Categories: Latest

ಉತ್ತರ ಕನ್ನಡದ ಪರಿಸರಕ್ಕೆ ಮಾರಕವಾದ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆ ಕೈಬಿಡಲು ಆಗ್ರಹ

ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸರ್ಕಾರ ಪ್ರಸ್ತಾಪಿಸಿರುವ ಬೇಡ್ತಿ–ಗಂಗಾವಳಿ ನದಿ ತಿರುವು ಯೋಜನೆ ಹಾಗೂ ಅಘನಾಶಿನಿ ನದಿ ತಿರುವು ಯೋಜನೆಯನ್ನು ತಕ್ಷಣ ಕೈಬಿಡುವಂತೆ ಒತ್ತಾಯಿಸಿ ಪರಿಸರ ಪ್ರೇಮಿಗಳು ಮತ್ತು ಸ್ಥಳೀಯ ನಾಗರಿಕರು ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಈ ಯೋಜನೆಗಳಿಂದ ಜಿಲ್ಲೆಯ ಪರಿಸರ ಸಮತೋಲನಕ್ಕೆ ಭಾರೀ ಹಾನಿಯಾಗುವ ಸಾಧ್ಯತೆ ಇದೆ ಎಂದು ಮನವಿಯಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ. ವಿಶೇಷವಾಗಿ ಶಿರಸಿ ತಾಲೂಕಿನ ಪಟ್ಟಣದಹೊಳೆ, ಶಾಲ್ಮಲಾ ನದಿ ಹಾಗೂ ಸುತ್ತಮುತ್ತಲಿನ ಅರಣ್ಯ ಪ್ರದೇಶಗಳು ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಹೇಳಲಾಗಿದೆ.

ಯೋಜನೆ ಜಾರಿಯಾದಲ್ಲಿ ಸಾವಿರಾರು ಎಕರೆ ಅರಣ್ಯ ಪ್ರದೇಶ ನಾಶವಾಗುವ ಜೊತೆಗೆ ಅಪರೂಪದ ಜೀವ ವೈವಿಧ್ಯತೆ ಮತ್ತು ನದಿ ತೀರದ ಅರಣ್ಯ ಸಂಪತ್ತು ಹಾನಿಗೊಳಗಾಗಲಿದೆ. ಇದರಿಂದ ರೈತರು, ಮೀನುಗಾರರು ಹಾಗೂ ಅರಣ್ಯಾಧಾರಿತ ಜೀವನ ನಡೆಸುತ್ತಿರುವ ವನವಾಸಿಗಳ ಜೀವನೋಪಾಯಕ್ಕೂ ದೊಡ್ಡ ಹೊಡೆತ ಬೀಳಲಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಬೇಡ್ತಿ ನದಿ ತಿರುವು ಯೋಜನೆಯಿಂದ ಶಿರಸಿ ಮತ್ತು ಯಲ್ಲಾಪುರ ತಾಲೂಕಿನ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ಕೃಷಿ ಚಟುವಟಿಕೆಗಳ ಮೇಲೆಯೂ ಪ್ರತಿಕೂಲ ಪರಿಣಾಮ ಬೀರುವುದರಿಂದ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೀರಿನ ಸಮಸ್ಯೆಗೆ ನದಿ ತಿರುವು ಯೋಜನೆಗಳೇ ಪರಿಹಾರವಲ್ಲ. ಬದಲಾಗಿ ಮಳೆನೀರು ಸಂಗ್ರಹಣೆ, ಸ್ಥಳೀಯ ಕೆರೆಗಳ ಪುನರುಜ್ಜೀವನ ಹಾಗೂ ಜಲಸಂರಕ್ಷಣಾ ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಮೂಲಕ ಸಮಸ್ಯೆ ಪರಿಹರಿಸಬಹುದು ಎಂದು ಮನವಿದಾರರು ಅಭಿಪ್ರಾಯಪಟ್ಟಿದ್ದಾರೆ.

ಮುಖ್ಯಮಂತ್ರಿಗಳಿಗೆ ಸಲ್ಲಿಸಿರುವ ಮನವಿಯ ಪ್ರತಿಯನ್ನು ಜಲಸಂಪನ್ಮೂಲ ಇಲಾಖೆ, ಉತ್ತರ ಕನ್ನಡ ಜಿಲ್ಲಾಧಿಕಾರಿ ಹಾಗೂ ಸಂಬಂಧಿತ ಉಪ ವಿಭಾಗಾಧಿಕಾರಿಗಳಿಗೂ ಕಳುಹಿಸಲಾಗಿದೆ. ಪರಿಸರ ಮತ್ತು ಜನಜೀವನದ ಹಿತದೃಷ್ಟಿಯಿಂದ ಈ ಯೋಜನೆಗಳನ್ನು ಸರ್ಕಾರ ಮರುಪರಿಶೀಲಿಸಿ ಕೈಬಿಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

11 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

11 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

11 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

11 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

12 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

12 hours ago