ಶಿವಮೊಗ್ಗದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಮುಖ್ಯಸ್ಥನಾಗಿ ಸೇವೆ ಸಲ್ಲಿಸುತ್ತಿದ್ದ ಕೃಷ್ಣಪ್ಪ ಲಂಚದ ಆರೋಪದಲ್ಲಿ ಇಂದು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಇದೇ ಅವರು ಅಧಿಕೃತವಾಗಿ ನಿವೃತ್ತಿಯಾಗಬೇಕಿದ್ದ ದಿನ. ಆದರೆ ಕರ್ತವ್ಯದ ಕೊನೆಯ ದಿನವೇ ಅವಮಾನಕರ ಅಂತ್ಯ ಕಂಡಿದ್ದಾರೆ.
ಮುಂಬೈ ಮೂಲದ ಕಂಪನಿಯೊಂದರಿಂದ ಟಿವಿ ಮತ್ತು ಎಲ್ಇಡಿ ಪರದೆ ಅಳವಡಿಕೆ ಸಂಬಂಧದ ಬಿಲ್ ಮುಂದುವರೆಸಲು 1 ಲಕ್ಷ ರೂಪಾಯಿ ಲಂಚಕ್ಕಾಗಿ ಕೃಷ್ಣಪ್ಪ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಎದುರಾಗಿದೆ. ಹಣ ಪಡೆದ ಕ್ಷಣದಲ್ಲೇ ಲೋಕಾಯುಕ್ತ ಪೊಲೀಸರು ಅವರನ್ನು ಬಲೆಗೆ ಬಿದಿದ್ದಾರೆ.
ಈ ಹಿಂದೆ ಲಂಚ ನೀಡದಿದ್ದರೆ “ಕಂಪನಿಯ ಸೇವೆ ತೊಂದರೆದಾಯಕವಾಗಿದೆ” ಎಂಬ ಷರಾ ಬರೆಯುತ್ತೇನೆ ಎಂದು ಬೆದರಿಕೆ ಹಾಕಿದ್ದೂ ವರದಿಯಾಗಿದೆ. ಇಂದು ಅವರು ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಿಗೆ ಅಧಿಕಾರ ಹಸ್ತಾಂತರಿಸಿ ನಿವೃತ್ತಿ ಪಡೆಯಬೇಕಿತ್ತು. ಆದರೆ ನಿರೀಕ್ಷಿತ ಗೌರವಮಯ ವಿದಾಯದ ಬದಲು, ಲಂಚದ ಚಟುವಟಿಕೆಯಿಂದಲೇ ಬಂಧನದ ಚಪಲ ಅಂತ್ಯ ಎದುರಾದ ಘಟನೆ ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಅರಣ್ಯ ಇಲಾಖೆಯಲ್ಲಿಯೂ ಸೇವೆ ಸಲ್ಲಿಸಿದ್ದ ಕೃಷ್ಣಪ್ಪ, ಸ್ಮಾರ್ಟ್ ಸಿಟಿ ಯೋಜನೆಯ ಪ್ರಮುಖ ಅಧಿಕಾರಿಯಾಗಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಆದರೆ ಕೊನೆಯ ದಿನವೇ ಉಜ್ವಲ ವೃತ್ತಿಯು ಕಪ್ಪು ಹದಿಯ ಅಂತ್ಯ ಕಂಡಿರುವುದು ಶೋಚನೀಯ.
ಕರ್ನಾಟಕ ಹೈಕೋರ್ಟ್ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…