ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಖಾತೆ ಮಾಡಿಕೊಡುವ ಹೆಸರಿನಲ್ಲಿ ಹಣದ ಬೇಡಿಕೆ ಇಟ್ಟಿದ್ದ ಪಿಡಿಓ ಗೀತಾಮಣಿ, ಮೂರನೇ ವ್ಯಕ್ತಿಯ ಮುಖಾಂತರ ಲಂಚ ಸ್ವೀಕರಿಸಲು ಯತ್ನಿಸಿದ್ದರೆಂಬುದು ತಿಳಿದುಬಂದಿದೆ. ದೂರು ಆಧರಿಸಿ ಲೋಕಾಯುಕ್ತ ಅಧಿಕಾರಿಗಳು ಬಲೆ ಬೀಸಿ ಕಾರ್ಯಾಚರಣೆ ನಡೆಸಿದರು.
ಲೋಕಾಯುಕ್ತ ಡಿ ವೈ ಎಸ್ ಪಿ ಗೌತಮ್ ಅವರ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ, ಪಿಡಿಓ ಗೀತಾಮಣಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿಯಲಾಗಿದೆ. ಈ ವೇಳೆ ಲಂಚದ ಹಣವನ್ನು ವಶಪಡಿಸಿಕೊಂಡಿರುವುದಾಗಿ ತಿಳಿದುಬಂದಿದೆ.
ಈ ಘಟನೆ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಭ್ರಷ್ಟಾಚಾರ ಮುಂದುವರಿಯುತ್ತಿರುವುದನ್ನು ಮತ್ತೊಮ್ಮೆ ಬಹಿರಂಗಪಡಿಸಿದೆ. ಪ್ರಕರಣದ ಕುರಿತಾಗಿ ಲೋಕಾಯುಕ್ತ ಅಧಿಕಾರಿಗಳು ಮುಂದಿನ ತನಿಖೆ ಕೈಗೊಂಡಿದ್ದಾರೆ.
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…
ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…
ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…
ಪ್ರಯಾಗ್ರಾಜ್: ಡೇಟಿಂಗ್ ಆ್ಯಪ್ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…