ಶಿರಸಿ : ಜಿಂಕೆಯನ್ನು ಹತ್ಯೆಗೈದು ಅದರ ಕೊಂಬು, ಕೋಡು ಹಾಗೂ ಮಾಂಸವನ್ನು ಹಣದಾಸೆಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ತಂಡದ ಮೇಲೆ ಖಚಿತ ಮಾಹಿತಿಯನ್ನು ಮೇರೆಗೆ ಬನವಾಸಿ ಅರಣ್ಯ ಅಧಿಕಾರಿಗಳು ಧಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಪ್ರಕರಣದ ಮತ್ತೋರ್ವ ಆರೋಪಿ ನಾಪತ್ತೆ ಯಾಗಿರುವ ಘಟನೆ ಬನವಾಸಿ ಹೋಬಳಿಯ ಕಾನಕೊಪ್ಪದಲ್ಲಿ ನಡೆದಿದೆ.
ಆರೋಪಿಗಳಾದ ಪರಮೇಶ್ವರ ಮಾದೇವ ಮಡಿವಾಳ ಕಾನಕೊಪ್ಪ ಹಾಗೂ ಶಿವಪ್ಪ ಬಸ್ಯಾ ಗೌಡ ಕಾನಕೊಪ್ಪ ಎಂಬುವವರನ್ನು ಬನವಾಸಿ ಅರಣ್ಯ ಅಧಿಕಾರಿಗಳು ಬಂಧಿಸಿದ್ದು ಇನ್ನೋರ್ವ ಆರೋಪಿ ಶಿವರಾಂ ತಿಮ್ಮಾ ನಾಯ್ಕ ಕೆಳಗಿನ ಬ್ಯಾಗದ್ದೆ ಎಂಬಾತ ತಲೆಮರೆಸಿಕೊಂಡಿದ್ದಾನೆ.
ಈ ಮೂವರು ಆರೋಪಿಗಳು ಸೇರಿ ಆಗಸ್ಟ್ 17 ರ ಬೆಳಗಿನ ಜಾವ ಜಿಂಕೆಯನ್ನು ಕೊಂದು ಅದರ ಕೊಂಬು ಹಾಗೂ ಮಾಂಸ ಸೇರಿ ಇನ್ನಿತರ ವಸ್ತುಗಳನ್ನು ಮಾರಾಟ ಮಾಡಿ ಹಣಗಳಿಸಲು ಸಂಚು ರೂಪಿಸಿದ್ದರು.
ಈ ಕುರಿತು ಖಚಿತ ಮಾಹಿತಿಯ ಮೇರೆಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಜ್ಜಯ್ಯ ಜಿ ಆರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಅಶೋಕ್ ಅಲ್ಲಿಗೂರ್ ಇವರ ಮಾರ್ಗದರ್ಶನದಲ್ಲಿ ಬನವಾಸಿ ವಲಯ ಅರಣ್ಯಾಧಿಕಾರಿ ಉಷಾ ಕಬ್ಬೇರ್, ಸಿಬ್ಬಂದಿಗಳಾದ ಮಹೇಶ್ ಅಜೇರ್, ರಮೇಶ್ ಎಚ್ ಸಿ, ಮಧುಕೇಶ್ವರ ನಾಯ್ಕ ಪಾಲ್ಗೊಂಡಿದ್ದು ಆರೋಪಿಗಳಿಂದ ಜಿಂಕೆ ಮಾಂಸ ಹಾಗೂ ಕೃತ್ಯಕ್ಕೆ ಬೆಳೆಸಲಾದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…