ಚಿಕ್ಕಮಗಳೂರು ತಾಲೂಕಿನ ಮೂಗ್ತಿಹಳ್ಳಿ ಸಮೀಪ ಸೋಮವಾರ ಬೆಳಿಗ್ಗೆ ಬೀದಿ ನಾಯಿಗಳ ಗುಂಪೊಂದು ಭಯಭೀತಗೊಳಿಸಿದ್ದ ಜಿಂಕೆ, ತಪ್ಪಿಸಿಕೊಳ್ಳುವ ಯತ್ನದಲ್ಲಿ ತಂತಿ ಬೇಲಿಗೆ ತಾಗಿದು ಗಾಯಗೊಂಡಿತು. ಬೆಳ್ಳಂಬೆಳಗ್ಗೆ ಈ ದೃಶ್ಯ ನೋಡಿದ ಸ್ಥಳೀಯರು ತಕ್ಷಣವೇ ಓಡಿಸಿ, ಜಿಂಕೆಗೆ ಸಹಾಯ ಮಾಡಲು ಮುಂದಾದರು.
ಅವರು ವಿಷಯವನ್ನು ಅರಣ್ಯ ಇಲಾಖೆಗೆ ತಿಳಿಸಿದರು. ಕೂಡಲೇ ಸ್ಥಳಕ್ಕೆ ಧಾವಿಸಿದ ಅರಣ್ಯಾಧಿಕಾರಿಗಳು ಜಿಂಕೆಯನ್ನು ಪಶುವೈದ್ಯಕೀಯ ಆಸ್ಪತ್ರೆಗೆ ಕರೆದೊಯ್ದರು. ಆದರೆ ನಾಯಿಗಳ ದಾಳಿಯಿಂದ ಗಾಬರಿಗೊಂಡಿದ್ದ ಜಿಂಕೆ ತೀವ್ರ ಆಘಾತದಿಂದ ಬಳಲುತ್ತಿತ್ತು.
ವೈದ್ಯರು ಬದುಕಿಸಬೇಕೆಂಬ ಉದ್ದೇಶದಿಂದ ತ್ವರಿತ ಚಿಕಿತ್ಸೆ ನೀಡಿದರೂ, ಜಿಂಕೆಯ ಸ್ಥಿತಿ ಗಂಭೀರವಾಗಿತ್ತು ಮತ್ತು ಕೊನೆಗೆ ಅದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿತು.
ಪಶು ವೈದ್ಯರ ಮೇಲ್ವಿಚಾರಣೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಅರಣ್ಯ ಇಲಾಖೆ ಅಧಿಕೃತ ಪ್ರಕ್ರಿಯೆಯ ಮೂಲಕ ಜಿಂಕೆಗೆ ಅಂತಿಮ ವಿಧಿವಿಧಾನ ನೆರವೇರಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…