Latest

ಸೇವೆಯ ಕೊನೆಯ ದಿನವೇ ಲಂಚದ ಬೇಡಿಕೆ: ಲೋಕಾಯುಕ್ತ ಬಲೆಗೆ ಬಿದ್ದ ಶಿವಮೊಗ್ಗ ಸ್ಮಾರ್ಟ್ ಸಿಟಿ ಅಧಿಕಾರಿ.

ಶಿವಮೊಗ್ಗದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಮುಖ್ಯಸ್ಥನಾಗಿ ಸೇವೆ ಸಲ್ಲಿಸುತ್ತಿದ್ದ ಕೃಷ್ಣಪ್ಪ ಲಂಚದ ಆರೋಪದಲ್ಲಿ ಇಂದು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಇದೇ ಅವರು ಅಧಿಕೃತವಾಗಿ ನಿವೃತ್ತಿಯಾಗಬೇಕಿದ್ದ ದಿನ. ಆದರೆ ಕರ್ತವ್ಯದ ಕೊನೆಯ ದಿನವೇ ಅವಮಾನಕರ ಅಂತ್ಯ ಕಂಡಿದ್ದಾರೆ.

ಮುಂಬೈ ಮೂಲದ ಕಂಪನಿಯೊಂದರಿಂದ ಟಿವಿ ಮತ್ತು ಎಲ್‌ಇಡಿ ಪರದೆ ಅಳವಡಿಕೆ ಸಂಬಂಧದ ಬಿಲ್ ಮುಂದುವರೆಸಲು 1 ಲಕ್ಷ ರೂಪಾಯಿ ಲಂಚಕ್ಕಾಗಿ ಕೃಷ್ಣಪ್ಪ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಎದುರಾಗಿದೆ. ಹಣ ಪಡೆದ ಕ್ಷಣದಲ್ಲೇ ಲೋಕಾಯುಕ್ತ ಪೊಲೀಸರು ಅವರನ್ನು ಬಲೆಗೆ ಬಿದಿದ್ದಾರೆ.

ಈ ಹಿಂದೆ ಲಂಚ ನೀಡದಿದ್ದರೆ “ಕಂಪನಿಯ ಸೇವೆ ತೊಂದರೆದಾಯಕವಾಗಿದೆ” ಎಂಬ ಷರಾ ಬರೆಯುತ್ತೇನೆ ಎಂದು ಬೆದರಿಕೆ ಹಾಕಿದ್ದೂ ವರದಿಯಾಗಿದೆ. ಇಂದು ಅವರು ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಿಗೆ ಅಧಿಕಾರ ಹಸ್ತಾಂತರಿಸಿ ನಿವೃತ್ತಿ ಪಡೆಯಬೇಕಿತ್ತು. ಆದರೆ ನಿರೀಕ್ಷಿತ ಗೌರವಮಯ ವಿದಾಯದ ಬದಲು, ಲಂಚದ ಚಟುವಟಿಕೆಯಿಂದಲೇ ಬಂಧನದ ಚಪಲ ಅಂತ್ಯ ಎದುರಾದ ಘಟನೆ ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಅರಣ್ಯ ಇಲಾಖೆಯಲ್ಲಿಯೂ ಸೇವೆ ಸಲ್ಲಿಸಿದ್ದ ಕೃಷ್ಣಪ್ಪ, ಸ್ಮಾರ್ಟ್ ಸಿಟಿ ಯೋಜನೆಯ ಪ್ರಮುಖ ಅಧಿಕಾರಿಯಾಗಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಆದರೆ ಕೊನೆಯ ದಿನವೇ ಉಜ್ವಲ ವೃತ್ತಿಯು ಕಪ್ಪು ಹದಿಯ ಅಂತ್ಯ ಕಂಡಿರುವುದು ಶೋಚನೀಯ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

8 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

8 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

8 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

8 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago