Latest

ಬನವಾಸಿ ಅರಣ್ಯ ಇಲಾಖೆಯ ಮಿಂಚಿನ ಕಾರ್ಯಾಚರಣೆ ಜಿಂಕೆ ಹಂತಕರ ಬಂಧನ

ಶಿರಸಿ : ಜಿಂಕೆಯನ್ನು ಹತ್ಯೆಗೈದು ಅದರ ಕೊಂಬು, ಕೋಡು ಹಾಗೂ ಮಾಂಸವನ್ನು ಹಣದಾಸೆಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ತಂಡದ ಮೇಲೆ ಖಚಿತ ಮಾಹಿತಿಯನ್ನು ಮೇರೆಗೆ ಬನವಾಸಿ ಅರಣ್ಯ ಅಧಿಕಾರಿಗಳು ಧಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಪ್ರಕರಣದ ಮತ್ತೋರ್ವ ಆರೋಪಿ ನಾಪತ್ತೆ ಯಾಗಿರುವ ಘಟನೆ ಬನವಾಸಿ ಹೋಬಳಿಯ ಕಾನಕೊಪ್ಪದಲ್ಲಿ ನಡೆದಿದೆ.

ಆರೋಪಿಗಳಾದ ಪರಮೇಶ್ವರ ಮಾದೇವ ಮಡಿವಾಳ ಕಾನಕೊಪ್ಪ ಹಾಗೂ ಶಿವಪ್ಪ ಬಸ್ಯಾ ಗೌಡ ಕಾನಕೊಪ್ಪ ಎಂಬುವವರನ್ನು ಬನವಾಸಿ ಅರಣ್ಯ ಅಧಿಕಾರಿಗಳು ಬಂಧಿಸಿದ್ದು ಇನ್ನೋರ್ವ ಆರೋಪಿ ಶಿವರಾಂ ತಿಮ್ಮಾ ನಾಯ್ಕ ಕೆಳಗಿನ ಬ್ಯಾಗದ್ದೆ ಎಂಬಾತ ತಲೆಮರೆಸಿಕೊಂಡಿದ್ದಾನೆ.

ಈ ಮೂವರು ಆರೋಪಿಗಳು ಸೇರಿ ಆಗಸ್ಟ್ 17 ರ ಬೆಳಗಿನ ಜಾವ ಜಿಂಕೆಯನ್ನು ಕೊಂದು ಅದರ ಕೊಂಬು ಹಾಗೂ ಮಾಂಸ ಸೇರಿ ಇನ್ನಿತರ ವಸ್ತುಗಳನ್ನು ಮಾರಾಟ ಮಾಡಿ ಹಣಗಳಿಸಲು ಸಂಚು ರೂಪಿಸಿದ್ದರು.

ಈ ಕುರಿತು ಖಚಿತ ಮಾಹಿತಿಯ ಮೇರೆಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಜ್ಜಯ್ಯ ಜಿ ಆರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಅಶೋಕ್ ಅಲ್ಲಿಗೂರ್ ಇವರ ಮಾರ್ಗದರ್ಶನದಲ್ಲಿ ಬನವಾಸಿ ವಲಯ ಅರಣ್ಯಾಧಿಕಾರಿ ಉಷಾ ಕಬ್ಬೇರ್, ಸಿಬ್ಬಂದಿಗಳಾದ ಮಹೇಶ್ ಅಜೇರ್, ರಮೇಶ್ ಎಚ್ ಸಿ, ಮಧುಕೇಶ್ವರ ನಾಯ್ಕ ಪಾಲ್ಗೊಂಡಿದ್ದು ಆರೋಪಿಗಳಿಂದ ಜಿಂಕೆ ಮಾಂಸ ಹಾಗೂ ಕೃತ್ಯಕ್ಕೆ ಬೆಳೆಸಲಾದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago