ಕೋಲಾರ, ಜುಲೈ 8 : ಪ್ರೇಮದ ಹೆಸರಿನಲ್ಲಿ ತನ್ನ ಗಂಡನನ್ನು ಬಿಟ್ಟು ಓಡಿ ಬಂದ ಮಹಿಳೆಯೊಬ್ಬಳು ಈಗ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಪ್ರೇಮದ ಭರವಸೆ ನೀಡಿ ಗರ್ಭಿಣಿ ಮಾಡಿದ ನಂತರ ಮದುವೆಗೆ ನಿರಾಕರಿಸಿ ಪರಾರಿಯಾಗಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ನಗರದಲ್ಲಿ ಬೆಳಕಿಗೆ ಬಂದಿದೆ.
ಆರ್ ತಿಮ್ಮಸಂದ್ರ ಗ್ರಾಮದ ಸಂಯುಕ್ತಾ ಎಂಬ ಮಹಿಳೆ, ಮದುವೆಯ ಬಳಿಕ ಬೆಂಗಳೂರಿನಲ್ಲಿ ಪತಿ ಹರೀಶ್ ಜೊತೆ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದರು. ಇತ್ತ ಅವರು ಇಲ್ಲಿಯವರೆಗೆ ಸಮಾಧಾನಕರ ಜೀವನವನ್ನೇ ಸಾಗಿಸುತ್ತಿದ್ದರು. ಆದರೆ, ಪತಿಯ ಸ್ನೇಹಿತ ಅಮರನಾಥ್ ಅವರ ಜಿವನದಲ್ಲಿ ಕಾಲಿಟ್ಟು ಎಲ್ಲವನ್ನೂ ಬದಲಾಯಿಸಿದ.
ಅಮರನಾಥ್ ಅವರೊಂದಿಗೆ ದಿನೇದಿನೇ ಬೆಳೆತ ಸಂಪರ್ಕ ಕೊನೆಗೆ ಪ್ರೀತಿಗೆ ವಿಸ್ತರಿತವಾಗಿದ್ದು, “ನಿನ್ನನ್ನು ಮದುವೆಯಾಗದೇ ಉಳಿಯಲಾಗದು” ಎಂಬ ಮಾತುಗಳಿಂದ ಸಂಯುಕ್ತಾಳ ಮನ ಗೆದ್ದಿದ್ದ ಅಮರನಾಥ್ ಮೇಲೆ ಅವಳು ಸಂಪೂರ್ಣವಾಗಿ ನಂಬಿಕೆ ಇಟ್ಟಿದಳು.
ಈ ನಂಬಿಕೆಯ ಬೆಲೆ ಮಾಡದೆ, ಸಂಯುಕ್ತಾ ಗಂಡನನ್ನು ತೊರೆದು ಅಮರನಾಥ್ ಜೊತೆ ಓಡಿ ಬಂದು ಪ್ರೀತಿಯ ಬದುಕು ಪ್ರಯತ್ನಿಸಿದ್ದರು. ವರದಿಗಳ ಪ್ರಕಾರ, ಈ ಇಬ್ಬರ ನಡುವೆ ಕಳೆದ ಮೂರು ವರ್ಷಗಳಿಂದ ಪ್ರೇಮ ಸಂಬಂಧ ಮುಂದುವರಿದಿದ್ದು, ಇದೀಗ ಸಂಯುಕ್ತಾ ಐದು ತಿಂಗಳ ಗರ್ಭಿಣಿಯಾಗಿದ್ದಾಳೆ.
ಆದರೆ ಗರ್ಭಧಾರಣೆಯ ಬಳಿಕ ಅಮರನಾಥ್ ನಿಜವಾಸ್ತವ ಹೊರಹಾಕಿ, ಮದುವೆಗೆ ಒಪ್ಪಿಕೊಳ್ಳದೆ ಆಕೆಯನ್ನು ತಳ್ಳಿಹಾಕಿ ಪರಾರಿಯಾಗಿದ್ದಾನೆ. ಜೀವನದಲ್ಲಿ ನಿರಾಶ್ರಿತಳಾಗಿ ಉಳಿದ ಸಂಯುಕ್ತಾ ಇದೀಗ ನ್ಯಾಯಕ್ಕಾಗಿ ಹೋರಾಟ ಆರಂಭಿಸಿದ್ದಾರೆ.
ಅಂಬೇಡ್ಕರ್ ಅವರ ಚಿತ್ರ ಹಿಡಿದು, ಅಮರನಾಥ್ ಅವರ ಮನೆಯ ಎದುರು ಭಗ್ನ ಪ್ರತಿಭಟನೆ ನಡೆಸುತ್ತಿರುವ ಈ ಮಹಿಳೆಯ ಸ್ಥಿತಿ ಆಕೆಯ ನಂಬಿಕೆಗೆ ದೊರಕಿದ ಪ್ರತಿಫಲವನ್ನು ತೋರಿಸುತ್ತದೆ.
ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದ್ದು, ಅಮರನಾಥ್ನ ವಿರುದ್ಧ ಕಾನೂನು ಕ್ರಮಕ್ಕೆ ಸಿದ್ಧತೆ ನಡೆಯುತ್ತಿದೆ.
ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…