Categories: Latest

ರಾಪಿಡೋ, ಓಲಾ, ಉಬರ್ ಬೈಕ್ ಟ್ಯಾಕ್ಸಿ ಸೇವೆ ನಿಷೇಧಕ್ಕೆ ಆಗ್ರಹ; ಜಿಲ್ಲಾಧಿಕಾರಿಗೆ ಶಿರಸಿ ಆಟೋ ಚಾಲಕರ ಸಂಘ ಮನವಿ

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಓಲಾ, ಉಬರ್ ಹಾಗೂ ರಾಪಿಡೋ ಬೈಕ್ ಟ್ಯಾಕ್ಸಿ ಸೇವೆಗಳನ್ನು ತಕ್ಷಣವೇ ನಿಷೇಧಿಸಬೇಕು ಎಂದು ಆಗ್ರಹಿಸಿ ಉತ್ತರ ಕನ್ನಡ ಜಿಲ್ಲಾ ಆಟೋ ರಿಕ್ಷಾ ಚಾಲಕ/ಮಾಲಕರ ಕ್ಷೇಮಾಭಿವೃದ್ಧಿ ಸಂಘವು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.

ಶಿರಸಿ ತಾಲೂಕು ಸೇರಿದಂತೆ ಜಿಲ್ಲೆಯಾದ್ಯಂತ ಬೈಕ್ ಟ್ಯಾಕ್ಸಿ ಸೇವೆಗಳು ಮೋಟಾರು ವಾಹನ ಕಾಯ್ದೆ-1988ರ ನಿಯಮಗಳನ್ನು ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿವೆ ಎಂದು ಸಂಘ ಆರೋಪಿಸಿದೆ. Motor Vehicles Act, 1988ರ ಸೆಕ್ಷನ್ 2(47)ರ ಪ್ರಕಾರ ಸಾರಿಗೆ ವಾಹನಗಳಿಗೆ ಸೂಕ್ತ ಪರವಾನಗಿ ಅಗತ್ಯವಾಗಿದ್ದು, ಪರವಾನಗಿ ಇಲ್ಲದೆ ಬೈಕ್‌ಗಳಲ್ಲಿ ಪ್ರಯಾಣಿಕರನ್ನು ಸಾಗಿಸುವುದು ಸೆಕ್ಷನ್ 39 ಹಾಗೂ 66ರ ಉಲ್ಲಂಘನೆಯಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಜಿಲ್ಲೆಯಲ್ಲಿ ಸುಮಾರು 7,000ಕ್ಕೂ ಹೆಚ್ಚು ಆಟೋ ರಿಕ್ಷಾ ಹಾಗೂ 1,000ಕ್ಕೂ ಹೆಚ್ಚು ಕ್ಯಾಬ್ ಚಾಲಕರು ಜೀವನೋಪಾಯಕ್ಕಾಗಿ ಈ ವೃತ್ತಿಯನ್ನು ಅವಲಂಬಿಸಿದ್ದಾರೆ. ಬೈಕ್ ಟ್ಯಾಕ್ಸಿ ಸೇವೆಗಳ ಹೆಚ್ಚಳದಿಂದ ಅವರ ಆದಾಯಕ್ಕೆ ತೀವ್ರ ಹೊಡೆತ ಬಿದ್ದಿದ್ದು, ವಿಶೇಷವಾಗಿ ಗ್ರಾಮೀಣ ಪ್ರದೇಶದ ಆಟೋ ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಸಂಘ ತಿಳಿಸಿದೆ.

ಪರವಾನಗಿ, ಸೂಕ್ತ ವಿಮೆ ಹಾಗೂ ಇತರೆ ಅಗತ್ಯ ದಾಖಲೆಗಳಿಲ್ಲದೆ ಪ್ರಯಾಣಿಕರನ್ನು ಸಾಗಿಸಲಾಗುತ್ತಿದ್ದು, ಅಪಘಾತ ಸಂಭವಿಸಿದರೆ ಅದರ ಹೊಣೆ ಯಾರು ಎಂಬ ಪ್ರಶ್ನೆಯನ್ನೂ ಸಂಘ ಎತ್ತಿದೆ.

ಈ ಸಂಬಂಧ ಈಗಾಗಲೇ 2026ರ ಫೆಬ್ರವರಿ 12ರಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಮತ್ತೊಮ್ಮೆ ತುರ್ತು ಕ್ರಮಕ್ಕೆ ಆಗ್ರಹಿಸಲಾಗಿದೆ.

ಬೈಕ್ ಟ್ಯಾಕ್ಸಿ ಸೇವೆಗಳನ್ನು ತಕ್ಷಣ ನಿಷೇಧಿಸುವುದು, ಓಲಾ, ಉಬರ್ ಹಾಗೂ ರಾಪಿಡೋ ಕಂಪನಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದು, ಬಿಳಿ ಬೋರ್ಡ್ ಬೈಕ್‌ಗಳಲ್ಲಿ ಅಕ್ರಮವಾಗಿ ಪ್ರಯಾಣಿಕರನ್ನು ಸಾಗಿಸುವವರ ವಿರುದ್ಧ ಪ್ರಕರಣ ದಾಖಲಿಸಿ ವಾಹನಗಳನ್ನು ಜಪ್ತಿ ಮಾಡುವುದು ಹಾಗೂ ಆಟೋ ಚಾಲಕರ ಹಿತಾಸಕ್ತಿ ಕಾಪಾಡುವಂತೆ ಸ್ಪಷ್ಟ ಆದೇಶ ಹೊರಡಿಸುವಂತೆ ಸಂಘವು ಮನವಿ ಮಾಡಿದೆ.

ಈ ಮನವಿಯ ಪ್ರತಿಯನ್ನು ಪೊಲೀಸ್ ವರಿಷ್ಠಾಧಿಕಾರಿ ಕಾರವಾರ, ಶಿರಸಿ ಸಹಾಯಕ ಆಯುಕ್ತರು, ಶಿರಸಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಸಲ್ಲಿಸಲಾಗಿದೆ.

ಭ್ರಷ್ಟರ ಬೇಟೆ

Recent Posts

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

12 hours ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

12 hours ago

ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಗೆ ಭೂಸ್ವಾಧೀನ ಅಧಿಕೃತ ಚಾಲನೆ

163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…

12 hours ago

ಪಾಂಡೆಗಾಂವ–ಕಂಗೋಳಿ ರಸ್ತೆ ಕೆಸರಿನ ಹೊಂಡ: ಜನರ ಆಕ್ರೋಶ, ಕಾಮಗಾರಿ ವಿಳಂಬವಾದರೆ ರಸ್ತೆ ತಡೆ ಎಚ್ಚರಿಕೆ

ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…

12 hours ago

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

1 day ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

1 day ago