Categories: CorruptionLatest

₹75 ಸಾವಿರ ಲಂಚಕ್ಕೆ ಬೇಡಿಕೆ: ನೀರು ಸರಬರಾಜು ನಿಗಮದ ಇಬ್ಬರು ಇಂಜಿನಿಯರ್‌ಗಳು ಲೋಕಾಯುಕ್ತ ಬಲೆಗೆ

ನೀರು ಮತ್ತು ಒಳಚರಂಡಿ ಕಾಮಗಾರಿಯ ಎಸ್ಟಿಮೇಟ್‌ಗೆ ಅನುಮೋದನೆ ನೀಡಲು ₹75 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ನಿಗಮದ ಇಬ್ಬರು ಇಂಜಿನಿಯರ್‌ಗಳನ್ನು ಲೋಕಾಯುಕ್ತ ಅಧಿಕಾರಿಗಳು ಬಳ್ಳಾರಿಯಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಅಶೋಕ್ ಮತ್ತು ಕಾಶಿನಾಥ್ ಎಂದು ಗುರುತಿಸಲಾಗಿದೆ. ಇವರು ರಿಯಲ್ ಎಸ್ಟೇಟ್ ಉದ್ಯಮಿ ವೀರೇಶ್ ಅವರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಖಾಸಗಿ ಲೇಔಟ್‌ಗೆ ಅಗತ್ಯ ಅನುಮೋದನೆ ನೀಡಲು ಹಣ ನೀಡುವಂತೆ ಒತ್ತಾಯಿಸಿದ್ದರು ಎನ್ನಲಾಗಿದೆ.

ಬಳ್ಳಾರಿಯ 2.47 ಎಕರೆ ವಿಸ್ತೀರ್ಣದ ಖಾಸಗಿ ಲೇಔಟ್‌ಗೆ ಅನುಮತಿ ನೀಡುವ ಸಂಬಂಧ ಒಟ್ಟು ₹75 ಸಾವಿರ ಲಂಚ ಕೇಳಲಾಗಿತ್ತು. ಅದರಂತೆ ಮೊದಲ ಕಂತಾಗಿ ₹55 ಸಾವಿರವನ್ನು ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನೂ ರೆಡ್‌ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ.

ಲಂಚವಾಗಿ ಪಡೆದ ಹಣವನ್ನು ಇಬ್ಬರೂ ಹಂಚಿಕೊಳ್ಳುತ್ತಿದ್ದ ಸಂದರ್ಭದಲ್ಲೇ ಲೋಕಾಯುಕ್ತ ತಂಡ ಕಾರ್ಯಾಚರಣೆ ನಡೆಸಿ ಬಂಧಿಸಿದೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

ಭ್ರಷ್ಟರ ಬೇಟೆ

Recent Posts

ಲೀಲಾ ದೂರವಾದ ಕೋಪ: ಮನೆಗೆ ನುಗ್ಗಿ ತಾಯಿಯ ಮೇಲೆ ಸೈಕಲ್ ಎತ್ತಿ ಹಾಕಿದ ಮಂಜ!

ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…

16 hours ago

ಮದುವೆಯ ಆಸೆ ತೋರಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ, ₹10 ಸಾವಿರ ಕಳುಹಿಸಿ ಕೈ ತೊಳೆದುಕೊಳ್ಳಲು ಮುಂದಾದ SI ವಿರುದ್ಧ ಕೇಸ್!

ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…

17 hours ago

ಪ್ರೀತಿಯ ಹೆಸರಲ್ಲಿ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ: ಯುವತಿ ಆತ್ಮಹತ್ಯೆ; ಪ್ರಿಯಕರನ ವಿರುದ್ಧ ಕೇಸ್

ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…

17 hours ago

ಪತಿ-ಪ್ರೇಮಿ ಇಬ್ಬರ ಜತೆಗೂ ಸಂಸಾರಕ್ಕೆ ಅನುಮತಿ ಕೊಡಿ! ಪೊಲೀಸರ ಮುಂದೆ ಮಹಿಳೆಯ ವಿಚಿತ್ರ ಬೇಡಿಕೆ

ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…

17 hours ago

ರೈಲಿನ ಸೂಟ್‌ಕೇಸ್‌ನಲ್ಲಿ ಮಾನವ ದೇಹದ ತುಂಡುಗಳು; ತನಿಖೆ ವೇಳೆ ಬಯಲಾಯ್ತು ಬೆಚ್ಚಿಬೀಳಿಸುವ ರಹಸ್ಯ!

ತಮಿಳುನಾಡಿನ ಚೆನ್ನೈನಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆಗೈದು, ಆಕೆಯ ದೇಹದ ಭಾಗಗಳನ್ನು ಬಳಸಿ ಬಿರಿಯಾನಿ ತಯಾರಿಸಿರುವ ಆರೋಪ ಕೇಳಿಬಂದಿದ್ದು, ಇಡೀ ಪ್ರಕರಣವೇ…

17 hours ago

ಚನ್ನರಾಯಪಟ್ಟಣದಲ್ಲಿ ಯುವತಿ ಆತ್ಮಹತ್ಯೆ; ಪ್ರೇಮ ವೈಫಲ್ಯ ಎಂದು ಕುಟುಂಬಸ್ಥರ ಅನುಮಾನ

ಚನ್ನರಾಯಪಟ್ಟಣ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕುಟುಂಬಸ್ಥರು…

17 hours ago