ಚಿಕ್ಕಮಗಳೂರು ತಾಲೂಕಿನ ಮೂಗ್ತಿಹಳ್ಳಿ ಸಮೀಪ ಸೋಮವಾರ ಬೆಳಿಗ್ಗೆ ಬೀದಿ ನಾಯಿಗಳ ಗುಂಪೊಂದು ಭಯಭೀತಗೊಳಿಸಿದ್ದ ಜಿಂಕೆ, ತಪ್ಪಿಸಿಕೊಳ್ಳುವ ಯತ್ನದಲ್ಲಿ ತಂತಿ ಬೇಲಿಗೆ ತಾಗಿದು ಗಾಯಗೊಂಡಿತು. ಬೆಳ್ಳಂಬೆಳಗ್ಗೆ ಈ ದೃಶ್ಯ ನೋಡಿದ ಸ್ಥಳೀಯರು ತಕ್ಷಣವೇ ಓಡಿಸಿ, ಜಿಂಕೆಗೆ ಸಹಾಯ ಮಾಡಲು ಮುಂದಾದರು.
ಅವರು ವಿಷಯವನ್ನು ಅರಣ್ಯ ಇಲಾಖೆಗೆ ತಿಳಿಸಿದರು. ಕೂಡಲೇ ಸ್ಥಳಕ್ಕೆ ಧಾವಿಸಿದ ಅರಣ್ಯಾಧಿಕಾರಿಗಳು ಜಿಂಕೆಯನ್ನು ಪಶುವೈದ್ಯಕೀಯ ಆಸ್ಪತ್ರೆಗೆ ಕರೆದೊಯ್ದರು. ಆದರೆ ನಾಯಿಗಳ ದಾಳಿಯಿಂದ ಗಾಬರಿಗೊಂಡಿದ್ದ ಜಿಂಕೆ ತೀವ್ರ ಆಘಾತದಿಂದ ಬಳಲುತ್ತಿತ್ತು.
ವೈದ್ಯರು ಬದುಕಿಸಬೇಕೆಂಬ ಉದ್ದೇಶದಿಂದ ತ್ವರಿತ ಚಿಕಿತ್ಸೆ ನೀಡಿದರೂ, ಜಿಂಕೆಯ ಸ್ಥಿತಿ ಗಂಭೀರವಾಗಿತ್ತು ಮತ್ತು ಕೊನೆಗೆ ಅದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿತು.
ಪಶು ವೈದ್ಯರ ಮೇಲ್ವಿಚಾರಣೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಅರಣ್ಯ ಇಲಾಖೆ ಅಧಿಕೃತ ಪ್ರಕ್ರಿಯೆಯ ಮೂಲಕ ಜಿಂಕೆಗೆ ಅಂತಿಮ ವಿಧಿವಿಧಾನ ನೆರವೇರಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು,…
ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…
ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…
ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…