ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನಲ್ಲಿ ರೈತನೊಬ್ಬನಿಗೆ ಪೋಡಿ ಮಾಡಿಕೊಡುವ ನಿಟ್ಟಿನಲ್ಲಿ ಲಂಚ ಬೇಡಿಕೆಯಿಟ್ಟಿದ್ದ ಸರ್ವೆ ಕಚೇರಿ ಮೇಲ್ವಿಚಾರಕನ ವಿರುದ್ಧ ಲೋಕಾಯುಕ್ತ ದಾಳಿ ನಡೆಸಿದ್ದು, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ವಕೀಲ ಸೋಮನಾಥ್ ಅವರ ದೂರಿನ ಆಧಾರದಲ್ಲಿ ಲೋಕಾಯುಕ್ತ ಡಿವೈಎಸ್ಪಿ ಜೆ.ಎಚ್. ಇನಾಮದಾರ ಅವರ ನೇತೃತ್ವದಲ್ಲಿ ಬುಧವಾರ ದಾಳಿ ನಡೆದಿದೆ. ಸರ್ವೆ ಮೇಲ್ವಿಚಾರಕ ಮಲ್ಲಿಕಾರ್ಜುನ ಎಂಬವರು ಫಾರಂ ನಂ.10 ರ ಮೂಲಕ ಪೋಡಿ ಪ್ರಕ್ರಿಯೆ ಮಾಡಲು ₹20,000 ಲಂಚವನ್ನು ರೈತನಿಂದ ಬೇಡಿದ್ದಾಗಿ ಆರೋಪಿಸಲಾಗಿದೆ. ಈ ಪೈಕಿ ₹19,000 ಮೊತ್ತವನ್ನು ಫೋನ್ ಪೇ ಮೂಲಕ ಪಡೆದಿರುವುದೂ ದೃಢಪಟ್ಟಿದೆ.
ಘಟನೆಯ ಕುರಿತು ಪರಿಶೀಲನೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಮಲ್ಲಿಕಾರ್ಜುನ ಅವರನ್ನು ವಶಕ್ಕೆ ಪಡೆದು, ವಿಚಾರಣೆಗೆ ಒಳಪಡಿಸಿದ್ದಾರೆ.
“ತನಿಖೆ ಪ್ರಗತಿಯಲ್ಲಿದ್ದು, ಹೆಚ್ಚಿನ ಮಾಹಿತಿಯನ್ನು ಮುಂದಿನ ಹಂತದಲ್ಲಿ ಪ್ರಕಟಿಸಲಾಗುವುದು,” ಎಂದು ಡಿವೈಎಸ್ಪಿ ಇನಾಮದಾರ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…
ಬೆಂಗಳೂರು: ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು ಮಾಡಿದ್ದ ಆರೋಪದ ಮೇಲೆ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು…