ಶಿರಸಿ : ಜಿಂಕೆಯನ್ನು ಹತ್ಯೆಗೈದು ಅದರ ಕೊಂಬು, ಕೋಡು ಹಾಗೂ ಮಾಂಸವನ್ನು ಹಣದಾಸೆಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ತಂಡದ ಮೇಲೆ ಖಚಿತ ಮಾಹಿತಿಯನ್ನು ಮೇರೆಗೆ ಬನವಾಸಿ ಅರಣ್ಯ ಅಧಿಕಾರಿಗಳು ಧಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಪ್ರಕರಣದ ಮತ್ತೋರ್ವ ಆರೋಪಿ ನಾಪತ್ತೆ ಯಾಗಿರುವ ಘಟನೆ ಬನವಾಸಿ ಹೋಬಳಿಯ ಕಾನಕೊಪ್ಪದಲ್ಲಿ ನಡೆದಿದೆ.
ಆರೋಪಿಗಳಾದ ಪರಮೇಶ್ವರ ಮಾದೇವ ಮಡಿವಾಳ ಕಾನಕೊಪ್ಪ ಹಾಗೂ ಶಿವಪ್ಪ ಬಸ್ಯಾ ಗೌಡ ಕಾನಕೊಪ್ಪ ಎಂಬುವವರನ್ನು ಬನವಾಸಿ ಅರಣ್ಯ ಅಧಿಕಾರಿಗಳು ಬಂಧಿಸಿದ್ದು ಇನ್ನೋರ್ವ ಆರೋಪಿ ಶಿವರಾಂ ತಿಮ್ಮಾ ನಾಯ್ಕ ಕೆಳಗಿನ ಬ್ಯಾಗದ್ದೆ ಎಂಬಾತ ತಲೆಮರೆಸಿಕೊಂಡಿದ್ದಾನೆ.
ಈ ಮೂವರು ಆರೋಪಿಗಳು ಸೇರಿ ಆಗಸ್ಟ್ 17 ರ ಬೆಳಗಿನ ಜಾವ ಜಿಂಕೆಯನ್ನು ಕೊಂದು ಅದರ ಕೊಂಬು ಹಾಗೂ ಮಾಂಸ ಸೇರಿ ಇನ್ನಿತರ ವಸ್ತುಗಳನ್ನು ಮಾರಾಟ ಮಾಡಿ ಹಣಗಳಿಸಲು ಸಂಚು ರೂಪಿಸಿದ್ದರು.
ಈ ಕುರಿತು ಖಚಿತ ಮಾಹಿತಿಯ ಮೇರೆಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಜ್ಜಯ್ಯ ಜಿ ಆರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಅಶೋಕ್ ಅಲ್ಲಿಗೂರ್ ಇವರ ಮಾರ್ಗದರ್ಶನದಲ್ಲಿ ಬನವಾಸಿ ವಲಯ ಅರಣ್ಯಾಧಿಕಾರಿ ಉಷಾ ಕಬ್ಬೇರ್, ಸಿಬ್ಬಂದಿಗಳಾದ ಮಹೇಶ್ ಅಜೇರ್, ರಮೇಶ್ ಎಚ್ ಸಿ, ಮಧುಕೇಶ್ವರ ನಾಯ್ಕ ಪಾಲ್ಗೊಂಡಿದ್ದು ಆರೋಪಿಗಳಿಂದ ಜಿಂಕೆ ಮಾಂಸ ಹಾಗೂ ಕೃತ್ಯಕ್ಕೆ ಬೆಳೆಸಲಾದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…