಕಿನ ಮೂಗ್ತಿಹಳ್ಳಿ ಸಮೀಪ ಸೋಮವಾರ ಬೆಳಿಗ್ಗೆ ಬೀದಿ ನಾಯಿಗಳ ಗುಂಪೊಂದು ಭಯಭೀತಗೊಳಿಸಿದ್ದ ಜಿಂಕೆ, ತಪ್ಪಿಸಿಕೊಳ್ಳುವ ಯತ್ನದಲ್ಲಿ ತಂತಿ ಬೇಲಿಗೆ ತಾಗಿದು ಗಾಯಗೊಂಡಿತು. ಬೆಳ್ಳಂಬೆಳಗ್ಗೆ ಈ ದೃಶ್ಯ ನೋಡಿದ ಸ್ಥಳೀಯರು ತಕ್ಷಣವೇ ಓಡಿಸಿ, ಜಿಂಕೆಗೆ ಸಹಾಯ ಮಾಡಲು ಮುಂದಾದರು.

ಅವರು ವಿಷಯವನ್ನು ಅರಣ್ಯ ಇಲಾಖೆಗೆ ತಿಳಿಸಿದರು. ಕೂಡಲೇ ಸ್ಥಳಕ್ಕೆ ಧಾವಿಸಿದ ಅರಣ್ಯಾಧಿಕಾರಿಗಳು ಜಿಂಕೆಯನ್ನು ಪಶುವೈದ್ಯಕೀಯ ಆಸ್ಪತ್ರೆಗೆ ಕರೆದೊಯ್ದರು. ಆದರೆ ನಾಯಿಗಳ ದಾಳಿಯಿಂದ ಗಾಬರಿಗೊಂಡಿದ್ದ ಜಿಂಕೆ ತೀವ್ರ ಆಘಾತದಿಂದ ಬಳಲುತ್ತಿತ್ತು.

ವೈದ್ಯರು ಬದುಕಿಸಬೇಕೆಂಬ ಉದ್ದೇಶದಿಂದ ತ್ವರಿತ ಚಿಕಿತ್ಸೆ ನೀಡಿದರೂ, ಜಿಂಕೆಯ ಸ್ಥಿತಿ ಗಂಭೀರವಾಗಿತ್ತು ಮತ್ತು ಕೊನೆಗೆ ಅದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿತು.

ಪಶು ವೈದ್ಯರ ಮೇಲ್ವಿಚಾರಣೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಅರಣ್ಯ ಇಲಾಖೆ ಅಧಿಕೃತ ಪ್ರಕ್ರಿಯೆಯ ಮೂಲಕ ಜಿಂಕೆಗೆ ಅಂತಿಮ ವಿಧಿವಿಧಾನ ನೆರವೇರಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Related News

error: Content is protected !!